FACT CHECK: ಮಕರ ಸಂಕ್ರಾಂತಿಯ ಪ್ರಯುಕ್ತ ಅಮಿತ್ ಶಾ ಗಾಳಿಪಟ ಹಾರಿಸಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮಕರ ಸಂಕ್ರಾಂತಿಯ ಸಂಭ್ರಮದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಗಾಳಿಪಟ ಹಾರಿಸಿದ್ದಾರೆಂದು  ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ಓರ್ವ ಬಾಲಕ ಅಮಿತ್ ಶಾ ಅವರ ಗಾಳಿಪಟವನ್ನು ಕತ್ತರಿಸಿ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. 2025ರ ಜನವರಿ 14ರಂದು ವಿಡಿಯೋವನ್ನು ತ್ರೆಡ್‌ನಲ್ಲಿ  ( ಆರ್ಕೈವ್ ಲಿಂಕ್ )  khabartak_media ಎಂಬ ಖಾತೆಯಿಂದ ಹಂಚಿಕೊಂಡಿದ್ದು,  ” ಕೇಂದ್ರ ಗೃಹ ಸಚಿವ ಅಮಿತ್ ಶಾ ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸುತ್ತಿದ್ದಾಗ ಬಾಲಕ ಅದನ್ನು ಕತ್ತರಿಸಿದನು.” ಎಂದು…

Read More
ಮುಸ್ಲಿಂ

Fact Check: ರಾಜಸ್ಥಾನ-ಗುಜರಾತ್-ಮಹಾರಾಷ್ಟ್ರ ಹೆದ್ದಾರಿಯಲ್ಲಿರುವ 40 ಮುಸ್ಲಿಂ ಡಾಭಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬುದಕ್ಕೆ ಆಧಾರವಿಲ್ಲ

ರಾಜಸ್ಥಾನ-ಗುಜರಾತ್-ಮಹಾರಾಷ್ಟ್ರ ಹೆದ್ದಾರಿಯಲ್ಲಿರುವ 40ಕ್ಕೂ ಹೆಚ್ಚು ಮುಸ್ಲಿಂ ಡಾಭಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಯುವಕನೊಬ್ಬ ಹೇಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮುಸ್ಲಿಂ ಹೋಟೆಲ್‌ಗಳಲ್ಲಿ ನಪುಂಸಕ ಔಷಧಿಗಳನ್ನು ಬೆರೆಸಲಾಗುತ್ತಿದೆ ಮತ್ತು ಮಾಂಸಾಹಾರಿ ವಸ್ತುಗಳನ್ನು ಬೆರೆಸಿ ಹಿಂದೂ ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಯುವಕ ಆರೋಪಿಸಿದ್ದಾನೆ. Shocking : Reportedly police raided 40 Muslim hotels on the Rajasthan-Gujarat-Maharashtra highway. A case of adulteration of impotence medicine and…

Read More
ಗುಜರಾತ್‌

Fact Check: 2022 ರಲ್ಲಿ ಗುಜರಾತ್‌ನ ಗರ್ಬಾ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಪೊಲೀಸರು ಥಳಿಸುವ ಹಳೆಯ ವಿಡಿಯೊವನ್ನು ಇತ್ತೀಚಿನದು ಎಂದು ಹಂಚಿಕೆ

ನವರಾತ್ರಿ ಹಬ್ಬದ ನಂತರ ಭಾರತದ ಅನೇಕ ರಾಜ್ಯಗಳಲ್ಲಿ ದುರ್ಗಾ ಮಾತೆಗೆ ಅವಮಾನಿಸಲಾಗಿದೆ ಎಂದು ಹಳೆಯ ವಿಡಿಯೋಗಳನ್ನು ಬಳಸಿಕೊಂಡು ದ್ವೇಷ ಹರಡಲು ಪ್ರಯತ್ನಿಸಲಾಗುತ್ತಿದೆ. ಈಗ, ಇತ್ತೀಚೆಗೆ ಗುಜರಾತ್‌ನ ಖೇಡಾ ಪ್ರದೇಶದಲ್ಲಿ ಮಸೀದಿಯೊಂದರ ಬಳಿ ನಡೆದ ಗರ್ಬಾ ಕಾರ್ಯಕ್ರಮದಲ್ಲಿ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಒಂದು ಹರಿದಾಡುತ್ತಿದ್ದು, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಪೊಲೀಸರು ಯುವಕರನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸುವ ಮೂಲಕ ಅಪರಾಧಿಗಳನ್ನು ಶಿಕ್ಷಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಪಾದಿಸಲಾಗುತ್ತಿದೆ. ಆರ್ಕೈವ್…

Read More
ಸಿಂಹ

Fact Check: ಪಾವಗಡ, ಬೆಳ್ಳೂರು ಕ್ರಾಸ್‌ ನಲ್ಲಿ ಸಿಂಹ ಕಾಣಿಸಿಕೊಂಡಿದೆ ಎಂದು ಸುಳ್ಳು ಸುದ್ದಿ ಹಂಚಿಕೊಂಡು ಆತಂಕ ಮೂಡಿಸಿದ ಕೆಲವು ಕನ್ನಡದ ಮಾಧ್ಯಮಗಳು

ಕಳೆದ ಹಲವು ದಿನಗಳಿಂದ ಪಾವಗಡದಲ್ಲಿ ಸಿಂಹ ಕಾಣಿಸಿಕೊಂಡಿದೆ, ಬೆಳ್ಳೂರು ಕ್ರಾಸ್‌ ನಲ್ಲಿ ಸಿಂಹ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು ಜೀ ಕನ್ನಡ ನ್ಯೂಸ್, ಪಬ್ಲಿಕ್ ನ್ಯೂಸ್ 24/7 ಮತ್ತು ಈಡೆನ್ಸ್ ನ್ಯೂಸ್ ಕನ್ನಡ  ಸೇರಿದಂತೆ ಕೆಲವು ಕನ್ನಡ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿ ಜನರಲ್ಲಿ ಆತಂಕ ಮೂಡಿಸಿವೆ. ಜೀ ನ್ಯೂಸ್‌ “ಪಾವಗಡದ ಪೆಟ್ರೋಲ್‌ ಬಂಕ್‌ನಲ್ಲಿ ಅಡ್ಡಾಡಿದ ಸಿಂಹ” ಸಿಂಹ ಎಂಬ ಶೀರ್ಷಿಕೆಯೊಂದಿಗೆ ವೀಡಿಯೋ ತುಣುಕನ್ನು ಹಂಚಿಕೊಂಡಿದ್ದು ಇದನ್ನು 2.2 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ ಮತ್ತು 1200…

Read More
ಗುಜರಾತ್‌

Fact Check: ಗುಜರಾತಿನಲ್ಲಿ ರೈಲ್ವೆ ಹಳಿ ತಪ್ಪಿಸಲು ಪ್ರಯತ್ನಿಸಿದ ನೌಕರರು ಹಿಂದೂಗಳೇ ಹೊರತು ಮುಸ್ಲಿಮರಲ್ಲ

ಇತ್ತೀಚೆಗೆ ಗುಜರಾತ್‌ನ ಸೂರತ್‌ನಲ್ಲಿ ಸೆಪ್ಟೆಂಬರ್ 21 ರಂದು ಕಿಮ್ ರೈಲು ನಿಲ್ದಾಣದ ಬಳಿ ರೈಲು ಹಳಿತಪ್ಪಿಸಲು ಸಂಚು ರೂಪಿಸಿದ ಮೂವರು ರೈಲ್ವೆ ಉದ್ಯೋಗಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳನ್ನು ಮುಸ್ಲಿಮರು ರೈಲು ಅಪಘಾತಕ್ಕೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗುತ್ತಿದೆ. ಈ ಕುರಿತ ಮೂವರು ಅಪರಾಧಿಗಳನ್ನು ಪೋಲಿಸರು ಬಂಧಿಸಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ” ಕರ್ನಾಟಕಕ್ಕೆ ಬರುತ್ತಿದ್ದ ಸೇನಾ ರೈಲನ್ನು ಹಳಿ ತಪ್ಪಿಸಲು ಯತ್ನಿಸಿದ್ದ ಮುಸ್ಲಿಂ ರೈಲ್ವೆ ನೌಕರರ ಬಂಧನ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮತ್ತು ಆರೋಪಿಗಳನ್ನು…

Read More

Fact Check: 2011ರ ಜಾಹೀರಾತಿನ ಚಿತ್ರವನ್ನು ಕೇರಳದ ಕಾಲೇಜು ಭಾರತೀಯ ಸಂಸ್ಕೃತಿಯನ್ನು ಅಣಕಿಸುತ್ತಿದೆ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ

ಕೇರಳದ ಕಾಲೇಜೊಂದರಲ್ಲಿ ಭಾರತೀಯ ಮತ್ತು ಹಿಂದೂ ಸಂಸ್ಕೃತಿಯನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಘಾಗ್ರಾ ಚೋಲಿ ಎಂಬುದು ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಮಹಿಳೆಯರು ಸಾಂಪ್ರದಾಯಿಕವಾಗಿ ಧರಿಸುವ ಉದ್ದನೆಯ ಸ್ಕರ್ಟ್ ಮತ್ತು ರವಿಕೆಯಾಗಿದೆ. ಫೋಟೋವು ಘಾಗ್ರಾ ಚೋಲಿಯ ರಾಜಸ್ಥಾನಿ ಶೈಲಿಯನ್ನು ಚಿತ್ರಿಸುತ್ತದೆ ಆದರೆ ಅದನ್ನು ಕತ್ತರಿಸಿ ಮಿನಿ ಸ್ಕರ್ಟ್ ಆಗಿ ತಯಾರಿಸಲಾಗಿದೆ ಎಂದು ತೋರಿಸುತ್ತದೆ. ಕೇರಳದಲ್ಲಿ ನಡೆದ ಕಾಲೇಜು ಸ್ಪರ್ಧೆಯಲ್ಲಿ ಈ ತಂಡವು ಮೂರನೇ ಸ್ಥಾನವನ್ನು ಗೆದ್ದಿದೆ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಫೋಟೋವನ್ನು ಎಕ್ಸ್ ಮತ್ತು…

Read More
ಭೋಲೆ ಬಾಬಾ

Fact Check: ಹತ್ರಾಸ್‌ ಕಾಲ್ತುಳಿತಕ್ಕೆ ಕಾರಣವಾದ ಭೋಲೆ ಬಾಬಾ ಎಂದು ಗುಜರಾತ್‌ನ ನಕಲಿ ಬಾಬಾನ ಪೋಟೋ ಹಂಚಿಕೆ

ವ್ಯಕ್ತಿಯೊಬ್ಬ ತನ್ನ ನಾಲಿಗೆಯನ್ನು ಹೊರ ಚಾಚುತ್ತಾ, ಮೈ ಮೇಲೆ ದೇವರು ಬಂದವರಂತೆ ವರ್ತಿಸುತ್ತಾ, ಗುಲಾಬಿ ದಳಗಳ ರಾಶಿಯ ನಡುವೆ ಕುಳಿತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಹಂಚಿಕೊಂಡಿರುವ ಬಳಕೆದಾರರು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಲ್ಲಿ 121 ಜನರ ಸಾವಿಗೆ ಕಾರಣವಾದ ಕಾರ್ಯಕ್ರಮವನ್ನು ಆಯೋಜಿಸಿದ್ದ ‘ಭೋಲೆ ಬಾಬಾ’ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ಈತ ಎಂದು ಹೇಳುತ್ತಿದ್ದಾರೆ. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಇದೇ ರೀತಿಯ ಪ್ರತಿಪಾದನೆಗಳ ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌…

Read More
ನೀಟ್ (ಯುಜಿ)

Fact Check: ನೀಟ್ (ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಮುಸ್ಲಿಮರನ್ನು ಮಾತ್ರ ಬಂಧಿಸಲಾಗಿದೆ ಎಂಬುದು ಸುಳ್ಳು

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ‘ಎಕ್ಸಾಮ್ ಜಿಹಾದ್’ ಪಿತೂರಿ ಇದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಿಬಿಐ ಬಂಧಿಸಿರುವ ಮೂವರು ಮುಸ್ಲಿಂ ವ್ಯಕ್ತಿಗಳ ಫೋಟೋಗಳನ್ನು ಹೊಂದಿರುವ ಪೋಸ್ಟ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫ್ಯಾಕ್ಟ್‌ಚೆಕ್: ಈ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಹುಡುಕಾಟವನ್ನು ನಡೆಸಿದಾಗ, ಈ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಸಿಬಿಐ ಬಂಧಿಸಿರುವ ಬಗ್ಗೆ ಹಲವಾರು ಸುದ್ದಿ ವರದಿಗಳು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ನಮಗೆ ಲಭ್ಯವಾಗಿವೆ. ಪೋಟೋದಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು,…

Read More

Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ

ಇತ್ತೀಚೆಗೆ ರಾಜಕೀಯ ಮುಖಂಡರ ಭಾಷಣಗಳನ್ನು ತಪ್ಪಾಗಿ ಅರ್ಥ ಬರುವಂತೆ ತಿರುಚಿ ಹಂಚಿಕೊಳ್ಳುವುದು ಸರ್ವೇ ಸಾಮಾನ್ಯವಾಗುತ್ತಿದೆ. ಚುನಾವಣಾ ಸಂದರ್ಭಗಳಲ್ಲಿ ಇಂತಹ ವಿಡಿಯೋಗಳನ್ನು ಹೆಚ್ಚು ಹರಿಬಿಡಲಾಗುತ್ತಿದೆ. ಅನೇಕ ಬಾರಿ ಇಂತಹ ತಿರುಚಿದ ವಿಡಿಯೋಗಳಿಂದ ಜನರಿಗೆ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಯಾವುದೇ ಅಥವಾ ಯಾರದೇ ಭಾ‍ಷಣದ ತುಣುಕನ್ನು ನೋಡಿದಾಗ ಅವರ ಮಾತನ್ನು ಸಂಪೂರ್ಣವಾಗಿ ನಂಬಿ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಅವರ ಪೂರ್ತಿ ಭಾಷಣ ನೋಡಿ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ. ಈಗ,…

Read More
Hindu

Fact Check: ಗುಜರಾತ್‌ನಲ್ಲಿ ಹಿಂದೂ ದೇವಾಲಯವನ್ನು ಜಿಹಾದಿಗಳಿಂದ ತೆರವುಗೊಳಿಸಲಾಗಿದೆ ಎಂಬುದು ಸುಳ್ಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲೀಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ದಿನಗಳಿಂದ ಹರಿದಾಡುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೋಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು. ಆಗಾಗಿ ನಿಜವಾಗಿಯೂ…

Read More