Fact Check | ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಉತ್ಸವ ಮೂರ್ತಿಗೆ ಜಿಹಾದಿಗಳು ನೀರು ಎರಚಿದ್ದಾರೆಂಬುದು ಸುಳ್ಳು

“ನಂಜನಗೂಡಿನಲ್ಲಿ ಅಂಧಕಾಸುರ ಸಂಹಾರದ ದಿನಾಚರಣೆಯ ಸಂದರ್ಭದಲ್ಲಿ ಪಾರ್ವತಿ-ಶಿವನ ಉತ್ಸವ ಮೂರ್ತಿ ಮೆರವಣಿಗೆಯ ವೇಳೆ ಜಿಹಾದಿಗಳು ಮೂರ್ತಿಗೆ ನೀರು ಎರಚಿ ಅವಮಾನಿಸಿದರು. ಹಿಂದೂಗಳು ಎಚ್ಚೆತ್ತುಕೊಳ್ಳಬೇಕು” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆದರೆ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಸಾಕಷ್ಟು ಮಂದಿ ಇದೇ ಸುದ್ದಿಯನ್ನು ನಿಜವೆಂದು ಭಾವಿಸಿ ಹಂಚಿಕೊಳ್ಳುತ್ತಿದ್ದಾರೆ. ನಂಜನಗೂಡು ಶ್ರೀ ಕಂಟೇಶ್ವರನಿಗೆ ಅಪಮಾನ ಕೆಲ ಜಿಹಾದಿಗಳು ಎಂಜಲು ನೀರು ಎರಚಿ ಅಪಮಾನಿಸಿದ್ದಾರೆ ಅಲ್ಲಿನ ಹಿಂದೂಗಳು ಇನ್ನಾ ಬದುಕಿದ್ದೀರಾ 😡😡😡 pic.twitter.com/r87R9YNtAF — wHatNext 🚩 (@raghunmurthy07)…

Read More

Fact Check | ವಿಠ್ಠಲ್, ವಿಠ್ಠಲ್’ ಮಂತ್ರ ಪಠಿಸುವುದರಿಂದ ಹೃದಯಾಘಾತವನ್ನು ತಡೆಯಲಾಗುವುದಿಲ್ಲ

“ಪ್ರತಿದಿನ 9-10 ನಿಮಿಷಗಳ ಕಾಲ ‘ವಿಠ್ಠಲ, ವಿಠ್ಠಲ’ ಮಂತ್ರವನ್ನು ಪಠಿಸುವುದರಿಂದ ಹೃದಯಾಘಾತವನ್ನು ತಡೆಯಬಹುದು ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಗುಣವಾಗುತ್ತದೆ. ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.” ಇದನ್ನೇ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್‌ ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ‘ಏಷ್ಯನ್ ಜರ್ನಲ್ ಆಫ್ ಕಾಂಪ್ಲಿಮೆಂಟರಿ ಅಂಡ್ ಆಲ್ಟರ್ನೇಟಿವ್ ಮೆಡಿಸಿನ್‘ 30 ವ್ಯಕ್ತಿಗಳ ಮೇಲೆ ನಡೆಸಿದ ಅಧ್ಯಯನದ ಪ್ರಕಾರ, 10 ದಿನಗಳಲ್ಲಿ ಪ್ರತಿದಿನ 9 ನಿಮಿಷಗಳ ಕಾಲ ‘ವಿಠ್ಠಲ್,…

Read More

Fact Check | ರತನ್‌ ಟಾಟಾ ಅವರು ಭಾರತೀಯ ಸೇನೆಗೆ ಬುಲೆಟ್‌ ಮತ್ತು ಬಾಂಬ್‌ ಪ್ರೂಫ್‌ ಬಸ್‌ ನೀಡಿಲ್ಲ

“ಇತ್ತೀಚೆಗೆ ರತನ್ ಟಾಟಾ ಅವರು ಭಾರತೀಯ ಸೇನೆಗೆ ಬುಲೆಟ್ ಮತ್ತು ಬಾಂಬ್ ಪ್ರೂಫ್ ಬಸ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಅವರ ಈ ಕಾರ್ಯಕ್ಕೆ ಮೆಚ್ಚುಗೆ ಇರಲಿ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸಾಕಷ್ಟು ಮಂದಿ ರತನ್ ಟಾಟಾ ಅವರು ಭಾರತೀಯ ಸೇನೆಗಾಗಿ ಹಲವು ರೀತಿಯ ಉಡುಗೊರೆಯನ್ನು ನೀಡಲಿದ್ದಾರೆ ಎಂಬ ರೀತಿಯಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೇ ರೀತಿಯ ಬಸ್ಸಿನ ವಾಹನವನ್ನು ಹಲವಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡು ಇದು…

Read More

ಸಾಯಿಬಾಬಾ ಮುಸ್ಲಿಂ ಎಂಬುದಕ್ಕೆ ಆಧಾರಗಳಿಲ್ಲ, ಸುಪ್ರೀಂ ಕೋರ್ಟ್‌ನಲ್ಲಿ ಸಾಯಿ ಟ್ರಸ್ಟ್ ಕ್ಷಮೆ ಕೇಳಿಲ್ಲ

“ಸಾಕ್ಷ್ಯದ ಆಧಾರದಲ್ಲಿ ಸಾಯಿಬಾಬಾ ಮುಸ್ಲಿಂ ಎಂದು ಸಾಬೀತಾಯಿತು. ಸುಪ್ರೀಂ ಕೋರ್ಟ್‌ನಲ್ಲಿ ಸ್ವಾಮಿ ಸ್ವರೂಪಾನಂದ ಸರಸ್ವತಿಯ ಕ್ಷಮೆಯಾಚಿಸಿದ ಸಾಯಿ ಟ್ರಸ್ಟ್… ಹಿಂದೂಗಳು ಎಲ್ಲಾ ದೇವಾಲಯಗಳಿಂದ ಸಾಯಿಬಾಬಾರವರ ವಿಗ್ರಹವನ್ನು ತೆಗೆಯಲು ಪ್ರಾರಂಭಿಸಿದರು. ಅಬ್ದುಲ್ ರ ಮಕ್ಕಳು ಮಾತ್ರ ಸಾಯಿಬಾಬಾನನ್ನು ಪೂಜಿಸುತ್ತಾರೆ” ಎಂಬ ಬರಹದೊಂದಿಗೆ ವಿಡಿಯೋವೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಹಿಂದೂ ರಾಷ್ಟ್ರ ಶಕ್ತಿ ಕಾರ್ಯಕರ್ತರು, ‘ಶಿರಡಿ ಸಾಯಿಬಾಬ ಮುಸ್ಲಿಂ ಸಮುದಾಯಕ್ಕೆ ಸೇರಿದವರಾದ್ದರಿಂದ ಹಿಂದೂ ದೇವಸ್ಥಾನಗಳಲ್ಲಿ ಅವರ ಮೂರ್ತಿಗಳನ್ನು ತೆಗೆಯಬೇಕು’ ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸುವುದನ್ನು ನೋಡಬಹುದಾಗಿದೆ. ಈ ವಾದದ…

Read More

Fact Check | ಕೆನಡಾದಲ್ಲಿರುವ ಹನುಮಂತನ ವಿಗ್ರಹದ ಸುತ್ತಮುತ್ತ ಮಲದ ರಾಶಿ ಕಂಡು ಬಂದಿದೆ ಎಂಬ ವರದಿ ನಕಲಿ

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವರು ಹನುಮಾನ್ ಪ್ರತಿಮೆಯ ಸುತ್ತಲೂ ಮಾನವ ಮಲದ ರಾಶಿಗಳು ಕಂಡುಬಂದಿವೆ ಎಂಬ ಶೀರ್ಷಿಕೆಯಲ್ಲಿ ‘ಟೊರೊಂಟೊ ಸನ್’ ಸುದ್ದಿ ಪ್ರಕಟಿಸಿದೆ ಎಂದು ವರದಿಯ ಸ್ಕ್ರೀನ್‌ಶಾಟ್‌ನೊಂದಿಗೆ ಪೋಸ್ಟ್‌ವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವರದಿಯನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಶೇರ್‌ ಕೂಡ ಮಾಡುತ್ತಿದ್ದಾರೆ. ಇನ್ನು ‘ಟೊರೊಂಟೊ ಸನ್’ ವರದಿಯ ಫೋಟೋವನ್ನು ಗಮನಿಸಿದಾಗ ಇದರಲ್ಲಿನ ಅಕ್ಷರಗಳು ಅಸ್ಪಷ್ಟವಾಗಿ ಸ್ವಲ್ಪ ಬದಲಾವಣೆಯೊಂದಿಗೆ ಕಂಡು ಬಂದಿದ್ದು, ಶೀರ್ಷಿಕೆ ಮಾತ್ರ ಸ್ಪಷ್ಟವಾಗಿ ಗೋಚರಿಸುತ್ತಿದೆ. ಹೀಗಾಗಿ…

Read More

Fact Check | ಅಯೋಧ್ಯೆಯ ರಾಮಮಂದಿರದ ಅಧಿಕಾರಿಗಳು ದಲಿತ ಬಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಅಯೋಧ್ಯೆಯಲ್ಲಿ ದಲಿತ ಬಾಲಕನ ಮೇಲೆ ರಾಮಮಂದಿರದ ಅಧಿಕಾರಿಗಳು ಹೇಗೆ ಹಲ್ಲೆ ನಡೆಸುತ್ತಿದ್ದಾರೆಂದು. ಇದು ನಿಜಕ್ಕೂ ಆಘಾತಕಾರಿ.” ಎಂದು ವ್ಯಕ್ತಿಯೊಬ್ಬ ಬಾಲಕನನ್ನು ಥಳಿಸುತ್ತಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನಾನಾ ಬರಹಗಳೊಂದಿಗೆ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋದಲ್ಲಿ ಸೂಕ್ಷ್ಮವಾಗಿ ಗಮನಿಸಿದಾಗ ಇಬ್ಬರು ವ್ಯಕ್ತಿಗಳು ಸಮವಸ್ತ್ರ ಧರಿಸಿದ ಬಾಲಕನೊಬ್ಬನನ್ನು ರಸ್ತೆಯ ಮೇಲೆಯೇ ಮನಸ್ಸೋ ಇಚ್ಛೆ ಥಳಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಇದೇ ವಿಡಿಯೋದಲ್ಲಿ ಹಲವು ವಿದ್ಯಾರ್ಥಿಗಳಿರುವುದು,…

Read More
ಚಿನ್ನ

ಆಲೂಗೆಡ್ಡೆಯಿಂದ ಚಿನ್ನ ತೆಗೆಯಬಹುದೆಂಬ ಹೇಳಿಕೆ ರಾಹುಲ್ ಗಾಂಧಿಯವರದ್ದಲ್ಲ: ಮೋದಿ ಕುರಿತು ಹೇಳಿದ್ದು!

ಒಂದು ಮೆಷಿನ್‌ ಸ್ಥಾಪಿಸುತ್ತೇನೆ. ಈ ಕಡೆ ಆಲೂಗೆಡ್ಡೆ ಹಾಕಿದರೆ ಆ ಕಡೆ ಚಿನ್ನ ಬರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ 20 ಸೆಕೆಂಡ್‌ಗಳ ವಿಡಿಯೋವೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈಗ ಬಿಜೆಪಿಯ ಅಧಿಕೃತ ಟ್ವಿಟರ್‌ನಲ್ಲಿ ಅದೇ ಮಾಹಿತಿ ಒಳಗೊಂಡ ಪೋಸ್ಟರ್ ಒಂದನ್ನು ಹಂಚಿಕೊಂಡು ಲೇವಡಿ ಮಾಡಲಾಗಿದೆ. ಆಲೂಗೆಡ್ಡೆಯಿಂದ ಚಿನ್ನ ಮಾಡುವ ಮೆಷಿನ್ ಸ್ಥಾಪಿಸಿದ್ದೇನೆಂದು ರಾಹುಲ್ ಗಾಂಧಿ ಹೇಳಿದ್ದಾರೆಯೇ ಎಂದು ಪರಿಶೀಲಿಸೋಣ. I.N.D.I. Alliance is 'lucky' to have such a 'logical'…

Read More

Fact Check | ಅಮುಲ್ ಸಂಸ್ಥೆ ‘ಶರಮ್’ ಹೆಸರಿನ ಹೊಸ ಆಹಾರ ಉತ್ಪನ್ನವನ್ನು ಬಿಡುಗಡೆ ಮಾಡಿಲ್ಲ

“ಅಮುಲ್ ‘ಶರಮ್’ ಹೆಸರಿನ ಹೊಸ ಚೀಸ್ ಉತ್ಪನ್ನವನ್ನು ಬಿಡುಗಡೆ ಮಾಡಿದೆ”ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಸಾಕಷ್ಟು ಮಂದಿ ಇದು ನಿಜವೆಂದು ಭಾವಿಸಿ ಶೇರ್ ಕೂಡ ಮಾಡುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಫೋಟೋದಲ್ಲಿ ಕೈಯಲ್ಲಿ ಚೀಸ್ ಪಾಕೆಟ್ ಅನ್ನು ಹಿಡಿದಿರುವುದು ಕಂಡುಬರುತ್ತದೆ. ಆ ಪ್ಯಾಕೆಟ್‌ನ ಮೇಲೆ ಅಮುಲ್ ಸಂಸ್ಥೆಯ ಹೆಸರನ್ನು ಬಿಳಿ ಬಣ್ಣದಲ್ಲಿ ಬರೆಯಲಾಗಿದ್ದು ಅದರಲ್ಲಿ ಶರಮ್ ಎಂಬ ಹೆಸರನ್ನು ಕೆಂಪು ಬಣ್ಣದಲ್ಲಿ ಬರೆಯಲಾಗಿದೆ ಇನ್ನು ಪ್ಯಾಕೆಟ್ನ ಮೇಲೆ ಚೀಸ್ ಎಂದು ಬರೆಯಲಾಗಿದೆ. ಫ್ಯಾಕ್ಟ್‌ಚೆಕ್‌ ಅಮುಲ್…

Read More

ರಾಹುಲ್ ಗಾಂಧಿ ಹೆಸರು ರೌಲ್ ವಿನ್ಸಿ ಮತ್ತು ಪ್ರಿಯಂಕಾ ಗಾಂಧಿಯ ಮೂಲ ಹೆಸರು ಬಿಯಾಂ ಕಾ ವಾದ್ರಾ ಎಂಬುದು ಸುಳ್ಳು

ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ ನೆಹರು ರವರ ಕುಟುಂಬವನ್ನು ಕೇಂದ್ರವಾಗಿರಿಸಿಕೊಂಡು ಕಳೆದೊಂದು ದಶಕಗಳಿಂದ ಸಾಕಷ್ಟು ಸುಳ್ಳು ಆಪಾಧನೆಗಳು, ಅಪಪ್ರಚಾರಗಳನ್ನು ಮಾಡಲಾಗುತ್ತಿದೆ. ಆಡಳಿತರೂಡ ಸರ್ಕಾರಗಳು ಸಹ ಇಂತಹ ಅಪಪ್ರಚಾರ ಮಾಡುವವರ ಬೆನ್ನಿಗೆ ನಿಂತು ಬೆಂಬಲಿಸುತ್ತಿದೆ ಮತ್ತು ಈ ಕುಟುಂಬದ ಸದಸ್ಯರ ಮೇಲೆ ಜನರಲ್ಲಿ ದ್ವೇಷ ಬೆಳೆಯುವಂತೆ ನೋಡಿಕೊಳ್ಳುತ್ತಿವೆ. ಇತ್ತೀಚೆಗೆ ನೆಹರೂ ಕುಟುಂಬದವರು ಮೂಲತಃ ಮುಸ್ಲಿಂ ಸಮುದಾಯದವರು ಎಂಬ ಸುದ್ದಿಯನ್ನು ಎಲ್ಲೆಡೆ ಪ್ರಚಾರ ಪಡಿಸಲಾಗುತ್ತಿದೆ. “ನೆಹರು ಅಜ್ಜ ಒಬ್ಬ ಪಾರ್ಸಿ ಜನಾಂಗದ ಖಾನ್. ಬ್ರಿಟಿಷರ ಧಾಳಿಯಿಂದ ತಪ್ಪಿಸಿಕೊಳ್ಳಲು ಗಂಗಾಧರ್ ನೆಹರು…

Read More

Fact Check | ಮುಸ್ಲಿಂ ವ್ಯಕ್ತಿಯೊಬ್ಬ ಹಂದಿ ಮಾಂಸದ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು Prank ವಿಡಿಯೋವಾಗಿದೆ

“ಈ ವಿಡಿಯೋ ನೋಡಿ ಡಚ್ ಸೂಪರ್ ಮಾರ್ಕೆಟ್‌ನಲ್ಲಿ ಮುಸ್ಲಿಂ ವಲಸಿಗರೊಬ್ಬರು ಹಂದಿ ಮಾಂಸದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಈತನಿಗೆ ಸರಿಯಾದ ಶಿಕ್ಷೆಯಾಗಲೇ ಬೇಕು.” ಎಂಬ ಬರಹಗಳೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನ ಸಾಕಷ್ಟು ಮಂದಿ ನಿಜವೆಂದು ನಂಬಿ ಮುಸಲ್ಮಾನ ಸಮುದಾಯದ ಬಗ್ಗೆ ಆಕ್ರೋಶವನ್ನು ಕೂಡ ವ್ಯಕ್ತ ಪಡಿಸುತ್ತಿದ್ದಾರೆ. Muslim immigrant in Holland urinates on the pork section of the supermarket as another films saying ‘we…

Read More