ಡಾ. ಬಿ.ಆರ್.ಅಂಬೇಡ್ಕರ್

Fact Check: 2022 ರ ಹಳೆಯ ವಿಡಿಯೋವನ್ನು ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಅಮಿತ್ ಶಾ ನೀಡಿದ ಹೇಳಿಕೆ ವಿರುದ್ಧ ಬೃಹತ್ ಪ್ರತಿಭಟನೆ ಎಂದು ಹಂಚಿಕೊಳ್ಳಲಾಗುತ್ತಿದೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಇತ್ತೀಚೆಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿವೆ. ಈ ನಡುವೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ತೋರಿಸುವ 28 ಸೆಕೆಂಡುಗಳ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಮಿತ್‌ ಶಾ ಅವರ ಹೇಳಿಕೆಯನ್ನು ಖಂಡಿಸಿ ಈ ರ್ಯಾಲಿ ನಡೆದಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ಅನೇಕ ಎಕ್ಸ್ ಮತ್ತು ಫೇಸ್‌ಬುಕ್‌ ಬಳಕೆದಾರರು ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದು, ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆಯನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ್ದಾರೆ….

Read More
ಬಾದಾಮಿ

Fact Check: ಬಾದಾಮಿ ಗುಹೆಗಳಲ್ಲಿ ಚಲಿಸುವ ನಾಗರಾಜನ ಶಿಲ್ಪವಿದೆ ಎಂದು ಎಡಿಟ್ ಮಾಡಿದ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ನಾಗ ರಾಜನ ಪ್ರತಿಮೆಯ ಸುತ್ತ ಹಾವು ಸುತ್ತುತ್ತಿರುವ ವೀಡಿಯೊ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇದು ಕರ್ನಾಟಕದ ಬಾದಾಮಿ ಗುಹೆಗಳಲ್ಲಿರುವ 6 ನೇ ಶತಮಾನದ ನಾಗ ರಾಜನ ಮೂರ್ತಿಯನ್ನು ಹೊಂದಿರುವ ಅದ್ಭುತ ಛಾವಣಿಯನ್ನು ತೋರಿಸುತ್ತದೆ ಎಂದು ಹೇಳಲಾಗುತ್ತಿದೆ. ಮತ್ತು ಈ ನಾಗರಾಜನ ಮೂರ್ತಿಯ ವಿಶೇಷ ಏನೆಂದರೆ ವಿಗ್ರಹದ ಸುತ್ತ ಇರುವ ಹಾವಿನ ದೇಹವು ಮೂರ್ತಿಯ ಸುತ್ತಾ ತಿರುಗುತ್ತಿರುತ್ತದೆ ಎಂದು ಅನೇಕರು ಹಂಚಿಕೊಳ್ಳುತ್ತಿದ್ದಾರೆ. ಇದರ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ವೈರಲ್…

Read More

Fact Check : ಕರ್ನಾಟಕದ ಪೋಲಿಸರು ಗಣೇಶ ವಿಗ್ರಹವನ್ನು ಬಂಧಿಸಿದ್ದಾರೆ ಎಂಬುದು ಸುಳ್ಳು

ಗಣೇಶನ ವಿಗ್ರಹವನ್ನು ವಿಸರ್ಜನೆ ಮಾಡುವಾಗ, ಕರ್ನಾಟಕ ಪೋಲೀಸರು ವಿಗ್ರಹವನ್ನು ಬಂಧಿಸಿದ್ದಾರೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. 2024ರ ಸಪ್ಟೆಂಬರ್‌ನಲ್ಲಿ, “ಕರ್ನಾಟಕ ಪೋಲೀಸ್ ಸಿಬ್ಬಂದಿ ಗಣೇಶ ವಿಗ್ರಹವನ್ನು ಬಂಧಿಸಿದ್ದಾರೆ” ಎಂಬ ಪೋಸ್ಟ್‌ರ್‌ ಸಾಕಷ್ಟು ರೀತಿಯ ವಿವಾದಗಳನ್ನು ಹುಟ್ಟುಹಾಕಿದೆ. ಬಳಕೆದಾರರು ಬಲವಾದ ಪ್ರತಿಕ್ರಿಯೆಗಳ ಮೂಲಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕರ್ನಾಟಕದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ “ಗಣೇಶ ವಿಸರ್ಜನೆ’ ಉತ್ಸವದ ಕೋಮು ಹಿಂಸಾಚಾರ ನಡೆದ ಹಿನ್ನೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ ಪೊಲೀಸರು ಗಣಪತಿ ವಿಗ್ರಹವನ್ನು ಬಂಧಿಸಿದ್ದಕ್ಕೆ ಪ್ರಮುಖ ರಾಜಕಾರಣಿಗಳು…

Read More
ಮಧ್ಯಪ್ರದೇಶ

Fact Check : ಮಧ್ಯಪ್ರದೇಶದಲ್ಲಿ ಪ್ರತಿಮೆಯನ್ನು ದ್ವಂಸಗೊಳಿಸಿರುವ ವೀಡಿಯೊವನ್ನು ಕರ್ನಾಟಕದ್ದು ಎಂದು ಹಂಚಿಕೆ

ಟ್ರ್ಯಾಕ್ಟರ್‌ನಿಂದ ಪ್ರತಿಮೆಯನ್ನು ಕೆಡವುತ್ತಿರುವ ವೀಡಿಯೊವನ್ನು, ಕರ್ನಾಟಕದಲ್ಲಿ ನಡೆದ ಘಟನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ವೀಡಿಯೊದಲ್ಲಿ ಟ್ರ್ಯಾಕ್ಟರ್ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸಲಾಗಿದೆ. ಮತ್ತು ಅಲ್ಲಿ ನೆರೆದಿದ್ದ ಜನರು ದೊಣ್ಣೆ ಮತ್ತು ಕಲ್ಲುಗಳನ್ನು ಬಳಸಿ ಪ್ರತಿಮೆಯನ್ನು ದ್ವಂಸ ಮಾಡುತ್ತಿರುವ ದೃಶ್ಯವು ಕಂಡುಬಂದಿದೆ. ಕೊನೆಯಲ್ಲಿ, ಒಬ್ಬ ವ್ಯಕ್ತಿ ಪ್ರಚೋದನಕಾರಿ ಕೋಮುವಾದಿ ಹೇಳಿಕೆಯನ್ನು ಕೊಡುತ್ತಾನೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ಘಟನೆಯ ಸ್ಕ್ರೀನ್‌ಶಾಟ್‌ ಪೋಟೊಗಳನ್ನು Google ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ ಈ ಘಟನೆ ಕರ್ನಾಟಕದ್ದಲ್ಲ…

Read More

Fact Check: ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಗೆ ಚೂರಿಯಿಂದ ಇರಿದ ಹಳೆಯ ಪ್ರಕರಣವನ್ನು ಇತ್ತೀಚೆಗೆ ಹರಿಯಾಣದಲ್ಲಿ ನಡೆದಿದೆ ಎಂದು ಹಂಚಿಕೊಳ್ಳಲಾಗಿದೆ

ತೀವ್ರವಾಗಿ ಗಾಯಗೊಂಡ ವ್ಯಕ್ತಿಯು ನೆಲದ ಮೇಲೆ ಮಲಗಿರುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಟೋವನ್ನು ಹಿಂದೂ ದೇವತೆ ಸೀತೆಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಹರಿಯಾಣದ ಮೇವಾತ್‌ನ ಮುಸ್ಲಿಂ ವ್ಯಕ್ತಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹಂಚಿಕೊಳ್ಳುವವರು ಹೇಳಿದ್ದಾರೆ.  ಪೋಸ್ಟ್ ಹಿಂಸಾತ್ಮಕ ಸ್ವರೂಪದಿಂದ ಇರುವುದರಿಂದ ನಾವು ಅದರ ಆರ್ಕೈವ್ ಅನ್ನು ಸೇರಿಸುವುದನ್ನು ತಪ್ಪಿಸಿದ್ದೇವೆ. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆ ಸುಳ್ಳಾಗಿದ್ದು, ಈ ಘಟನೆ 2022 ರಲ್ಲಿ ಕರ್ನಾಟಕದ ಚಿತ್ರದುರ್ಗದಲ್ಲಿ ಹಲ್ಲೆಗೊಳಗಾದ ಮುಸ್ಲಿಂ ವ್ಯಕ್ತಿಯನ್ನು ತೋರಿಸುತ್ತದೆ. ಈ ಪ್ರಕರಣದಲ್ಲಿ ಆರೋಪಿಯನ್ನು…

Read More

Fact Check: ಕರ್ನಾಟಕದಲ್ಲಿ ಜೈನ ಮುನಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಮಹೇಶ್ ವಿಕ್ರಂ ಹೆಗ್ಡೆ ಹಂಚಿಕೊಂಡಿದ್ದ ಸುಳ್ಳು ಮತ್ತೆ ವೈರಲ್ 

ಇತ್ತೀಚೆಗೆ, ಕರ್ನಾಟಕದಲ್ಲಿ ಜೈನ ಸನ್ಯಾಸಿಯೊಬ್ಬರ ಮೇಲೆ ಮುಸ್ಲಿಮರಿಂದ ಹಲ್ಲೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಕೈಗೆ ಗಾಯವಾಗಿರುವ ವ್ಯಕ್ತಿಯ ಫೋಟೋ ಒಂದು ಹರಿದಾಡುತ್ತಿದೆ. ಜೈನ ಮುನಿಯ ಮೇಲಿನ ದಾಳಿಕೋರರು ‘ಕಾಂಗ್ರೆಸ್ ಜಿಂದಾಬಾದ್’ ಎಂದು ಘೋಷಣೆ ಕೂಗಿದರು ಎಂದು ಪ್ರತಿಪಾದಿಸಲಾಗುತ್ತಿದೆ. “ಇದು ಕಾಂಗ್ರೆಸ್‌ಗೆ ಮತ ಹಾಕುವ ಹಿಂದೂಗಳ ಭವಿಷ್ಯ” ಎಂದು ಸಂದೇಶದೊಂದಿಗೆ ಈ ಪೋಟೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಈ ಪೋಟೋವನ್ನು ಮೊದಲು ಹರಿಬಿಟ್ಟವರು ಸುಳ್ಳು ಸುದ್ಧಿ ಹರಡಲು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಕುಖ್ಯಾತಿ ಪಡೆದಿರುವ ಪೋಸ್ಟ್‌ ಕಾರ್ಡ್‌…

Read More
ಸಿದ್ದರಾಮಯ್ಯ

Fact Check: 2018ರಲ್ಲಿ ಸಿದ್ದರಾಮಯ್ಯನವರು 8 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಿಸಿದ್ದಾರೆ ಎಂಬುದು ಸುಳ್ಳು

ಕಳೆದ ಫೆಬ್ರವರಿ ತಿಂಗಳಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಕಾನೂನು ಹೊರಡಿಸಿ ತೀವ್ರ ಟೀಕೆಗೆ ಗುರಿಯಾಗಿತ್ತು. ಈಗ ಇದನ್ನೇ ಹಿನ್ನಲೆಯಾಗಿಟ್ಟುಕೊಂಡು “ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಇಲ್ವಂತೆ ! ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರೇ ನೀವು ಕನ್ನಡ ರಾಮಯ್ಯ ಅಲ್ಲ ಕನ್ನಡ ದ್ರೋಹಿ ರಾಮಯ್ಯ” ಎಂದು ಆರೋಪಿಸಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಇಲ್ಲ, ಕನ್ನಡ ಭಾವುಟವನ್ನು ರಾಜ್ಯದ ಅಧಿಕೃತ ಭಾವುಟವನ್ನಾಗಿ ಮಾಡುತ್ತೇವೆ ಎಂದಿದ್ದರು…

Read More
ದುಬೈ

ದುಬೈನ ಸುನ್ನಿ ಮುಸ್ಲಿಮರ ಸಂಘ ಕರ್ನಾಟಕಕ್ಕೆ ಬರಲು ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ ಎಂಬುದು ಸಂಪೂರ್ಣ ಸುಳ್ಳು

ಇತ್ತೀಚೆಗೆ “ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ” ಎಂದು ಸುಳ್ಳು ಹರಿಬಿಡಲಾಗಿತ್ತು. ಆದರೆ ದುಬೈನಲ್ಲಿ ಪ್ರವಾಹದ ಪರಿಸ್ಥಿತಿ ಇದ್ದ ಕಾರಣ ಎಲ್ಲಾ ವಿಮಾನ ಹಾರಾಟಗಳು ಸ್ಥಗಿತವಾಗಿದ್ದವು. ಮತದಾನಕ್ಕೆ ಆಗಮಿಸಲು ಸಹ ಕಷ್ಟಪಡುವಂತಿತ್ತು. ಈ ಕಾರಣಕ್ಕಾಗಿ ಕೇರಳದ ಕೆಲವು ಮುಸ್ಲಿಂ ಸಂಘಟನೆಗಳು ಸರ್ಕಾರದೊಟ್ಟಿಗೆ ಮಾತನಾಡಿ ಎರಡು ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿದ್ದರು. ಈಗ, “ದುಬೈನಲ್ಲಿರುವ ಸುನ್ನಿ ಮುಸ್ಲಿಮರ ಸಂಘ, ಚುನಾವಣೆಯಲ್ಲಿ ‘ಫ್ಯಾಸಿಸ್ಟ್ ಶಕ್ತಿ’ಗಳನ್ನು ಸೋಲಿಸಲು ಮತ್ತು ಕಾಂಗ್ರೆಸ್…

Read More

ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುದು ಸುಳ್ಳು

ಭಾರತದ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಅವರನ್ನು ಭಯೋತ್ಪಾದಕರು, ಧರ್ಮ ದ್ರೋಹಿಗಳು ಎಂದು ಬಿಂಬಿಸುವ ಹುನ್ನಾರಗಳು ನಡೆಯುತ್ತಿರುವುದು ದುರಂತದ ಸಂಗತಿ. ಪ್ರತೀದಿನವೂ ಅನೇಕ ಸುಳ್ಳು ಆರೋಪಗಳನ್ನು ಹೊರಿಸಿ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ನಮ್ಮ ಭಾರತೀಯ ಸಂವಿಧಾನದಲ್ಲಿ ಭಾರತೀಯ ಪ್ರತಿಯೊಬ್ಬ ಪ್ರಜೆಯನ್ನು ಆತನ ಧರ್ಮ, ಜಾತಿ, ಭಾಷೆ, ಹುಟ್ಟಿನ ಸ್ಥಳ, ಬಣ್ಣ ಹೀಗೆ ಯಾವ ಆಧಾರದ ಮೇಲೆಯೂ ತಾರತಮ್ಯ ಎಸಗಬಾರದು ಎಂದು ಹೇಳುತ್ತದೆ. ಆದರೆ ಇಂದು ಆಡಳಿತಾರೂಢ ಪಕ್ಷಗಳೇ ಈ ರೀತಿ ದ್ವೇಷ ರಾಜಕಾರಣ ಮತ್ತು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿರುವುದು….

Read More
ಸರ್ಧಾರ್ ವಲ್ಲಭಬಾಯಿ ಪಟೇಲ್

Fact Check: ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಿಲ್ಲ

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ತೆರವುಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ. ಆದರೆ, “ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್…

Read More