Fact Check: ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಎಂದು ಮೋಹನ್ ಭಾಗವತ್ ಹೇಳಿಲ್ಲ

ಸಂವಿಧಾನ

ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ಹಲವು ನಕಲಿ ಸುದ್ದಿಗಳನ್ನು ರಾಜಕೀಯ ಪಕ್ಷಗಳು ಹರಿಬಿಟ್ಟಿದ್ದಾರೆ. ಪ್ರಸ್ತುತ ಎರಡನೇ ಹಂತದ ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಉಳಿದಿರುವಾಗ ಸಂವಿಧಾನ ಬದಲಾವಣೆ ಕುರಿತಂತೆ ಹಲವು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ಎಸ್‌ ಬಾಲರಾಜ್ “ಸಂವಿಧಾನ ಬದಲು ಮಾಡಲು ಆರ್‌ಎಸ್‌ಎಸ್‌ಗೆ ಮಾತ್ರ ಸಾಧ್ಯ” ಎಂದು ಹೇಳಿದ್ದಾರೆ ಎಂಬ ನಕಲಿ ಸುದ್ದಿಯೊಂದನ್ನು ಹರಿಬಿಡಲಾಗಿತ್ತು.

ಈಗ, “ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಆ ಬಗ್ಗೆ ಬಹಿರಂಗ ಹೇಳಿಕೆ ಬೇಡ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ ಎಂಬ ಹೊಸದಿಗಂತ ಪತ್ರಿಕಾ ವರದಿಯೊಂದು ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್‌: ಈ ಕುರಿತು ಹುಡುಕಿದಾಗ, ಮೋಹನ್ ಭಾಗವತ್ ಅವರ ಈ ಹೇಳಿಕೆ ಕುರಿತು ಬೇರೆ ಯಾವ ಮಾಧ್ಯಮಗಳಲ್ಲಿಯೂ ವರದಿಯಾಗಿರುವುದು ಕಂಡು ಬಂದಿಲ್ಲ. ಆಗಾಗಿ ಇದೊಂದು ನಕಲಿ ವರದಿಯಾಗಿದೆ. ಲೋಕ ಸಭಾ ಚುನಾವಣೆಯನ್ನು ಹಿನ್ನಲೆಯಾಗಿಟ್ಟುಕೊಂಡು ಈ ನಕಲಿ ವರದಿಯನ್ನು ಹರಿಬಿಡಲಾಗಿದೆ.

ಲೋಕಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಅನೇಕ ಬಿಜೆಪಿ ನಾಯಕರು ಸಂವಿಧಾನ ಬದಲಾಯಿಸುವ ಕುರಿತು ಮಾತನಾಡಿ ಜನಾಕ್ರೋಶಕ್ಕೆ ಕಾರಣರಾಗಿದ್ದಾರೆ. ಈ ಹೇಳಿಕೆಗಳಿಗೆ ಪ್ರಧಾನಿ ಮೋದಿಯವರಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ತಮ್ಮ ಪಕ್ಷದ ಮುಖಂಡರ ಮೇಲೆ ಸಹ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಬಿಜೆಪಿ ಪಕ್ಷವೇ ಸಂವಿಧಾನ ಬದಲಾಯಿಸಲು ಆಂತರಿಕವಾಗಿ ಪ್ರಯತ್ನಿಸುತ್ತಿದೆ ಎಂದು ವಿರೋದ ಪಕ್ಷಗಳು ಟೀಕಿಸುತ್ತಿವೆ ಮತ್ತು ಇದನ್ನೆ ಈ ಬಾರಿಯ ಲೋಕಸಭಾ ಚುನಾವಣೆಗೆ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ. ಆಗಾಗಿ ಇಂತಹ ನಕಲಿ ವರದಿಗಳನ್ನು ಹಂಚಿಕೊಳ್ಳಲಾಗುತ್ತಿದೆ.


ಇದನ್ನು ಓದಿ: ಸಂವಿಧಾನದ 30-A ಕಾನೂನಿನ ಪ್ರಕಾರ – ಹಿಂದೂಗಳು ತಮ್ಮ ಧರ್ಮವನ್ನು ಬೋಧಿಸಲು ಅವಕಾಶವಿಲ್ಲ ಎಂಬುದು ಸುಳ್ಳು


ವಿಡಿಯೋ ನೋಡಿ:‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ


ನಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *