Fact Check | ಅಖಿಲೇಶ್ ಯಾದವ್ ಅವರ ಜೊತೆ ಜ್ಯೋತಿ ಮಲ್ಹೋತ್ರಾ ಇರುವ ಫೋಟೋ ಎಡಿಟೆಡ್‌ ಆಗಿದೆ

ಹರಿಯಾಣದ ಟ್ರಾವೆಲ್ ವ್ಲೋಗರ್ ಮತ್ತು ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಹಿಸಾರ್ ಪೊಲೀಸರು ಮೇ 17, 2025 ರಂದು ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಿದರು. ವರದಿಗಳ ಪ್ರಕಾರ ಅವರು ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಎನ್‌ಕ್ರಿಪ್ಟ್ ಮಾಡಿದ ವೇದಿಕೆಗಳನ್ನು ಬಳಸಿಕೊಂಡು ಪಾಕಿಸ್ತಾನದ ಗುಪ್ತಚರ ಸಂಸ್ಥೆಯೊಂದಿಗೆ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದೀಗ ಈಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರೊಂದಿಗೆ ಇರುವ ಫೋಟೋವೊಂದು ವೈರಲ್‌ ಆಗಿದೆ. ಫೋಟೋದಲ್ಲಿ ಜ್ಯೋತಿ…

Read More

Fact Check | ದಾವೂದ್ ಇಬ್ರಾಹಿಂ ಜೊತೆ ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರೀನಾಟೆ ಎಂದು ಪತ್ರಕರ್ತೆ ಶೀಲಾ ಭಟ್ ಅವರ ಫೋಟೋ ಹಂಚಿಕೊಳ್ಳಲಾಗುತ್ತಿದೆ

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಂತರ, ಭದ್ರತಾ ಸಂಸ್ಥೆಗಳು ಈಗ ಪಾಕಿಸ್ತಾನಕ್ಕಾಗಿ ರಹಸ್ಯವಾಗಿ ಕೆಲಸ ಮಾಡುತ್ತಿದ್ದ ಜನರನ್ನು ಹುಡುಕುವಲ್ಲಿ ನಿರತವಾಗಿವೆ. ಈ ಪ್ರಕರಣದಲ್ಲಿ ಇದುವರೆಗೆ ಹಲವರನ್ನು ಬಂಧಿಸಲಾಗಿದೆ . ಈ ಮಧ್ಯೆ, ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಕಚೇರಿಯಲ್ಲಿ ಕುಳಿತಿರುವ ಮಹಿಳೆಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋವನ್ನು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ನೋಡಿದ ಕೆಲವು ಬಲಪಂಥೀಯ ಖಾತೆಗಳು “ಈಗ…

Read More

Fact Check | ಕನ್ಹಯ್ಯಾ ಕುಮಾರ್ ಅವರಿಗೆ ಕಪಾಳಮೋಕ್ಷ ಮಾಡಿರುವ ಹಳೆಯ ವೀಡಿಯೊವನ್ನು ಇತ್ತೀಚಿನದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ಬಿಹಾರದಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದೆ. ಅಂತಹ ಪರಿಸ್ಥಿತಿಯಲ್ಲಿ, ಎಲ್ಲಾ ಪಕ್ಷಗಳು ಅದಕ್ಕಾಗಿ ತಯಾರಿ ನಡೆಸುತ್ತಿವೆ. ಇದರ ನಡುವೆ ಇದೀಗ ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಬಿಹಾರದಲ್ಲಿ ಇತ್ತೀಚೆಗೆ ನಡೆದ ಘಟನೆಯೆಂದು ಹೇಳಿಕೊಂಡು ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ ರ್ಯಾಲಿಯಂತಹ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕನ್ಹಯ್ಯಾ ಕುಮಾರ್ ಅವರಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡು ಬಂದಿದೆ. ಹಾಗಾಗಿ ಇದನ್ನು ಬಿಹಾರ ಚುನಾವಣ ಪ್ರಚಾರದ ಸಂದರ್ಭದಲ್ಲೇ ನಡೆದಿದೆ ಎಂದು…

Read More

Fact Check | ಇಸ್ತಾನ್‌ಬುಲ್‌ನಲ್ಲಿ ಕಾಂಗ್ರೆಸ್ ಕಚೇರಿ ಇದೆ ಎಂದು ಸಭಾಂಗಣದ ಫೋಟೋ ಹಂಚಿಕೊಂಡು ನಗೆಪಾಟಲಿಗೆ ಒಳಗಾದ ರಿಪಬ್ಲಿಕ್‌ ಟಿವಿ

ರಿಪಬ್ಲಿಕ್ ಟಿವಿ  ಇಸ್ತಾನ್‌ಬುಲ್‌ನಲ್ಲಿರುವ “ಇಸ್ತಾನ್‌ಬುಲ್ ಕಾಂಗ್ರೆಸ್ ಸೆಂಟರ್” ಅನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಚೇರಿ ಎಂದು ತಪ್ಪಾಗಿ ಹೇಳಿಕೊಂಡಿದ್ದಾರೆ. ಈ ಸುದ್ದಿಯನ್ನು ರಿಪಬ್ಲಿಕ್ ಟಿವಿಯ ಚಾನಲ್‌ನಲ್ಲಿ ಪ್ರಸಾರ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷವು ವಿದೇಶದಲ್ಲಿ ಕಚೇರಿಯನ್ನು ಹೊಂದಿದೆ ಎಂಬ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಲಾಗಿದೆ. ಈ ಸುದ್ದಿಯು ಜನರಲ್ಲಿ ಗೊಂದಲವನ್ನು ಉಂಟುಮಾಡಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ರಾಜಕೀಯ ದುರುದ್ದೇಶದಿಂದ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ರಿಪಬ್ಲಿಕ್ ಟಿವಿಯ ಈ ವರದಿಯನ್ನು…

Read More

Fact Check | ವಕ್ಫ್‌ ಕಾಯ್ದೆ ವಿರುದ್ಧ ಪ್ರತಿಭಟನೆ – ಪ್ರತಿಭಟನಾಕಾರರಿಗೆ ಎಸಿಪಿ ಕಾರಿನಲ್ಲೇ ಡ್ರಾಪ್‌ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿ

ವಕ್ಫ್‌ ಕಾಯ್ದೆ ವಿರುದ್ಧ ಪ್ರತಿಭಟನೆ – ಪ್ರತಿಭಟನಾಕಾರರಿಗೆ ಎಸಿಪಿ ಕಾರಿನಲ್ಲೇ ಡ್ರಾಪ್‌ ಎಂದು ಪಬ್ಲಿಕ್‌ ಟಿವಿ ವರದಿಯೊಂದನ್ನು ಪ್ರಕಟಿಸಿದೆ. ಇದನ್ನು ನಿಜವೆಂದು ನಂಬಿ ಹಲವರು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿದ್ದು, ಮಂಗಳೂರು ನಗರ ಪೊಲೀಸರ ವಿರುದ್ದ ವ್ಯಾಪಕವಾಗಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇನ್ನು ಪಬ್ಲಿಕ್‌ ಟಿವಿ ವರದಿ ಪ್ರಕಟಿಸುತ್ತಿದ್ದಂತೆ ಇನ್ನೂ ಹಲವು ಮಾಧ್ಯಮಗಳು  ವಕ್ಫ್‌ ವಿರುದ್ಧದ ಪ್ರತಿಭಟನಾಕಾರರಿಗೆ ಎಸಿಪಿ ಕಾರ್‌ನಲ್ಲಿ ಡ್ರಾಪ್‌ ಮಾಡಲಾಗಿದೆ ಎಂದೇ ವರದಿಯನ್ನು ಮಾಡಿವೆ. ಹೀಗಾಗಿ ಈ ಸುದ್ದಿ ವ್ಯಾಪಕವಾಗಿ ವೈರಲ್‌…

Read More

Fact Check | ಪಶ್ಚಿಮ ಬಂಗಾಳದಲ್ಲಿ ಹಿಂದೂಗಳನ್ನು ಕೊಲ್ಲಲಾಗುತ್ತಿದೆ ಎಂದು ಮಧ್ಯ ಪ್ರದೇಶದ ವೀಡಿಯೊ ಹಂಚಿಕೆ

ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಇದರಲ್ಲಿ ಒಂದು ಗುಂಪು ಮನೆಯೊಂದರ ಮೇಲೆ ದಾಳಿ ಮಾಡುತ್ತಿರುವುದು ಕಂಡು ಬಂದಿದೆ. ಈ ವೀಡಿಯೊ ಪಶ್ಚಿಮ ಬಂಗಾಳದ್ದು ಎಂದು ಅನೇಕ ಬಳಕೆದಾರರು ಹಂಚಿಕೊಳ್ಳುತ್ತಿದ್ದು, ಹಿಂದೂಗಳ ಮನೆಗಳು- ಅಂಗಡಿಗಳನ್ನು ಮುಸಲ್ಮಾನರು ಲೂಟಿ ಮಾಡುತ್ತಿದ್ದಾರೆ ಹಾಗೆಯೇ ಹಿಂದೂಗಳು ಪ್ರತಿಭಟಿಸಿದರೆ ಅವರನ್ನು ಬರ್ಬರವಾಗಿ ಕೊಲ್ಲಲಾಗುತ್ತಿದೆ ಎಂದು ಶೇರ್‌ ಮಾಡಲಾಗುತ್ತಿದೆ. ಇನ್ನು ಕನ್ನಡದಲ್ಲಿ ಕೂಡ ಈ ಪೋಸ್ಟ್‌ ವೈರಲ್‌ ಆಗುತ್ತಿದೆ. ಪ್ರಮುಖವಾಗಿ ಫೇಸ್​ಬುಕ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು, ‘‘ಇದು ಪಾಕಿಸ್ತಾನ ಬಂಗ್ಲಾದೇಶ ವಲ್ಲ. ನಮ್ಮ…

Read More

Fact Check | ಮೋದಿ ಸರ್ಕಾರ ರಾಹುಲ್ ಗಾಂಧಿಗೆ ನೀಡಿದ್ದ VVIP ಸ್ಥಾನಮಾನವನ್ನು ರದ್ದುಗೊಳಿಸಿದೆ ಎಂಬುದು ಸುಳ್ಳು

ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದ ಲೋಕಸಭಾ ಸಂಸದ ಮತ್ತು ಸದನದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ, ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ಒಳಗಾಗುತ್ತಿರುವುದು ಕಂಡುಬರುತ್ತದೆ. ಈ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ರಚನೆಯಾದ ನಂತರ, ರಾಹುಲ್ ಗಾಂಧಿಯನ್ನು ಸಾಮಾನ್ಯ ನಾಗರಿಕರಂತೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ सबसे बड़ा दर्द यही है कि मोदी राज में…

Read More

Fact Check | ಮಹಾರಾಷ್ಟ್ರದ ಹಳೆಯ ರ್ಯಾಲಿ ವೀಡಿಯೊವನ್ನು ಪ. ಬಂಗಾಳದಲ್ಲಿ ಬಜರಂಗದಳದ ರ್ಯಾಲಿ ಎಂದು ಹಂಚಿಕೊಳ್ಳಲಾಗುತ್ತಿದೆ

ಏಪ್ರಿಲ್ ಮೊದಲ ವಾರದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ 2025 ಜಾರಿಗೆ ಬಂದ ನಂತರ, ಪಶ್ಚಿಮ ಬಂಗಾಳ ಸೇರಿದಂತೆ ದೇಶಾದ್ಯಂತ ಮುಸ್ಲಿಮರು ಹೊಸದಾಗಿ ಜಾರಿಗೆ ತಂದ ಕಾನೂನನ್ನು ವಿರೋಧಿಸುತ್ತಿದ್ದಾರೆ ಸುದ್ದಿ ವರದಿಗಳ ಪ್ರಕಾರ ಏಪ್ರಿಲ್ 11, 2025 ರಂದು, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಈ ಪ್ರತಿಭಟನೆಗಳು ಹಿಂಸಾತ್ಮಕವಾಗಿ ಮಾರ್ಪಟ್ಟವು, ಇದರ ಪರಿಣಾಮವಾಗಿ ಹಿಂಸಾಚಾರ ಮತ್ತು ಗಲಭೆಗಳು ನಡೆದವು. ಇದೀಗ ಇದಕ್ಕೆ ಸಂಬಂಧ ಪಟ್ಟಂತೆ ಮಧ್ಯರಾತ್ರಿಯ ಬೃಹತ್ ಬೈಕ್ ರ್ಯಾಲಿಯನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ….

Read More

Fact Check | 40 ವರ್ಷಗಳಲ್ಲಿ ಒಬ್ಬ ವ್ಯಕ್ತಿಯೂ ನನ್ನನ್ನು ಗೌರವಿಸಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬುದು ಸುಳ್ಳು

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನುಅಪಹಾಸ್ಯ ಮಾಡುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ, 40 ವರ್ಷಗಳಲ್ಲಿ ಒಬ್ಬ ವ್ಯಕ್ತಿಯೂ ನನ್ನನ್ನು ಗೌರವಿಸಿಲ್ಲ ಎಂದು ರಾಹುಲ್ ಗಾಂಧಿ ಹೇಳುವುದನ್ನು ಕೇಳಬಹುದು. ವಿಭಿನ್ನ ಕ್ಲಿಪ್‌ಗಳನ್ನು ಸೇರಿಸುವ ಮೂಲಕ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಅನೇಕ ಬಳಕೆದಾರರು ಈ ವಿಡಿಯೋವನ್ನು ವಿವಿಧ ಬರಹಗಳೊಂದಿಗೆ ವೈರಲ್‌ ಮಾಡುತ್ತಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೂಡ ರಾಹುಲ್‌ ಗಾಂಧಿ ಅವರು 40 ವರ್ಷಗಳಲ್ಲಿ ಒಬ್ಬ ವ್ಯಕ್ತಿಯೂ ನನ್ನನ್ನು ಗೌರವಿಸಿಲ್ಲ ಎಂದು ಹೇಳುವುದನ್ನು ಸ್ಪಷ್ಟವಾಗಿ ಕೇಳಬಹುದಾಗಿದೆ. ಹೀಗಾಗಿ ಸಂಚಲನ ಮೂಡಿಸಿರುವ ವಿಡಿಯೋವನ್ನು…

Read More

Fact Check | ವಕ್ಫ್‌ ಬಿಲ್‌ ವಿರೋಧಿಸಿ ಬಾಂಗ್ಲಾದೇಶದಲ್ಲಿ ಮುಸಲ್ಮಾನರಿಂದ ಬ್ರಹತ್‌ ಪ್ರತಿಭಟನೆ ನಡೆದಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ಬ್ಯಾನರ್‌ಗಳನ್ನು ಹಿಡಿದುಕೊಂಡು ಘೋಷಣೆ ಕೂಗುತ್ತ ಮುಸಲ್ಮಾನರ ಗುಂಪು ಬೃಹತ್‌ ಪ್ರತಿಭಟನೆ ನಡೆಸುತ್ತಿರುವ ವೀಡಿಯೊ ಒಂದು ವೈರಲ್ ಆಗುತ್ತಿದೆ. ಇದರಲ್ಲಿ ಸಾವಿರಾರು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿರುವುದನ್ನು ಕಾಣಬಹುದು. ಅನೇಕ ಬಳಕೆದಾರರು, ಇದು ಬಾಂಗ್ಲಾದೇಶದ ಚಿತ್ತಗಾಂಗ್ ನಲ್ಲಿ ಭಾರತದ ವಕ್ಪ್‌ ತಿದ್ದುಪಡಿ ಮಸೂದೆಯ ವಿರುದ್ದದ ಪ್ರತಿಭಟನೆ, ಇದರಲ್ಲಿ ಭಾಗಿಯಾದವರೆಲ್ಲ ಮುಸಲ್ಮಾನರು ಎಂದು ಹೇಳಿಕೊಳ್ಳುತ್ತಿದ್ದಾರೆ. ವಿಡಿಯೋದಲ್ಲಿ ಕೂಡ ಮುಸಲ್ಮಾನರಿಂದ ಬೃಹತ್‌ ಪ್ರತಿಭಟನೆ ನಡೆದಿರುವುದು ಕಂಡು ಬಂದಿರುವುದರಿಂದ ಹಲವರು ವೈರಲ್‌ ವಿಡಿಯೋವನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ…

Read More