Fact Check | ದೆಹಲಿಯಲ್ಲಿ ‘ರಾಮ್ ಕಚೋರಿ’ ಎಂಬ ಹೆಸರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಅಂಗಡಿ ನಡೆಸುತ್ತಿದ್ದಾರೆ ಎಂಬುದು ಸುಳ್ಳು

“ಕೇಸರಿ ಸ್ಕಾರ್ಫ್‌ಗಳನ್ನು ಧರಿಸಿ, ಕೇಸರಿ ಧ್ವಜವನ್ನು ಹಿಡಿದುಕೊಂಡು ಅಂಗಡಿಯ ಮುಂದೆ ಗುಂಪೊಂದು ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಗೆ ಕಾರಣ ಮುಸ್ಲಿಂ ವ್ಯಕ್ತಿಯೊಬ್ಬ ರಾಮ್ ಕಚೋರಿ ಎಂಬ ಹೆಸರಿನಲ್ಲಿ ಅಂಗಡಿಯನ್ನು ಹೊಂದಿದ್ದು, ದೆಹಲಿಯ ಯಮುನಾ ಬಜಾರ್‌ನಲ್ಲಿರುವ ದೇವಾಲಯದ ಬಳಿ ಈ ಅಂಗಡಿ ಇದ್ದು,  ಇದರ ಮಾಲೀಕ ನಿಯಾಜ್ ಖಾನ್ ಎಂದು ತಿಳಿದುಬಂದಿದೆ. ಇಷ್ಟೇ ಆಗಿದ್ದರೆ ಏನು ಆಗುತ್ತಿರಲಿಲ್ಲ.! ಆದರೆ ದೇವಾಲಯದ ಸಂಕೀರ್ಣದಲ್ಲಿ ಮಟನ್ ಕುರ್ಮವನ್ನು ಆರ್ಡರ್ ಮಾಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗುತ್ತಿದೆ. होटल और…

Read More

Fact Check | ಅಂಗಡಿ ಮಾಲೀಕರು ಹೆಸರು ಪ್ರದರ್ಶಿಸಬೇಕು ಎಂಬ ಆದೇಶದ ವಿರುದ್ಧ ‘ದ ಗ್ರೇಟ್‌ ಖಲಿ’ ಪ್ರತಿಭಟಿಸಿದ್ದಾರೆ ಎಂಬುದು ಸುಳ್ಳು

ಖ್ಯಾತ ಕುಸ್ತಿಪಟು ದಲಿಪ್ ಸಿಂಗ್ ರಾಣಾ ಎಂದೂ ಕರೆಯಲ್ಪಡುವ ದಿ ಗ್ರೇಟ್ ಖಲಿ ಮುಸ್ಲಿಂ ಮಾರಾಟಗಾರರ ಗಾಡಿಯಿಂದ ಮಾವಿನ ಹಣ್ಣುಗಳನ್ನು ತಿನ್ನುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಂಗಡಿಗಳ ಮೇಲೆ ನಾಮಫಲಕಗಳನ್ನು ಕಡ್ಡಾಯಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರದ ವಿರುದ್ಧ ಖಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹಲವಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ಹಲವು ಪೋಸ್ಟ್‌ಗಳು ವೈರಲ್‌ ಆಗುತ್ತಿದೆ.  ಉತ್ತರ ಪ್ರದೇಶದ ರಾಜಕೀಯದಲ್ಲಿ ಅಂಗಡಿಗಳ ಮೇಲೆ…

Read More

Fact Check | ಸೇನೆಯಲ್ಲಿ ಸೇವೆ ಸಲ್ಲಿಸಿದ ಮೋಹನ್‌ ಸಿಂಗ್‌ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಸಿಖ್ ವ್ಯಕ್ತಿಯ ಚಿತ್ರವನ್ನು ಒಳಗೊಂಡ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಅವರು ಭಾರತದ ಸ್ವಾತಂತ್ರ್ಯ ಪೂರ್ವದಲ್ಲಿ INA ( ಇಂಡಿಯನ್‌ ನ್ಯಾಷನಲ್‌ ಆರ್ಮಿ)ಯಲ್ಲಿ ಸೇವೆ ಸಲ್ಲಿಸಿದ್ದರು ಎಂದು ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಫೋಟೋದೊಂದಿಗೆ ಟಿಪ್ಪಣಿಯನ್ನು ನೋಡಿದ ಹಲವರು ಇದು ನಿಜವಿರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. आओ कोफीरो, में तुमको बताऊ, आज़ादी कैसे आई थी 😱😭 pic.twitter.com/HD4GJ3CwJr — सोया BEAN 😎🤟 (@ABCD_12345321) July 11, 2024…

Read More

Fact Check | ಕಳೆದ 7 ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲವೆಂದು ಸುಳ್ಳು ಹೇಳಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕಳೆದ ಏಳು ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿಕೆಯನ್ನು ನೀಡಿದ್ದಾರೆ. ಇದು ಲೋಕಸಭೆಯ ಕಲಾಪಗಳನ್ನು ವೀಕ್ಷಿಸಿದವರಿಗೆ ಆಘಾತವನ್ನು ಉಂಟುಮಾಡಿದೆ. ಜೊತೆಗೆ ಸಾರ್ವಜನಿಕ ವಲಯದಲ್ಲಿ ಕೂಡ ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಅದರಲ್ಲೂ ಕೇಂದ್ರ ಶಿಕ್ಷಣ ಸಚಿವರೇ ಈ ರೀತಿಯಾಗಿ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದರೆ ಹೇಗೆ ಎಂಬ ಪ್ರಶ್ನೆಗಳು ಕೂಡ ಕಾಡೋದಕ್ಕೆ ಆರಂಭವಾಗಿದೆ. ಶಿಕ್ಷಣ ಸಚಿವರು ಹೇಳಿದ್ದು ಏನು?…

Read More

Fact Check | ಕೊಲ್ಹಾಪುರದಲ್ಲಿ ಕಾಂಗ್ರೆಸ್‌ ಸಂಸದ ಮುಸ್ಲಿಂ ಮಹಿಳೆಯ ಬಳಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಈ ಫೋಟೋ ನೋಡಿ “ಮಹಾರಾಷ್ಟ್ರದ ಕೊಲ್ಹಾಪುರದ ಕಾಂಗ್ರೆಸ್ ಸಂಸದ ಛತ್ರಪತಿ ಶಾಹು ಶಾಹಜಿ ಅವರು ತಮ್ಮ ಎರಡೂ ಕಿವಿಗಳನ್ನು ಹಿಡಿದು ಮುಸ್ಲಿಂ ಮಹಿಳೆಯ ಬಳಿ ಕ್ಷಮೆ ಕೇಳಿದ್ದಾರೆ. ಕಾಂಗ್ರೆಸಿಗರು ಎಂದಿಗೂ ಕೂಡ ಹೀಗೆ  ಹಿಂದೂಗಳ ಬಳಿ ಕ್ಷಮೆ ಕೇಳುವುದಿಲ್ಲ. ಆದರೆ ಬೇರೆ ಸಮುದಾಯದ ಬಳಿ ವೋಟಿಗಾಗಿ ಏನು ಬೇಕಾದರು ಮಾಡುತ್ತಾರೆ” ಎಂಬ ಬರಹಗಳೊಂದಿಗೆ ಕಾಂಗ್ರೆಸ್ ಸಂಸದ ಛತ್ರಪತಿ ಶಾಹು ಶಾಹಜಿ  ಅವರ ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋ ನೋಡಿದ ಹಲವರು ಕಾಂಗ್ರೆಸ್‌ ಸಂಸದ ನಿಜಕ್ಕೂ ಕ್ಷಮೆ…

Read More

Fact Check: ಸೋನಿಯಾ ಗಾಂಧಿ ಯೌವ್ವನದ ಪೋಟೋ ಎಂದು ಜೇಮ್ಸ್ ಬಾಂಡ್ ಸರಣಿಯ ಉರ್ಸುಲಾ ಆಂಡ್ರೆಸ್ ನಟಿಯ ಕೊಲಾಜ್ ಹಂಚಿಕೆ

ಎರಡು ಚಿತ್ರಗಳ ಕೊಲಾಜ್ ಒಂದು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಒಂದು ಕಡೆ ರಾಜ್ಯಸಭಾ ಸಂಸದೆ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಚಿತ್ರವನ್ನು ಬಳಸಲಾಗಿದೆ. ಮತ್ತೊಂದೆಡೆ, ವಿದೇಶಿ ನಟಿಯ ಚಿತ್ರವನ್ನು ಬಳಸಲಾಗಿದೆ. ಈ ಕೊಲಾಜ್ ವೈರಲ್ ಆಗುತ್ತಿದ್ದಂತೆ, ಅದರಲ್ಲಿನ ಮೊದಲ ಚಿತ್ರ ಸೋನಿಯಾ ಗಾಂಧಿ ಅವರದು ಎಂದು ಹೇಳಲಾಗುತ್ತಿದೆ. ಮೊದಲ ಚಿತ್ರವು ಅವರ ಯೌವನದದು ಎಂದು ಸಹ ಹೇಳಲಾಗುತ್ತಿದೆ. ಎರಡು ಚಿತ್ರಗಳ ಕೊಲಾಜ್ ಅನ್ನು ನೇಷನ್ ಫಸ್ಟ್ ಎಂಬ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ….

Read More

Fact Check | ಮದರಾಸದಲ್ಲಿ ಬಾಲಕನನ್ನು ತಲೆಕೆಳಗಾಗಿ ನೇತು ಹಾಕಿರುವ ವಿಡಿಯೋ ಭಾರತದ್ದಲ್ಲ

“ಈ ವಿಡಿಯೋ ನೋಡಿ ನೀಲಿ ಬಣ್ಣದ ಕುರ್ತಾ, ಪೈಜಾಮ ತೊಟ್ಟಿದ್ದ ಮಗುವಿನ ಕಾಲುಗಳನ್ನು ಹಗ್ಗದಿಂದ ಕಟ್ಟಿ, ತಲೆಕೆಳಗಾಗಿ ನೇತು ಹಾಕಲಾಗಿದೆ. ಮುಸ್ಲಿಂ ಪ್ರಾರ್ಥನೆಯ ಟೋಪಿಯನ್ನು ಧರಿಸಿರುವ ಹಲವಾರು ಹುಡುಗರು ಕುರಾನ್ ಓದುವುದನ್ನು ಕೂಡ ಈ ವಿಡಿಯೋದಲ್ಲಿ ನೀವು ಕಾಣಬಹುದಾಗಿದೆ. ಭಾರತೀಯ ಮದ್ರಾಸದಲ್ಲಿ ಬಾಲಕಿಯನ್ನು ಶಿಕ್ಷಿಸುತ್ತಿರುವ ರೀತಿಯನ್ನು ನೋಡಿದರೆ, ಅಲ್ಲಿನ ಕ್ರೂರತೆ ಏನು ಎಂಬುದು ಅರ್ಥವಾಗುತ್ತದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ವಿಡಿಯೋವನ್ನು ಬಳಸಿಕೊಂಡು ಎಕ್ಸ್‌ ಖಾತೆಯ ಬಳಕೆದಾರರೊಬ್ಬರು, “ಇದು ಯಾವ ಶಾಲೆ ಎಂದು…

Read More

Fact Check | ಹಿಂದೂಗಳು ಭಾರತ ತೊರೆಯುವಂತೆ ಮೌಲನ ಮದನಿ ಇತ್ತೀಚೆಗೆ ಹೇಳಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಜಮೀಯತ್ ಉಲಾನಾ-ಐ-ಹಿಂದ್ ಅಧ್ಯಕ್ಷ ಮೌಲಾನ ಮಹಮೂದ್ ಅಸಾದ್ ಮದನಿ ಅವರು ಈ ದೇಶ ನಮ್ಮದು ಮತ್ತು ನಾವು ದೇಶದ ಬಗ್ಗೆ ನಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತೇವೆ. ನಮ್ಮ ಧರ್ಮ ಉಡುಗೆ-ತೊಡುಗೆ, ಆಚಾರ-ವಿಚಾರ, ಆಹಾರ ಪದ್ಧತಿ ಬೇರೆ ಬೇರೆ ಮತ್ತು ನೀವು ನಮ್ಮ ಧರ್ಮವನ್ನು ಸಹಿಸದಿದ್ದರೆ ಬೇರೆಡೆಗೆ ಹೋಗಿ ಎಂದು ಹೇಳಿದ್ದಾರೆ” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿಗೆ ವೈರಲ್ ಆಗಿದೆ BJP left by 32 seats in…

Read More

Fact Check | ಅನಂತ್ ಅಂಬಾನಿ ಮದುವೆಯಲ್ಲಿ ಪ್ರಧಾನಿ ಮೋದಿ ಸ್ವಾಮಿ ಅವಿಮುಕ್ತೇಶ್ವರಾನಂದರ ಆಶೀರ್ವಾದ ಪಡೆದಿಲ್ಲ ಎಂಬುದು ಸುಳ್ಳು

“ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆಯನ್ನು ವಿರೋಧಿಸಿದ ಕಾರಣಕ್ಕಾಗಿ ಪ್ರಧಾನಿ ಮೋದಿ ಅನಂತ್ ಅಂಬಾನಿ ಅವರ ವಿವಾಹದಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯರ ಆಶೀರ್ವಾದವನ್ನು ಪಡೆಯಲಿಲ್ಲ.”  ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಜೊತೆಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ದ್ವಾರಕಾ ಪೀಠದ ಶಂಕರಾಚಾರ್ಯ, ಸ್ವಾಮಿ ಸದಾನಂದ ಸರಸ್ವತಿ ಅವರ ಆಶೀರ್ವಾದ ಪಡೆಯಲು ಮೋದಿ ಕಾಣಿಸಿಕೊಂಡಿರುವ ವೀಡಿಯೊವನ್ನು ಪೋಸ್ಟ್ ಒಳಗೊಂಡಿದ್ದು, ಆದರೆ ಸ್ವಾಮಿ ಅವಿಮುಕ್ತೇಶ್ವರರ ಆಶೀರ್ವಾದವನ್ನೇ ಪ್ರಧಾನಿ ಮೋದಿ ಅವರು ಪಡೆಯಲಿಲ್ಲ ಎನ್ನಲಾಗಿದೆ. अंबानी के यहां बैठे दो शंकराचार्य में से…

Read More

Fact Check | ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಭಾರತದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿಯ ಮೆಟ್ರೋದಲ್ಲಿ ಓಡಾಡುತ್ತಾರೆ. ಹಾಗೆಯೆ ಅವರು ಈ ದಿನ ದೆಹಲಿಯ ಮೆಟ್ರೋದಲ್ಲಿ ಓಡಾಡುವಾಗ ಈ ವಿಡಿಯೋವನ್ನು ಚಿತ್ರಿಸಲಾಗಿದೆ. ಇದು ಮೋದಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ” ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೆಹಲಿಯ ಮೆಟ್ರೋದಲ್ಲಿ ಪ್ರಯಾಣಿಸಿದ ವಿಡಿಯೋವೊಂದನ್ನು ಹಂಚಿಕೊಂಡು ಸಾಕಷ್ಟು ಜನ ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ. 👇 She is the current Finance Minister of…

Read More