Fact Check | ರೇಖಾ ಗುಪ್ತಾ ಅವರು ದೆಹಲಿ ಮುಖ್ಯಮಂತ್ರಿ ಆದ 48 ಗಂಟೆಗಳಲ್ಲಿ 50 ಲಕ್ಷ ರೂ. ಮೌಲ್ಯದ ಕಾರು ಖರೀದಿಸಿದ್ದಾರೆ ಎಂಬುದು ಸುಳ್ಳು

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾದ ನಂತರ, ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಮುಖ್ಯಮಂತ್ರಿಯಾದ 48 ಗಂಟೆಗಳಲ್ಲಿ 50 ಲಕ್ಷ ರೂ. ಮೌಲ್ಯದ ಕಾರನ್ನು ಖರೀದಿಸಲಾಗಿದೆ ಎಂದು ಹೇಳುವ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಹಲವು ಬಳಕೆದಾರರು ಈ ಕುರಿತು ವ್ಯಾಪಕವಾಗಿ ಟೀಕೆ ಮಾಡುತ್ತಿದ್ದಾರೆ. CM बनने के 48 घंटे के भीतर 50 लाख की कार मुख्यमंत्री रेखा गुप्ता 'शीश महल' नहीं जाएंगीसड़क पर ही 'शीश महल' बनवाएंगी।नई…

Read More

Fact Check | ದೆಹಲಿಯಲ್ಲಿ ಬಿಜೆಪಿ ಸರ್ಕಾರದಿಂದ ಯಮುನಾ ನದಿಯ ಶುದ್ಧೀಕರಣದ ವಿಡಿಯೋ ಎಂದು ಅರ್ಥ್ ವಾರಿಯರ್ಸ್ ತಂಡ‌ದ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಇದರಲ್ಲಿ ದೆಹಲಿಯಲ್ಲಿ ಇತ್ತೀಚಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಮುನಾ ನದಿಯ ಶುದ್ಧೀಕರಣವನ್ನು ಮಾಡುತ್ತಿರುವ ವಿಡಿಯೋ ಎಂದು ಸಾಲುಗಳನ್ನು ಬರೆದುಕೊಂಡು ಶೇರ್ ಮಾಡಲಾಗುತ್ತಿದೆ. ಹೀಗಾಗಿ ವಿಡಿಯೋ ಕೂಡ ವೈರಲ್ ಆಗಿದ್ದು, ಸಾಕಷ್ಟು ಮಂದಿ ದೆಹಲಿಯ ಬಿಜೆಪಿ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹೊಗಳುತ್ತಿದ್ದಾರೆ. यमुना मैया की सफाई♥️😇धन्यवाद मोदी जी धन्यवाद रेखा गुप्ता जी 🙏 pic.twitter.com/KQ83lmEQO9 — bhuvaneshwar हिंदू (@bageshwarlal) February…

Read More

Fact Check | ದೆಹಲಿಯಲ್ಲಿ ಬಿಜೆಪಿ ಗೆಲುವಿನ ನಂತರ ಮೊದಲ ಬಾರಿಗೆ ಯಮುನಾ ಆರತಿ ನೆರವೇರಿದೆ ಎಂಬುದು ಸುಳ್ಳು

“ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಬಳಿಕ ಸಾಕಷ್ಟು ಬದಲಾವಣೆಗಳನ್ನು ದೆಹಲಿಯಲ್ಲಿ ಮಾಡುತ್ತಿದೆ. ಈಗ ದೆಹಲಿ ಮರಳಿ ತನ್ನ ಗತವೈಭವವನ್ನು ಪಡೆದುಕೊಳ್ಳುತ್ತಿದೆ. ಈಗ ದೆಹಲಿಯಲ್ಲಿ ಯಮುನಾ ಆರತಿ ಆರಂಭವಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಬರಬೇಕಾಯಿತು.” ಎಂದು ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ದೆಹಲಿ ಮತ್ತೊಮ್ಮೆ ಇಂದ್ರಪ್ರಸ್ಥದತ್ತ ಸಾಗುತ್ತಿದೆ..‌.❤️ ಕೇಜ್ರಿವಾಲ್ ನನ್ನು ದೂರವಿಟ್ಟು ಇನ್ನು ಒಂದು ವಾರವೂ ಕಳೆದಿಲ್ಲ, ಇಂದು ದೆಹಲಿಯ ಘಾಟ್‌ಗಳಲ್ಲಿ ಯಮುನಾ ಆರತಿ ಪ್ರಾರಂಭವಾಗಿದೆ…💓🙏🚩 pic.twitter.com/bDA7ULn8sW — ಶ್ರೇಯಾ🚩🚩🚩Shreya🌹❤️🇮🇳श्रेया 🚩🚩🚩 (@Shreya_Sanatani) February 13, 2025…

Read More

Fact check | ಆಮ್‌ ಆದ್ಮಿ ಪಕ್ಷದ ಸೋಲನ್ನು ಸುಪ್ರಿಯಾ ಶ್ರೀನಾಟೆ ಸಂಭ್ರಮಿಸಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಅವರು ಸಂಭ್ರಮದಿಂದ ನಡೆದುಕೊಂಡು ಬರುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಶೇರ್‌ ಮಾಡುತ್ತಿರುವವರು ಸುಪ್ರಿಯಾ ಶ್ರೀನಾಟೆ ಅವರು ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ ಸೋತಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದ್ದಾರೆ, ಕಾಂಗ್ರೆಸ್‌ ಶೂನ್ಯ ಸಂಪಾದನೆಗಿಂತ ಅವರಿಗೆ ದೆಹಲಿಯಲ್ಲಿ ಆಮ್‌ ಆದ್ಮಿ ಅಧಿಕಾರ ಕಳೆದುಕೊಂಡಿರುವುದು ಹೆಚ್ಚು ಸಂತೋಷವನ್ನು ನೀಡಿದೆ ಎಂದು ಹಲವರು ಬರೆದುಕೊಂಡಿದ್ದಾರೆ. लगातार तीसरी बार कांग्रेस के शून्य पर सिमट जाने के बावजूद चुनाव…

Read More

Fact Check | ದೆಹಲಿ ಚುನಾವಣಾ ಫಲಿತಾಂಶದ ನಂತರ AIMIM ಅಭ್ಯರ್ಥಿ ತಾಹಿರ್ ಹುಸೇನ್ ಮೆರವಣಿಗೆ ನಡೆಸಿದ್ದಾರೆ ಎಂಬುದು ಸುಳ್ಳು

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ, ಮುಸ್ತಫಾಬಾದ್ ವಿಧಾನಸಭಾ ಕ್ಷೇತ್ರದ AIMIM ಅಭ್ಯರ್ಥಿ ತಾಹಿರ್ ಹುಸೇನ್, ಚುನಾವಣೆಯಲ್ಲಿ ಸೋತಿದ್ದರೂ ಮೆರವಣಿಗೆ ನಡೆಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಹೀಗಾಗಿ ಹಲವರು ತಾಹಿರ್‌ ಹುಸೇನ್‌ ಅವರು ಬಿಜೆಪಿಗೆ ರಹಸ್ಯವಾಗಿ ಬೆಂಬಲ ನೀಡಿದ್ದಾರೆ. ದೆಹಲಿ ರಾಜಕಾರಣದಲ್ಲಿ ಹುಸೇನ್‌ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ ಎಂದು ಹಲವರು ಬರೆದುಕೊಳ್ಳುತ್ತಿದ್ದಾರೆ.  दिल्ली दंगों का आरोपी ताहिर हुसैन को मुस्तफ़ाबाद के लोगों ने ३०…

Read More

Fact Check | ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರು ಸೋತರೂ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಫೆಬ್ರವರಿ 5 ರಂದು ನಡೆದ 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ,  ಬಿಜೆಪಿ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಗಮನಾರ್ಹ ಜಯ ಸಾಧಿಸಿತು. ಈ ಮೂಲಕ 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ.  2015 ರಿಂದ ಅಧಿಕಾರದಲ್ಲಿದ್ದ ಆಮ್ ಆದ್ಮ ಪಕ್ಷ (ಎಎಪಿ) 22 ಸ್ಥಾನಗಳನ್ನು ಗೆದ್ದಿದೆ  ಕಾಂಗ್ರೆಸ್ ಸತತ ಮೂರನೇ ಅವಧಿಗೆ ಯಾವುದೇ ಸ್ಥಾನಗಳನ್ನು ಗಳಿಸಲಿಲ್ಲ. ಹೀಗಿರುವಾಗ ಈಗ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರು ಹೀನಾಯವಾಗಿ ಸೋತರು ಸಂಭ್ರಮಿಸಿದ್ದಾರೆ ಎಂದು…

Read More

Fact Check | ಅರವಿಂದ್ ಕೇಜ್ರಿವಾಲ್‌ಗೆ ಮತ ಹಾಕುವಂತೆ ಮುಸ್ಲಿಂ ಧರ್ಮಗುರುಗಳು ಫತ್ವಾ ಹೊರಡಿಸಿದ್ದಾರೆ ಎಂಬುದು ಸುಳ್ಳು

ಫೆಬ್ರವರಿ 5 ರಂದು ದೆಹಲಿಯ ಎಲ್ಲಾ 70 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಜನವರಿ ತಿಂಗಳಿನಲ್ಲಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಉನ್ನತ ಮಟ್ಟದ ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳು ಸೇರಿದಂತೆ ಮಹತ್ತರವಾದ ರಾಜಕೀಯ ಸಭೆ ಸಮಾರಂಭಗಳನ್ನು ನಡೆಸಲಾಗಿದೆ.,  ಇದರ ನಡುವೆ ಇದೀಗ ದೆಹಲಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ ಹಾಕುವಂತೆ ಮುಸ್ಲಿಂ ಧರ್ಮ ಗುರುಗಳು ಫತ್ವಾ ಹೊರಡಿಸಿದ್ದಾರೆ ಎಂಬ…

Read More

Fact Check | ಅಖಿಲೇಶ್‌ ಯಾದವ್‌ ಅವರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂಬುದು ಸುಳ್ಳು

ವಿಶ್ವದ ಅತಿ ದೊಡ್ಡ ಧಾರ್ಮಿಕ ಸಭೆ ಎಂದು ಕರೆಯಲ್ಪಡುವ ಮಹಾ ಕುಂಭಮೇಳ 2025 ಪ್ರಸ್ತುತ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಲ್ಲಿ ನಡೆಯುತ್ತಿದೆ. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಈ ಮಹಾ ಕಾರ್ಯಕ್ರಮವು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮಕ್ಕೆ ಭಾರತದಾದ್ಯಂತ ಸುಮಾರು 40 ಕೋಟಿ ಭಕ್ತರು 45 ದಿನಗಳ ಕಾಲ ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗುತ್ತಿದೆ. ಇದು ಹಿಂದೂಗಳಿಗೆ ಮಹತ್ವದ ಆಧ್ಯಾತ್ಮಿಕ ಆಚರಣೆಯಾಗಿದೆ. ಇದೀಗ ಇದರಲ್ಲೂ ರಾಜಕೀಯದ ಚರ್ಚೆ ಬಹಳ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. बिना…

Read More

Fact Check | ಎಎಪಿ ನಾಯಕ ಅವಧ್ ಓಜಾ ಅವರು ಮನೀಶ್ ಸಿಸೋಡಿಯಾ ಅವರನ್ನು ಹೇಡಿ ಎಂದು ಕರೆದಿದ್ದಾರೆ ಎಂಬುದು ಸುಳ್ಳು

ಆಮ್ ಆದ್ಮಿ ಪಕ್ಷದ ನಾಯಕ ಅವಧ್‌ ಓಜಾ ಅವರು ಮುಂಬರುವ ದೆಹಲಿ ರಾಜ್ಯ ಚುನಾವಣೆಯಲ್ಲಿ ಪಟ್ಟರ್ಗಂಜ್ ಕ್ಷೇತ್ರದಲ್ಲಿ ಸ್ಪರ್ಧಿಸದಿದ್ದಕ್ಕಾಗಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಅವರನ್ನು ಹೇಡಿ ಎಂದು ಕರೆದಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಡಲಾಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ಸಾಕಷ್ಟು ಮಂದಿ ಆಮ್‌ ಆದ್ಮಿ ಪಕ್ಷದ ತನ್ನ ಆಂತರಿಕ ಕಲಹದ ಕಾರಣದಿಂದಾಗಿ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಬರೆದುಕೊಳ್ಳುತ್ತಿದ್ದಾರೆ. पटपड़गंज से आप-दा के प्रत्याशी अवध ओझा का…

Read More
ದೆಹಲಿ

Fact Check: ದೆಹಲಿಯ ರಸ್ತೆಗಳ ಪರಿಸ್ಥಿತಿ ಎಂದು ಹರಿಯಾಣದ ರಸ್ತೆಯ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್

ಇತ್ತೀಚೆಗೆ ಭಾರತೀಯ ಜನತಾ ಪಾರ್ಟಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ದೆಹಲಿಯ ರಸ್ತೆಗಳ ಸಧ್ಯದ ಪರಿಸ್ಥಿತಿಯನ್ನು ತೋರಿಸುವ ಮೂಲಕ ಅವರವಿಂದ್‌ ಕೇಜ್ರಿವಾಲ್‌ ಅವರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದೆ. ಈ ವಿಡಿಯೋದಲ್ಲಿ ಇಬ್ಬರು ಯುವತಿಯರು ಕುಳಿತಿರುವ ಆಟೋ ನೀರು ತುಂಬಿದ ಗುಂಡಿಬಿದ್ದ ರಸ್ತೆಯಲ್ಲಿ ಸಾಗುವುದನ್ನು ನೋಡಬಹುದು. ಇಬ್ಬರು ಯುವತಿಯರು ರಸ್ತೆಯ ದುರಾವಸ್ಥೆಯ ಕುರಿತು ಬೇಸರ ವ್ಯಕ್ತಪಡಿಸುತ್ತಾರೆ. ನಂತರ ಆಟೋ ಚಾಲಕ ಚುನಾವಣೆ ಹತ್ತು ವರ್ಷಗಳ ಹಿಂದೆಯೇ ನಡೆದಿದೆ. ನೋಡಿ ದಿಲ್ಲಿಯನ್ನು ಯಾವ ಸ್ಥಿತಿಗೆ ತಂದುಬಿಟ್ಟರು…

Read More