Fact Check | ಆಜಾನ್ ಸಮಯದಲ್ಲಿ ಧ್ವನಿವರ್ಧಕದ ಮೂಲಕ ‘ಭಜನೆ ಮತ್ತು ಕೀರ್ತನೆ’ ಹಾಕುವಂತಿಲ್ಲ ಎಂಬ ಪ್ರತಿಪಾದನೆ ಸುಳ್ಳು

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಆಜಾನ್ ಸಮಯದಲ್ಲಿ ಭಜನೆ ಮತ್ತು ಕೀರ್ತನೆಗಳಂತಹ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರ ವಿಡಿಯೋವನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಈ ವಿಡಿಯೋವನ್ನು ನೋಡಿ ಮಹಾರಾಷ್ಟ್ರದ ಪೊಲೀಸ್‌ ಇಲಾಖೆ ಮುಸಲ್ಮಾನರ ಪರವಾಗಿ ನಿಂತಿದೆ. ಇದರಿಂದ ಮುಂದೆ ಹಿಮಧುಗಳು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹಲವರು ಬರೆದುಕೊಳ್ಳುತ್ತಿದ್ದಾರೆ. ये क्या हो रिया… ??? हिंदू…आप सोते रहो 😠😡👇अभी तो नाशिक से आदेश आया सनातनियों…आने वाले…

Read More

Fact check | ಯೋಗಿ ಆದಿತ್ಯನಾಥ್ ವಿರುದ್ಧ ಯೇತಿ ನರಸಿಂಹಾನಂದರು ಟೀಕಿಸಿರುವ ಹಳೆಯ ವಿಡಿಯೋ ಮತ್ತೆ ವೈರಲ್‌

“ಯುಪಿಯ ಗಾಜಿಯಾಬಾದ್‌ನಲ್ಲಿರುವ ದಸ್ನಾದೇವಿ ದೇವಸ್ಥಾನದ ಮಹಂತ್ ಯತಿ ನರಸಿಂಹಾನಂದ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ಈ ಆಕ್ರೋಶಕ್ಕೂ ಕಾರಣವಿದೆ. ಹಿಂದೂ ರಕ್ಷಣಾ ದಳದ ಅಧ್ಯಕ್ಷ ಭೂಪೇಂದ್ರ ತೋಮರ್ ಅಲಿಯಾಸ್ ಪಿಂಕಿ ಚೌಧರಿ ವಿರುದ್ಧ ಗೂಂಡಾ ಕಾಯ್ದೆ ವಿರುದ್ಧ ಗಾಜಿಯಾಬಾದ್‌ನ ಡಿಎಂ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿ ಪಿಂಕಿ ಚೌಧರಿ ಅವರನ್ನು ಬೆಂಬಲಿಸಲು ದಸ್ನಾದೇವಿ ದೇವಸ್ಥಾನದಿಂದ ಡಿಎಂ ಕಚೇರಿಗೆ ಹೋಗುತ್ತಿದ್ದ ಮಹಾಮಂಡಲೇಶ್ವರ ಯತಿ ನರಸಿಂಹಾನಂದ ಗಿರಿ ಅವರನ್ನು ಪೊಲೀಸರು…

Read More

Fact Check | 2024ರಲ್ಲಿ ಉತ್ತರಾಖಂಡ್‌ನಲ್ಲಿ ಮುಸಲ್ಮಾನರ ಜನಸಂಖ್ಯೆ ಶೇ.16ರಷ್ಟು ಹೆಚ್ಚಾಗಿದೆ ಎಂಬುದು ಸುಳ್ಳು

“ದಯವಿಟ್ಟು ಗಮನಿಸಿ, ದೇಶಾದ್ಯಂತ ಮುಸಲ್ಮಾನರ ಜನಸಂಖ್ಯೆ ಪ್ರತಿ ವರ್ಷ ಭಯಾನಕವಾಗಿ ಏರಿಕೆಯಾಗುತ್ತಿದೆ. ಈ ಬಗ್ಗೆ ಎಚ್ಚರ ವಹಿಸಬೇಕು ಇದಕ್ಕೆ ಉತ್ತಮ ಉದಾಹರಣೆಯೆಂದರೆ ಉತ್ತರಖಂಡದಲ್ಲಿ ಮುಸ್ಲಿಂ ಜನಸಂಖ್ಯೆಯು 2024ರ ಆರಂಭದಿಂದ ಕೇವಲ 10 ತಿಂಗಳಲ್ಲಿಯೇ ಶೇಕಡ 16ರಷ್ಟು ಏರಿಕೆಯಾಗಿದೆ. ಈ ಹಿಂದೆ ಮುಸಲ್ಮಾನರ ಜನಸಂಖ್ಯೆಯಲ್ಲಿ ಶೇಕಡ 1.5 ರಷ್ಟು ಇತ್ತು. ಇದು ಹಿಂದೂಗಳಿಗೆ ಅಪಾಯ” ಎಂಬ ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ALARMING- Muslim Population in Uttarakhand Year 2000 : 1.5%Year 2024 :…

Read More

Fact Check | ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡುತ್ತಿದೆ ಎಂಬುದು ಸುಳ್ಳು ಸುದ್ದಿ

“ ದೇಶದ ಬಡ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಅದರಲ್ಲೂ ಡಿಜಿಟಲ್‌ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಲ್ಯಾಪ್‌ಟಾಪ್ ಯೋಜನೆ 2024 ಕ್ಕಾಗಿ ಅಪ್ಲಿಕೇಶನ್‌ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಗಾಗಿ ತಮ್ಮದೇ ಆದ ಲ್ಯಾಪ್‌ಟಾಪ್ ಖರೀದಿಸುವ ಸ್ಥಿತಿಯಲ್ಲಿಲ್ಲದ ಮತ್ತು ಅವರ ಶಿಕ್ಷಣದ ಮಟ್ಟದಲ್ಲಿ ಲ್ಯಾಪ್‌ಟಾಪ್ ಅಗತ್ಯವಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೋಜನೆಯು ಆರಂಭಿಸಲಾಗಿದೆ. ಈ ಲಿಂಕ್‌ ಕ್ಲಿಕ್‌ ಮಾಡಿ, ಯೋಜನೆಯ ಲಾಭ ಪಡೆಯಿರಿ”  ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಮತ್ತು ವಾಟ್ಸ್‌ಆಪ್‌ನಲ್ಲಿ ವ್ಯಾಪಕವಾಗಿ…

Read More

Fact Check | ಮಣಿಪುರದಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯಿಂದ ಕ್ರಿಶ್ಚಿಯನ್ ಮಹಿಳೆಯ ಮೇಲೆ ಹಲ್ಲೆ ನಡೆದಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಮಣಿಪುರದಲ್ಲಿನ ಗಲಭೆಯಲ್ಲಿ ಕ್ರೈಸ್ತರ ಮಾರಣಹೋಮ ನಡೆಯುತ್ತಿದೆ. ಅವರ ರಕ್ಷಣೆಗೆ ಯಾರು ಧಾವಿಸುತ್ತಿಲ್ಲ. ಈಗಾಗಲೇ ಸಾವಿರಾರು ಕ್ರೈಸ್ತರು ಮಣಿಪುರದಲ್ಲಿನ ಸಶಸ್ತ್ರ ಪಡೆಗಳ ದಾಳಿಯಿಂದ ಸಾವನ್ನಪ್ಪಿದ್ದಾರೆ. ಈಗ ಅಮಾಯಕ ಕ್ರಿಶ್ಚಿಯನ್ ಮಹಿಳೆಯೊಬ್ಬರನ್ನು, ಇದೇ ಸಶಸ್ತ್ರ ಪಡೆ ಅಮಾನುಷವಾಗಿ ಹಲ್ಲೆ ನಡೆಸಿ ಕೊಂದಿದ್ದಾರೆ. ಈ‌ ಮೂಲಕ ಈಗ ಅಲ್ಲಿ ಉಳಿದಿರುವ ಕೆಲವೇ ಕೆಲವು ಕ್ರೈಸ್ತರಲ್ಲೂ ಭಯದ ವಾತಾವರಣವನ್ನು ನಿರ್ಮಿಸಲು ಮುಂದಾಗುತ್ತಿದ್ದಾರೆ. ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ವೈರಲ್ ವಿಡಿಯೋದಲ್ಲಿ ಮಹಿಳೆಯೊಬ್ಬರನ್ನು ಥಳಿಸುತ್ತಿರುವುದು ಮತ್ತು ತನ್ನನ್ನು ಹೊಡೆಯದಂತೆ ಮಹಿಳೆ ಅಂಗಲಾಚುತ್ತಿರುವುದನ್ನು…

Read More

Fact Check | ರಾಸಾಯನಿಕಗಳಿಂದ ಕೃತಕ ಹಾಲು ಉತ್ಪಾದನೆ ಎಂಬ ವಿಡಿಯೋ ಸುಳ್ಳು ನಿರೂಪಣೆಯಿಂದ ಕೂಡಿದೆ

“ಸಾಮಾಜಿಕ ಜಾಲತಾಣದಲ್ಲಿ ರಾಸಾಯನಿಕವೊಂದನ್ನು ಬಳಸಿ ಹಾಲನ್ನು ತಯಾರಿಸಲಾಗುತ್ತಿದೆ. ಇದನ್ನು ಹೇಗಾದರು ಮಾಡಿ ನಿಲ್ಲಿಸಬೇಕಾಗಿದೆ. ರೈಲ್ವೇ ನಿಲ್ದಾಣ ಹಾಗೂ ಬಸ್‌ ನಿಲ್ದಾಣಗಳಲ್ಲಿ ಕಾಫಿ, ಟೀ ಸೇವಿಸುವವರು ಬಹಳಷ್ಟು ಎಚ್ಚರವನ್ನು ವಹಿಸಬೇಕು, ಇದು ಎಲ್ಲರಿಗೂ ಹೇಳುತ್ತಿರುವುದಲ್ಲ. ಆದರೆ ಇಂತಹದೊಂದು ಜಾಲ ಬಹಳ ದೊಡ್ಡ ಮಟ್ಟದಲ್ಲಿ ಇದೆ. ಈ ಬಗ್ಗೆ ದಯವಿಟ್ಟು ಎಲ್ಲರೂ ಎಚ್ಚರದಿಂದಿರಿ”  ಎಂದು ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇನ್ನೂ ಕೆಲವರು ಆರೋಗ್ಯ ಸಂಸ್ಥೆ (WHO) ಪ್ರಕಾರ ಭಾರತದಲ್ಲಿ ಕೇವಲ 14 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತದೆ….

Read More

Fact Check | ದೀಪಾವಳಿಯಂದು ಚೀನಾ ಭಾರತಕ್ಕೆ ಅಸ್ತಮಾ ಉಂಟುಮಾಡುವ ಪಟಾಕಿಗಳನ್ನು ಕಳುಹಿಸುತ್ತಿದೆ ಎಂಬುದು ಸುಳ್ಳು

“ಪ್ರಮುಖ ಮಾಹಿತಿ… ಗುಪ್ತಚರ ಪ್ರಕಾರ, ಪಾಕಿಸ್ತಾನವು ನೇರವಾಗಿ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲದ ಕಾರಣ, ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಬಯಸಿದೆ.. ಭಾರತದಲ್ಲಿ ಅಸ್ತಮಾ ಹರಡಲು ಕಾರ್ಬನ್ ಮಾನಾಕ್ಸೈಡ್ ಅನಿಲಕ್ಕಿಂತ ಹೆಚ್ಚು ವಿಷಕಾರಿ ಪಟಾಕಿಗಳನ್ನು ಚೀನಾ ಅಭಿವೃದ್ಧಿಪಡಿಸಿದೆ. ಇದಲ್ಲದೆ, ಕುರುಡುತನಕ್ಕೆ ಕಾರಣವಾಗುವ ಕಣ್ಣಿನ ಕಾಯಿಲೆ ಹರಡುವ ಬೆಳಕಿನ ಅಲಂಕಾರಿಕ ದೀಪಗಳನ್ನು ಅಭಿವೃದ್ದಿಪಡಿಸಿ ಭಾರತಕ್ಕೆ ಕಳಿಸಲಿದೆ. ಬಹಳಷ್ಟು ಪಾದರಸವನ್ನು ಬಳಸಲಾಗಿದೆ, ದಯವಿಟ್ಟು ಈ ದೀಪಾವಳಿಯಲ್ಲಿ ಜಾಗರೂಕರಾಗಿರಿ ಮತ್ತು ಈ ಚೈನೀಸ್ ಉತ್ಪನ್ನಗಳನ್ನು ಬಳಸಬೇಡಿ. ಎಲ್ಲಾ ಭಾರತೀಯರಿಗೆ ಈ…

Read More

Fact Check | ಬಾಂಗ್ಲಾದಲ್ಲಿ ದುರ್ಗಾ ಪೂಜೆ ವಿರೋಧಿಸಿ ಮುಸ್ಲಿಮರಿಂದ ದೇವಸ್ಥಾನದ ಒಳಗೆ ನಮಾಜ್ ಎಂಬುದು ಎಡಿಟೆಡ್‌ ಫೋಟೋ

“ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಭೀಕರ ದಾಳಿಯನ್ನು ಅಲ್ಲಿನ ಮೂಲಭೂತವಾದಿ ಮುಸಲ್ಮಾನರು ನಡೆಸುತ್ತಿದ್ದಾರೆ. ಈಗ ದಸರಾ ಹಬ್ಬದ ಸಂದರ್ಭದಲ್ಲಿ ಯಾವುದೇ ಹಿಂದೂಗಳು ದುರ್ಗ ಪೂಜೆ ನಡೆಸದಂತೆ ನೋಡಿಕೊಳ್ಳುತ್ತಿದ್ದಾರೆ. ಇದೀಗ ಅಲ್ಲಿನ ಕೆಲ ಮುಸಲ್ಮಾನರು ದುರ್ಗಾ ಮಾತೆಯ ದೇವಸ್ಥಾನಕ್ಕೆ ನುಗ್ಗಿ ವಿಗ್ರಹದ ಮುಂದೆ ನಮಾಜ್‌ ಮಾಡಿ ಪ್ರಾರ್ಥನೆ ಮಾಡಿದ್ದಾರೆ. ಹೀಗೆ ಅಲ್ಲಿನ ಹಿಂದೂಗಳು ಈ ರೀತಿಯ ಕಿರುಕುಳವನ್ನು ಪ್ರತಿನಿತ್ಯ ಅನುಭವಿಸುತ್ತಿದ್ದಾರೆ” ಎಂದು ಪೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋದಲ್ಲಿ ಕೂಡ ಮುಸಲ್ಮಾನರು ದುರ್ಗಾ ದೇವಿಯ ವಿಗ್ರಹದ ಮುಂದೆ…

Read More

Fact Check | ಏರ್‌ ಶೋನಲ್ಲಿ ಪೈಲೆಟ್‌ ಅದ್ಭುತ ಪ್ರದರ್ಶನ ಎಂದು ರಿಮೋಟ್ ಕಂಟ್ರೋಲ್ಡ್‌ ಜೆಟ್‌ ಮಾಡಲ್‌ ವಿಡಿಯೋ ಹಂಚಿಕೆ

ಈ ವಿಡಿಯೋವನ್ನು ನೋಡಿ ಭಾರತದ ಏರ್‌ಶೋ ಇತಿಹಾಸದಲ್ಲೇ ಇದೊಂದು ಅದ್ಭುತವಾದ ಪ್ರದರ್ಶನ, ನಾವು ಸಾಕಷ್ಟು ಏರ್‌ಶೋಗಳನ್ನು ನೋಡಿರುತ್ತೇವೆ ಆದರೆ ಈ ರೀತಿಯ ಅದ್ಭುತವಾದ ಪ್ರತಿಭೆಯುಳ್ಳ ಫೈಲೆಟ್‌ನ ಸಾಮಾರ್ಥ್ಯವನ್ನು ಪ್ರದರ್ಶಿಸಿದ ಏರ್‌ಶೋ ಇದು ಎಂದರೆ ತಪ್ಪಾಗುವುದಿಲ್ಲ. ಒಂದು ಏರ್‌ಕ್ರಾಫ್ಟ್‌ ಅನ್ನು ಹೀಗೂ ಬಳಸಲಾಗುತ್ತದೆ ಎಂಬುದು ನಮಗೆ ಇದೇ ಮೊದಲ ಬಾರಿಗೆ ತಿಳಿದು ಬಂದಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೈರಲ್‌ ವಿಡಿಯೋದಲ್ಲಿ ಕೂಡ ಏರ್‌ಕ್ರಾಫ್ಟ್‌ ಹಾರುತ್ತಿರುವುದು, ಅದರ ಹಾರಾಟದ ಬಳಿಯೇ ಕೆಲವರು ನಿಂತಿರುವುದು ಕೂಡ ಕಂಡು ಬರುತ್ತಿದೆ….

Read More

Fact Check | ಭಾರತದ ಮುಸಲ್ಮಾನರು ಕ್ರೈಸ್ತರ ಚರ್ಚ್‌ಗಳನ್ನು ಸುಟ್ಟು ಹಾಕುತ್ತಿದ್ದಾರೆ ಎಂಬುದು ಸುಳ್ಳು ಸುದ್ದಿ

“ಕಳೆದ ರಾತ್ರಿ 20 ಚರ್ಚುಗಳನ್ನು ಸುಟ್ಟುಹಾಕಲಾಯಿತು ಮತ್ತು ಇಂದು ರಾತ್ರಿ ಅವರು “ಒಲಿಸಾಬಾಂಗ್ ಪ್ರಾಂತ್ಯ” ದಲ್ಲಿ 200 ಕ್ಕೂ ಹೆಚ್ಚು ಚರ್ಚುಗಳನ್ನು ನಾಶಮಾಡಲು ಬಯಸುತ್ತಾರೆ. ಅವರು ಮುಂದಿನ 24 ಗಂಟೆಗಳಲ್ಲಿ 200 ಮಿಷನರಿಗಳನ್ನು ಕೊಲ್ಲಲು ಬಯಸುತ್ತಾರೆ. ಎಲ್ಲಾ ಕ್ರಿಶ್ಚಿಯನ್ನರು ಹಳ್ಳಿಗಳಲ್ಲಿ ಅಡಗಿಕೊಂಡಿದ್ದಾರೆ. ಅವರಿಗಾಗಿ ಪ್ರಾರ್ಥಿಸಿ ಮತ್ತು ಪ್ರಪಂಚದಾದ್ಯಂತ ನಿಮಗೆ ತಿಳಿದಿರುವ ಎಲ್ಲಾ ಕ್ರಿಶ್ಚಿಯನ್ನರಿಗೆ ಈ ಸಂದೇಶವನ್ನು ಕಳುಹಿಸಿ.” ಎಂಬ ಬರಹವೊಂದನ್ನು ವಾಟ್ಸ್‌ಆಪ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. Hey this just came down through…

Read More