Fact Check | ತೆಲಂಗಾಣದಲ್ಲಿ ಮುಸಲ್ಮಾನರ ಅಭಿವೃದ್ಧಿಗೆ ಹಿಂದೂಗಳ ದೇವಾಲಯದ ಭೂಮಿ ಹರಾಜು ಎಂಬುದು ಸುಳ್ಳು

“ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಮುಸಲ್ಮಾನರ ಶ್ರೇಯೋಭಿವೃದ್ಧಿ ಮತ್ತು ಇತರೆ ಮುಸ್ಲಿಂ ಕಲ್ಯಾಣ ಯೋಜನೆಗಳಿಗೆ ನಿಧಿ ಸಂಗ್ರಹಿಸಲು ದೇವಾಲಯದ ಭೂಮಿಯನ್ನು ಹರಾಜು ಮಾಡುವುದಾಗಿ ಘೋಷಿಸಿದ್ದಾರೆ ಎಂದು NTV ತೆಲುಗು ಮತ್ತು ವೇ 2 ನ್ಯೂಸ್‌ ವರದಿ ಮಾಡಿವೆ ” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದೆ.

ಈ ಸುದ್ದಿಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದನ್ನು NTV ತೆಲುಗು ಮತ್ತು ವೇ 2 ನ್ಯೂಸ್‌ ವರದಿ ಮಾಡಿರುವ ರೀತಿಯಲ್ಲೇ ಕಾಣ ಸಿಗುತ್ತವೆ. ಹಾಗಾಗಿ ಇದೇ ನಿಜವಾದ ಸುದ್ದಿ ಎಂದು ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ಪ್ರಖ್ಯಾತ ಸುದ್ದಿ ಸಂಸ್ಥೆಗಳ ಹೆಸರಿನಲ್ಲಿ ಕಂಡು ಬಂದ ಈ ಸುಳ್ಳು ಸುದ್ದಿಗಳನ್ನು ಪರಿಶೀಲಿಸದೆ ಶೇರ್‌ ಮಾಡುತ್ತಿದ್ದಾರೆ..

ಫ್ಯಾಕ್ಟ್‌ಚೆಕ್‌

ಈ ಕುರಿತು ಫ್ಯಾಕ್ಟ್‌ಚೆಕ್‌ ಮಾಡಿದಾಗ ದೇವಸ್ಥಾನದ ಜಮೀನು ಹರಾಜು ಮಾಡುವ ಮೂಲಕ ಮುಸ್ಲಿಂ ಕಲ್ಯಾಣ ಯೋಜನೆಗಳಿಗೆ ಹಣ ಸಂಗ್ರಹಿಸುವ ಬಗ್ಗೆ ರೇವಂತ್ ರೆಡ್ಡಿ ಯಾವುದೇ ಘೋಷಣೆ ಮಾಡಿಲ್ಲ ಎಂಬುದು ತಿಳಿದು ಬಂದಿದೆ..

ಇನ್ನು ಈ ಕುರಿತು ಮಾಧ್ಯಮಗಳ ವರದಿ ಆಗಿವೆಯೇ ಎಂದು ಪರಿಶೀಲನೆ ನಡೆಸಿದಾಗ ಈ ರೀತಿಯ ಯಾವುದೇ ಸುದ್ದಿಯನ್ನು ಪ್ರಕಟಿಸಿಲ್ಲ.

ಈ ಕುರಿತು ಸುದ್ದಿ ಮಾಡಿದ್ದ NTV ತೆಲುಗು ಡಿಜಿಟಲ್ ಮ್ಯಾನೇಜರ್ ಟ್ವೀಟ್ ಮೂಲಕ NTV ಹೆಸರಿನ ವೈರಲ್ ಸ್ಕ್ರೀನ್‌ಶಾಟ್ ನಕಲಿ ಎಂದು ಖಚಿತಪಡಿಸಿದ್ದಾರೆ. ವೇ 2 ನ್ಯೂಸ್ ತನ್ನ ಲೋಗೋವನ್ನು ಬಳಸಿಕೊಂಡು ನಕಲಿ ವರದಿಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ : Fact Check | ಮಲೇಷ್ಯಾ ಏರ್‌ಲೈನ್ಸ್ ವಿಮಾನ MH370 ವಿಡಿಯೋ ಸೋರಿಕೆ ಎಂದು ಹಳೆಯ ವಿಡಿಯೋ ಹಂಚಿಕೆ


ವಿಡಿಯೋ ನೋಡಿ : Fact Check | ರಾಷ್ಟ್ರಪತಿ ಸೇರಿದಂತೆ ಗಣ್ಯರನ್ನು ಪ್ರಧಾನಿ ಮೋದಿ ಕಡೆಗಣಿಸಿದ್ದಾರೆ ಎಂಬುದು ಸುಳ್ಳು



ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *