Likith Rai

Fact Check | ಶಾಹೀನ್ ಬಾಗ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ವಿಡಿಯೋವನ್ನು ಸುಳ್ಳು ಮಾಹಿತಿಯೊಂದಿಗೆ ಹಂಚಿಕೆ

ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಇದರಲ್ಲಿ, ಯುವತಿಯೊಬ್ಬಳನ್ನು ಪೊಲೀಸರು ಕಾರಿನಲ್ಲಿ ಕರೆದೊಯ್ಯುವುದನ್ನು ಕಾಣಬಹುದು. ಇದನ್ನು ಬಳಸಿಕೊಂಡು ಹಲವರು ಬುರ್ಖಾ ಧರಿಸಿಕೊಂಡು ಹಿಂದೂ ಮಹಿಳೆಯೊಬ್ಬಳು ಅದರಲ್ಲೂ ಬಿಜೆಪಿ ಕಾರ್ಯಕರ್ತೆಯಾದ ಈಕೆ ಮುಸಲ್ಮಾನರ ಪ್ರತಿಭಟನೆಗೆ ಬಂದು ಗಲಭೆ ಎಬ್ಬಿಸಲು ಪ್ರಯತ್ನಿಸಿದ್ದಾಳೆ, ಆ ಮೂಲಕ ಮುಸಲ್ಮಾನರೇ ಗಲಭೆ ಮಾಡುತ್ತಾರೆ ಎಂದು ಬಿಂಬಿಸುವ ಯತ್ನ ಈಗೆಯದ್ದಾಗಿತ್ತು ಎಂದು ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ ಮಹಿಳೆಯನ್ನು ಪೊಲೀಸರು ಕರೆದುಕೊಂಡು ಹೋಗುವುದು ಕಂಡು ಬರುತ್ತಿರುವುದರಿಂದ ಹಲವರು ಇದನ್ನು ನಿಜವೆಂದು ಭಾವಿಸಿ…

Read More

Fact Check | PM ಇಂಟರ್ನ್‌ಶಿಪ್ ಯೋಜನೆಯ ಹೆಸರಿನಲ್ಲಿ ನಕಲಿ ಲಿಂಕ್‌ ಹಂಚಿಕೊಳ್ಳಲಾಗುತ್ತಿದೆ

ಪಿಎಂ ಇಂಟರ್ನ್‌ಶಿಪ್ ಯೋಜನೆಯ ಹೆಸರಿನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆಯಡಿ ಪ್ರತಿ ತಿಂಗಳು 5,000 ರೂ.ಗಳನ್ನು ನೀಡಲಾಗುವುದು ಎಂದು ಹೇಳಲಾಗುತ್ತಿದೆ. ಈ ಯೋಜನೆಯ ಪ್ರಯೋಜನವನ್ನು ಪಡೆಯಲು, ಬಯೋದಲ್ಲಿ ನೀಡಲಾದ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಫಾರ್ಮ್ ಅನ್ನು ಭರ್ತಿ ಮಾಡಲು ಮನವಿ ಮಾಡಲಾಗುತ್ತಿದೆ. ಹೀಗೆ ನೀಡಲಾದ ಲಿಂಕ್‌ jobsyojana.in ಆಗಿದೆ. ಇದೇ ಲಿಂಕ್‌ ಅನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. ಈ ಲಿಂಕ್‌ ಕ್ಲಿಕ್‌ ಮಾಡಿದಾಗ ಇದರಲ್ಲಿ ತೆರೆದುಕೊಳ್ಳುವ ಪುಟದಲ್ಲಿ ಹಲವು…

Read More

Fact Check | ತುಕಾಲಿ ಸಂತು ಮತ್ತು ಮಾನಸ ಮಹಾ ಕುಂಭಮೇಳದ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂಬುದು ಸುಳ್ಳು

“ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಸಂದರ್ಭದಲ್ಲಿ ವಾಹನವೊಂದು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡಿದೆ. ಇದರಲ್ಲಿ ಇರುವವರು ಕನ್ನಡದ ನಟ ತುಕಾಲಿ ಸಂತೊಷ್‌ ಮತ್ತು ಅವರ ಪತ್ನಿ ಮಾನಸ. ಇವರು ಮಹಾ ಕುಂಭಮೇಳಕ್ಕೆ ತೆರಳುವಾಗ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಇದರಿಂದ ದಂಪತಿಗಳು ಕಣ್ಣೀರು ಹಾಕಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ ತುಕಾಲಿ ಸಂತೊಷ್‌ ಮತ್ತು ಅವರ ಪತ್ನಿ ಮಾನಸ ರವರು ಕಾರಿನಲ್ಲಿ ಕುಳಿತಿರುವುದು, ಜನ ದಟ್ಟಣೆಯ ನಡುವೆ ಅವರ ವಾಹನ ಇರುವುದು ಮತ್ತು…

Read More

Fact Check | ಪ್ರಧಾನಿ ನರೇಂದ್ರ ಮೋದಿ ಅವರನ್ನು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕಡೆಗಣಿಸಿದ್ದಾರೆ ಎಂಬುದು ಸುಳ್ಳು

ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 10 ರಂದು ಫ್ರಾನ್ಸ್‌ಗೆ ಮೂರು ದಿನಗಳ ಭೇಟಿಯನ್ನು ಕೈಗೊಂಡರು. ಅವರ ಭೇಟಿಯ ಸಮಯದಲ್ಲಿ, ಅವರು ಪ್ಯಾರಿಸ್‌ನಲ್ಲಿ ನಡೆದ 14 ನೇ ಭಾರತ-ಫ್ರಾನ್ಸ್ ಸಿಇಒ ವೇದಿಕೆಯಾದ ಎಐ ಆಕ್ಷನ್ ಶೃಂಗಸಭೆಯಲ್ಲಿ ಭಾಗವಹಿಸಿದರು ಮತ್ತು ಫ್ರಾನ್ಸ್‌ನ ಮಾರ್ಸಿಲ್ಲೆಯಲ್ಲಿ ಎರಡನೇ ಭಾರತೀಯ ರಾಯಭಾರ ಕಚೇರಿಯನ್ನು ಉದ್ಘಾಟಿಸಿದರು. ಇದರ ನಡುವೆ, ಫೆಬ್ರವರಿ 11 ರಂದು ನಡೆದ ಪ್ಯಾರಿಸ್ AI ಶೃಂಗಸಭೆಯ ವೀಡಿಯೊವೊಂದು ವೈರಲ್ ಆಗಿದ್ದು ಸಾಕಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿಗೆ ಹಸ್ತಲಾಘವ ನೀಡಲು ಫ್ರಾನ್ಸ್‌ ಅಧ್ಯಕ್ಷ…

Read More

Fact Check | ಮಹಾ ಕುಂಭಮೇಳದಿಂದ ಭಕ್ತರು ಹಿಂತಿರುಗುತ್ತಿದ್ದ ರೈಲಿನ ಮೇಲೆ ಮುಸಲ್ಮಾನರು ದಾಳಿ ನಡೆಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ”ಕುಂಭಮೇಳದಿಂದ ಹಿಂತಿರುಗುತ್ತಿದ್ದ ಹಿಂದೂಗಳೇ ತುಂಬಿದ್ದ ಸ್ವಾತಂತ್ರ್ಯ ಸೇನಾನಿ ಎಕ್ಸ್ ಪ್ರೆಸ್ ರೈಲು ದೆಹಲಿಗೆ ಬಂದು ತಲುಪಿದಾಗ ಹಿಂದೂ ವಿರೋಧಿಗಳು ರೈಲಿನ ಗಾಜು ಒಡೆಯಿತ್ತಿರುವ ದೃಶ್ಯ. ಯಾರಿರಬಹುದು? ನೀವೇ ಊಹಿಸಿ. ಇದೇ ಮಾದರಿಯಲ್ಲಿ ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ ಕಾರಸೇವಕರಿದ್ದ ರೈಲಿನ ಬೋಗಿಗೆ ಬೆಂಕಿ ಹಚ್ಚಿ ಜೀವಂತ ಸುಟ್ಟು ಹಾಕಿದ ಘಟನೆ ನೆನಪಿಸಿಕೊಳ್ಳಿ. ಇಂತಹ ಉಗ್ರರನ್ನು ಸಮರ್ಥಿಸಿಕೊಳ್ಳುವ ಬೆರಕೆ ಹಿಂದುಗಳು ಇನ್ನೂ ಇದ್ದಾರೆ” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ ಪುಂಡರ ಗುಂಪೊಂದು ರೈಲಿನ ಗಾಜನ್ನು ಒಡೆಯುತ್ತಿರುವುದು…

Read More

Fact Check | ರಾಷ್ಟ್ರಪತಿ ಭವನವು ಮೊದಲ ಬಾರಿಗೆ ವಿವಾಹವನ್ನು ಆಯೋಜಿಸುತ್ತಿದೆ ಎಂಬುದು ಸುಳ್ಳು.!

ರಾಷ್ಟ್ರಪತಿ ಭವನವು ಇತಿಹಾಸದಲ್ಲಿ ಮೊದಲ ಬಾರಿಗೆ ವಿವಾಹವನ್ನು ಆಯೋಜಿಸಲಿದೆ ಎಂದು ಹಲವು ವರದಿಗಳು ಹೇಳಿವೆ. ಫೆಬ್ರವರಿ 12 ರಂದು ಸಿಆರ್‌ಪಿಎಫ್ ಅಧಿಕಾರಿಗಳಾದ ಪೂನಂ ಗುಪ್ತಾ ಮತ್ತು ಅವನೀಶ್ ಕುಮಾರ್ ಅವರ ವಿವಾಹವನ್ನು ಆಯೋಜಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದಿಸಿದ ಈ ಖಾಸಗಿ ಸಮಾರಂಭವು ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ. ಎಂದು ಸಾಕಷ್ಟು ಮಾಧ್ಯಮಗಳು ವರದಿಯನ್ನು ಮಾಡಿವೆ. ಈ ಸುದ್ದಿಗಳಲ್ಲಿ ಇದು ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಮೊದಲ ಮದುವೆ ಎಂಬ ಅಂಶವನ್ನು ಉಲ್ಲೇಖಿಸಿರುವುದರಿಂದ, ಈ ಸುದ್ದಿ ಸಾಕಷ್ಟು ವೈರಲ್‌ ಆಗುತ್ತಿವೆ….

Read More

Fact Check | ಮಹಾ ಕುಂಭಮೇಳದಲ್ಲಿ ಭಕ್ತರು ಭದ್ರತಾ ಸಿಬ್ಬಂದಿಯ ಮೇಲೆ ಚಪ್ಪಲಿ ಎಸೆದಿದ್ದಾರೆ ಎಂಬುದು ಸುಳ್ಳು

“ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಜನರು ಚಪ್ಪಲಿ ಎಸೆಯುತ್ತಿರುವಾಗ ಅರೆಸೈನಿಕ ಸಮವಸ್ತ್ರದಲ್ಲಿರುವ ಭದ್ರತಾ ಸಿಬ್ಬಂದಿಗಳು ಭಾರಿ ಜನಸಮೂಹವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ವೀಡಿಯೊವು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಅವ್ಯವಸ್ಥೆಯನ್ನು ತೋರಿಸುತ್ತದೆ” ಎಂದು ಬರೆದುಕೊಂಡು ಸಾಕಷ್ಟು ಮಂದಿ ವಿಡಿಯೋವೊಂದನ್ನು ಶೇರ್‌ ಮಾಡುತ್ತಿದ್ದಾರೆ. कुंभ में राष्ट्रवादी और सनातनी लोगों ने आर्मी वालों पर चप्पलें फेंकी!ये मुसलमान होते तो आज…

Read More

Fact Check | ಭಾರತದಲ್ಲಿ ಮಾಟ-ಮಂತ್ರ ಮಾಡಿದ ಪತ್ರ ನೀಡಿ ದರೋಡೆ ಮಾಡಲಾಗುತ್ತಿದೆ ಎಂಬುದು ಸುಳ್ಳು

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು ‘ಭಾರತದ ಅತಿದೊಡ್ಡ ವಂಚನೆ’ ಎಂಬ ಎಚ್ಚರಿಕೆಯ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಒಬ್ಬ ವ್ಯಕ್ತಿ ಬೈಕ್ ಸವಾರನನ್ನು ಸಂಮೋಹನಗೊಳಿಸಿ ದರೋಡೆ ಮಾಡುತ್ತಿದ್ದಾನೆಂದು ಹೇಳಿಕೊಳ್ಳುವ ಸಿಸಿಟಿವಿ ವಿಡಿಯೋ ವೈರಲ್‌ ಆಗುತ್ತಿದೆ. ಹಲವರು ಈ ರೀತಿಯ ಪತ್ರವನ್ನು ಯಾರೇ ನಿಮ್ಮ ಕೈಗೆ ನೀಡಿದರು ಅದನ್ನು ಓದ ಬೇಡಿ. ಒಂದು ವೇಳೆ ಓದಿದರೆ, ನೀವು ಪತ್ರ ಕೊಟ್ಟವರ ಹಿಡಿತದಲ್ಲಿರುತ್ತೀರಿ. ಆಗ ಅವರು ನಿಮ್ಮನ್ನು ದರೋಡೆ ಮಾಡುತ್ತಾರೆ ಎಂದು ಬರೆದುಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಕೂಡ ಬೈಕ್‌ನಲ್ಲಿ ವ್ಯಕ್ತಿಯೊಬ್ಬ ಕುಳಿತಿರುವುದು…

Read More

Fact Check | ಜೆ. ಪಿ. ನಡ್ಡಾ ಸಂಸತ್ತಿನಲ್ಲಿ ಸಂವಿಧಾನದ ಪ್ರತಿಯನ್ನು ತಮ್ಮ ಪಾದಗಳ ಬಳಿ ಇಟ್ಟುಕೊಂಡಿದ್ದರು ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ ಅವರನ್ನು ಸಂವಿಧಾನ ವಿರೋಧಿ ಎಂದು ಟೀಕೆ ಮಾಡಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಜೆ. ಪಿ. ನಡ್ಡಾ ಅವರು ಸಂವಿಧಾನದ ಪ್ರತಿಯನ್ನು ತಮ್ಮ ಪಾದಗಳ ಬಳಿ ಇಟ್ಟು ಅವಮಾನಿಸಿದ್ದಾರೆ. ಆ ಮೂಲಕ ಬಿಜೆಪಿಯ ಸಂವಿಧಾನ ವಿರೋಧಿ ಮನಸ್ಥಿತಿ ಏನು ಎಂಬುದು ಸ್ಪಷ್ಟವಾಗಿದೆ ಎಂದು ಹಲವರು ಬರೆದುಕೊಂಡಿದ್ದಾರೆ माननीय नड्डा जी…संविधान को पैरों में रखते है?pic.twitter.com/DomAr72lLA — Srinivas BV (@srinivasiyc) February 11,…

Read More

Fact Check | ಮೆಂತ್ಯ, ಲವಂಗ, ಏಲಕ್ಕಿ, ದಾಲ್ಚಿನ್ನಿಯನ್ನು ನೀರಿನಲ್ಲಿ ಬೆರೆಸಿ ಕುಡಿದರೆ ಕ್ಯಾನ್ಸರ್ ಗುಣವಾಗುತ್ತದೆ ಎಂಬುದು ಸುಳ್ಳು

ಕೊನೆಯ ಹಂತದ ಕ್ಯಾನ್ಸರ್ ಚಿಕಿತ್ಸೆಯ ಹೆಸರಿನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಇದರಲ್ಲಿ ಒಬ್ಬ ವ್ಯಕ್ತಿ ಮೆಂತ್ಯ, ಲವಂಗ, ಏಲಕ್ಕಿ ಮತ್ತು ದಾಲ್ಚಿನ್ನಿಯನ್ನು ನೀರಿನಲ್ಲಿ ಬೆರೆಸಿ ಬೇಯಿಸಿದ ನಂತರ ಕುಡಿಯುವುದರಿಂದ ಕೊನೆಯ ಹಂತದ ಕ್ಯಾನ್ಸರ್ ಗುಣಪಡಿಸಬಹುದು ಎಂದು ಹೇಳುತ್ತಿದ್ದಾರೆ. ಹೀಗಾಗಿ ಈ ವಿಡಿಯೋ ಸಾಕಷ್ಟು ವೈರಲ್‌ ಆಗಿದ್ದು, ಕೊನೆಯ ಹಂತದ ಕ್ಯಾನ್ಸರ್‌ಗೆ ಕೂಡ ಭಾರತೀಯ ಆಹಾರ ಪದ್ಧತಿಯಲ್ಲಿ ಪರಿಹಾರ ಇದೆ ಎಂದು ಹಲವರು ಬರೆದುಕೊಳ್ಳುತ್ತಿದ್ದಾರೆ. ವಿಡಿಯೋದಲ್ಲಿ ಕೂಡ ಇದರಿಂದ ಹಲವು ಕ್ಯಾನ್ಸರ್‌ ರೋಗಿಗಳಿಗೆ ಪ್ರಯೋಜನವಾಗಲಿದೆ…

Read More