Fact Check | ಮುಸ್ಲಿಮರು ಉದಯಪುರ್ ಫೈಲ್ಸ್ ಕಲಾವಿದನ ಮನೆಯನ್ನು ಸುಟ್ಟು ಹಾಕಿದ್ದಾರೆ ಎಂಬುದು ಸುಳ್ಳು

2022 ರಲ್ಲಿ ಉದಯಪುರದ ದರ್ಜಿ ಕನ್ಹಯ್ಯಾ ಲಾಲ್ ಅವರ ಹತ್ಯೆಯನ್ನು ಆಧರಿಸಿದ ಉದಯಪುರ ಫೈಲ್ಸ್ ಎಂಬ ಹೆಸರಿನ ಚಲನಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿತ್ತು ಆದರೆ ದೆಹಲಿ ಹೈಕೋರ್ಟ್ ಜುಲೈ 10, 2025 ರಂದು ಅದನ್ನು ತಡೆಹಿಡಿದಿದೆ. ಈ ಸಂದರ್ಭದಲ್ಲಿ, ಜನರ ಗುಂಪೊಂದು ಮನೆಗೆ ಬೆಂಕಿ ಹಚ್ಚುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಉದಯಪುರ ಫೈಲ್ಸ್ ಚಿತ್ರದಲ್ಲಿ ಭಾಗಿಯಾಗಿರುವ ಕಲಾವಿದನ ಮನೆಯನ್ನು ಮುಸ್ಲಿಮರು ಸುಟ್ಟುಹಾಕಿದ್ದಾರೆ ಎಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಇದನ್ನು ನಿಜವೆಂದು ಭಾವಿಸಿ ಮುಸ್ಲಿಂ ಸಮುದಾಯದ ವಿರುದ್ಧ…

Read More

Fact Check | ಉತ್ತರ ಕನ್ನಡ ಪೊಲೀಸರು ವ್ಯಕ್ತಿಯೋರ್ವನಿಗೆ ಬೆಲ್ಟ್​ನಿಂದ ಹೊಡೆದಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊರ್ವನಿಗೆ ಒಬ್ಬ ಪೊಲೀಸ್ ಅಧಿಕಾರಿ ಬೆಲ್ಟ್​ನಲ್ಲಿ  ಮನಬಂದಂತೆ ಹೊಡೆಯುತ್ತಿರುವುದು ಕಾಣಬಹುದು. ಪೊಲೀಸ್ ಅಧಿಕಾರಿ ಹೊಡೆಯುವಾಗ ಇನ್ನೂ ಇಬ್ಬರು ವ್ಯಕ್ತಿಗಳು ಸಂತ್ರಸ್ತನನ್ನು ಹಿಡಿದುಕೊಂಡಿರುವುದು ಕಂಡು ಬಂದಿದೆ. ಇದು ಉತ್ತರ ಕನ್ನಡದಲ್ಲಿ ನಡೆದ ಘಟನೆ ಎಂದು ಬರೆದುಕೊಂಡು ಸಾಕಷ್ಟು ಮಂದಿ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಫೇಸ್​ಬುಕ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು ” ಇದು ರಾಜ್ಯ ಸರ್ಕಾರದ ಆದೇಶವೇ ? ರಾಜ್ಯದ ಗೃಹ ಸಚಿವರು ತಾವೇ ಉತ್ತರಿಸಬೇಕು ರಾಜ್ಯದ ಜನತೆ ತಿಳಿಯಬೇಕು…

Read More

Fact Check | ಆಪರೇಷನ್ ಸಿಂಧೂರ್ ವೇಳೆ ಪಾಕ್‌ ಡ್ರೋನ್‌ಗಳು ಭಾರತದೊಳಗೆ 700 ಕಿ.ಮೀ. ಪ್ರಯಾಣಿಸಿವೆ ಎಂಬುದು ಸುಳ್ಳು

ಭಾರತ ಇತ್ತೀಚೆಗೆ ಪಾಕಿಸ್ತಾನದ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ್  ಕುರಿತು ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಅದರಲ್ಲೂ ಮುಖ್ಯವಾಗಿ  X ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.. ‘TheDailyCPEC’ ಖಾತೆಯ ಬಳಕೆದಾರರೊಬ್ಬರು “ಬ್ರೇಕಿಂಗ್: ಯುದ್ಧದ ಸಮಯದಲ್ಲಿ ಪಾಕಿಸ್ತಾನದ ಡ್ರೋನ್‌ಗಳು ಭಾರತೀಯ ಭೂಪ್ರದೇಶದೊಳಗೆ 700 ಕಿ.ಮೀ. ಹಾರಿದವು ಎಂದು ಕೆಲವು ವರದಿಗಳು ಹೇಳುತ್ತಿದ್ದಾವೆ” ಎಂದು ಬರೆದುಕೊಡಿದ್ದಾರೆ. ಇದೇ ರೀತಿಯ ಹಲವರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದು, ಇದರಲ್ಲಿ ಕೆಲ ಪಾಕಿಸ್ತಾನಿ ಸಾಮಾಜಿಕ ಜಾಲತಾಣಗಳ ಬಳಕೆದಾರರು ಭಾರತದ ವಿರುದ್ಧ ಉದ್ದೇಶಪೂರ್ವಕವಾಗಿ ಈ ರೀತಿಯ ಆಧಾರ ರಹಿತ ಹಲವು…

Read More

Fact Check | ಅಂತರರಾಷ್ಟ್ರೀಯ ಪ್ರಯಾಣಿಕರು ಭಾರತೀಯ ವಿಮಾನಗಳನ್ನು ಬಹಿಷ್ಕರಿಸುತ್ತಿದ್ದಾರೆ ಎಂಬುದು ಸುಳ್ಳು

“ಜೂನ್ 12 ರ ಏರ್‌ ಇಂಡಿಯಾ ವಿಮಾನ ಅಪಘಾತದ ನಂತರ ಅಂತರರಾಷ್ಟ್ರೀಯ ಪ್ರಯಾಣಿಕರು ಭಾರತೀಯ ಪೈಲಟ್‌ಗಳು ಹಾರಿಸುವ ವಿಮಾನಗಳಲ್ಲಿ ಕುಳಿತುಕೊಳ್ಳಲು ನಿರಾಕರಿಸಲು ಪ್ರಾರಂಭಿಸಿದ್ದಾರೆ” ಎಂದು ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಭಾರತದ ವಿರೋಧಿ ರಾಷ್ಟ್ರಗಳ ಕೆಲ ಪ್ರಜೆಗಳು ಈ ಪೋಸ್ಟ್‌ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಅಪಪ್ರಚಾರ ಮಾಡಲು ಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.  ಈ ಪೋಸ್ಟ್‌ಗಳನ್ನು ಪರಿಶೀಲನೆ ಕೂಡ ನಡೆಸದೆ ಸಾಕಷ್ಟು ಮಂದಿ ನಿಜವೆಂದು ನಂಬಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ…

Read More

Fact Check | ಅಜಯ್ ದೇವ್‌ಗನ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂಬುದು ಸುಳ್ಳು

ಬಾಲಿವುಡ್ ನಟ ಅಜಯ್ ದೇವ್‌ಗನ್‌ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡುತ್ತಿರುವ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಸಿಎಂ ರೇವಂತ್‌ ರೆಡ್ಡಿ ದೇವಗನ್ ಅವರಿಗೆ ಹಾರ ಮತ್ತು ಹೂಗುಚ್ಚ ನೀಡುತ್ತಿರುವ ಫೋಟೋಗಳನ್ನು ಹಂಚಿಕೊಂಡ ಹಲವರು, ನಟ ಅಜಯ್ ದೇವಗನ್ ಅಧಿಕೃತವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಬರೆದುಕೊಂಡಿದ್ದಾರೆ.  ವೈರಲ್‌ ಫೋಟೋ ನೋಡಿದ ಹಲವು ಮಂದಿ ಅಜಯ್‌ ದೇವ್‌ಗನ್‌ ನಿಜವಾಗಿಯೂ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ನಂಬಿದ್ದಾರೆ. ಹೀಗಾಗಿ ಈ…

Read More

Fact Check | ಭಾರತೀಯ ಸೇನೆಯ ದಾಳಿಯಲ್ಲಿ ಮಗುವೊಂದು ಸಾವನ್ನಪ್ಪಿದೆ ಎಂದು 2021ರ ಫೋಟೋ ಹಂಚಿಕೊಳ್ಳಲಾಗುತ್ತಿದೆ

ನಿಷೇಧಿತ ದಂಗೆಕೋರ ಗುಂಪು ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್ (ULFA-I) ತನ್ನ ಮೇಲೆ ಭಾರತೀಯ ಸೇನೆಯು ಮ್ಯಾನ್ಮಾರ್‌ನ ಸಾಗಿಂಗ್ ಪ್ರದೇಶದ ಶಿಬಿರಗಳ ಮೇಲೆ ಭಾನುವಾರ (ಜುಲೈ 13) ಬೆಳಗಿನ ಜಾವ 2 ಗಂಟೆಯಿಂದ 4 ಗಂಟೆಯ ನಡುವೆ ಡ್ರೋನ್ ದಾಳಿ ನಡೆಸಿದೆ, ತನ್ನ ಮೂವರು ಹಿರಿಯ ನಾಯಕರನ್ನು ಕೊಂದಿದೆ ಎಂದು ಹೇಳಿಕೊಂಡಿದೆ. ಈ ಸುದ್ದಿ ಬಹುದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಇದರ ನಡುವೆ ಮಗುವೊಂದು ತೀವ್ರ ಗಾಯಗಳೊಂದಿಗೆ ಹಾಸಿಗೆಯ ಮೇಲೆ ಮಲಗಿರುವುದು ಕಂಡು ಬಂದಿದ್ದು, ಇದು…

Read More

Fact Check | ರಾಹುಲ್ ಗಾಂಧಿ ಪುರಿ ಜಗನ್ನಾಥ ರಥಯಾತ್ರೆಯನ್ನು ನಾಟಕ ಎಂದು ಹೇಳಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಇದರಲ್ಲಿ ಪೂರಿ ಜಗನ್ನಾಥನ ರಥಯಾತ್ರೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ನಾಟಕ’ ಎಂದು ಕರೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆ ಮೂಲಕ ಸಂಸತ್ತಿನ ವಿಪಕ್ಷ ನಾಯಕನನ್ನು ಹಿಂದೂ ವಿರೋಧಿ ಎಂದು ಕರೆದಿರುವ ಹಲವರು, ರಾಹುಲ್‌ ಗಾಂಧಿ ವಿರುದ್ಧ ವ್ಯಾಪಕವಾಗಿ ಟೀಕೆ ಮಾಡುತ್ತಿದ್ದಾರೆ. ವೈರಲ್‌ ವಿಡಿಯೋವನ್ನು ಕೂಡ ಪರಿಶೀಲನೆ ನಡೆಸಿದಾಗ ಅದರಲ್ಲಿ ರಾಹುಲ್ ಗಾಂಧಿ ಅವರು “ ಊಹಿಸಿಕೊಳ್ಳಿ ಒಡಿಶಾದಲ್ಲಿ ಜಗನ್ನಾಥ ಯಾತ್ರೆ ನಡೆದಾಗ, ರಥ ಹೊರಬರುತ್ತದೆ,  ಲಕ್ಷಾಂತರ ಜನರು ಅದನ್ನು…

Read More

Fact Check | ರಾಹುಲ್‌ ಗಾಂಧಿ ಜೊತೆಗೆ ನ್ಯಾಯಾಧೀಶರು ಸೆಲ್ಫಿ ತೆಗೆದುಕೊಂಡಿದ್ದಾರೆ ಎಂಬುದು ಸುಳ್ಳು

ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸತ್ತಿನ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಮಂಗಳವಾರ ಲಕ್ನೋದ ವಿಶೇಷ ಸಂಸದ-ಶಾಸಕ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗಿದ್ದರು. ಈ ಸಂದರ್ಭದಲ್ಲಿ, ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆಯಲು ಆದೇಶಿಸಿತು ಆದರೆ ಜಾಮೀನು ಅರ್ಜಿಯನ್ನು ಸ್ವೀಕರಿಸಿದ ನಂತರ ಅವರನ್ನು ಬಿಡುಗಡೆ ಮಾಡಿತು. ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಯವರ ಹಾಜರಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅದರಲ್ಲಿ ನ್ಯಾಯಾಧೀಶರು ಸ್ವತಃ ರಾಹುಲ್ ಗಾಂಧಿಯವರ ಅಭಿಮಾನಿಯಾಗಿ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.  ಹಲವರು ಇದನ್ನು…

Read More

Fact Check | ಬಾಂಗ್ಲಾದೇಶದಲ್ಲಿ ಕಲ್ಲುಗಳಿಂದ ಜಜ್ಜಿ ಹಿಂದೂಗಳನ್ನು ಕೊಲ್ಲಲಾಗುತ್ತಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಓರ್ವ ವ್ಯಕ್ತಿ ರಕ್ತದ ಮಡುವಿನಲ್ಲಿ ರಸ್ತೆಯ ಮೇಲೆ ಬಿದ್ದಿರುವುದು ಕಂಡು ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಕೆಲ ದುಷ್ಕರ್ಮಿಗಳು ಪಕ್ಕದಲ್ಲಿದ್ದ ದೊಡ್ಡ ಕಲ್ಲನ್ನು ಮೂರು-ನಾಲ್ಕು ಬಾರಿ ಆತನ ಮೇಲೆ ಹಾಕಿ ಸಾಯಿಸುತ್ತಿರುವುದು ಕಂಡು ಬಂದಿದೆ. ಇಂದು ಬಾಂಗ್ಲಾದೇಶದಲ್ಲಿ ಹಿಂದೂಗಳ ಪರಿಸ್ಥಿತಿ ಹೀಗಿದೆ ಎಂದು ಈ ವಿಡಿಯೋದಲ್ಲಿ ಬರೆದುಕೊಂಡು ಹಂಚಿಕೊಳ್ಳಲಾಗುತ್ತಿದೆ. ಕೆಲ ಮಾಧ್ಯಮಗಳು ಕೂಡ ಇದನ್ನೇ ನಿಜವೆಂದು ವರದಿ ಕೂಡ ಮಾಡಿವೆ. ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಬಾಂಗ್ಲಾದೇಶ…

Read More

Fact Check | ಹಿಂದೂ ಮಹಿಳೆಯೊಬ್ಬರು ಮೂವರು ಸಹೋದರರನ್ನು ಮದುವೆಯಾಗಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯೊಬ್ಬರ ವಿಡಿಯೋ  ವೈರಲ್ ಆಗುತ್ತಿದೆ. ಒಂದೇ ಕುಟುಂಬದ ಮೂವರು ಸಹೋದರರು ಒಂದೇ ಮಹಿಳೆಯನ್ನು ಮದುವೆಯಾಗಿದ್ದಾರೆ ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ ಮಹಿಳೆ ಮೂವರು ಪುರುಷರೊಂದಿಗೆ ಮದುವೆ ಆಗುತ್ತಿರುವ ರೀತಿ ಕಂಡು ಬಂದಿದೆ. ಹೀಗಾಗಿ ಇದನ್ನು ನಿಜವೆಂದು ಭಾವಿಸಿರುವ ಹಲವರು ವೈರಲ್‌ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಇದಕ್ಕೆ ಕೋಮು ನಿರೂಪಣೆಯನ್ನು ನೀಡಿದ್ದು, ಹಿಂದೂ ಸಮುದಾಯದಲ್ಲಿ ಇದೊಂದು ಅಚ್ಚರಿಯ ಬೆಳವಣಿಗೆ, ಇದು ಅಂಧಭಕ್ತಿಯ ಫಲ ಎಂದೆಲ್ಲ ಬರೆದುಕೊಂಡು ಹಿಂದೂ ಸಮುದಾಯದಲ್ಲಿನ…

Read More