FACT CHECK: ಮಕರ ಸಂಕ್ರಾಂತಿಯ ಪ್ರಯುಕ್ತ ಅಮಿತ್ ಶಾ ಗಾಳಿಪಟ ಹಾರಿಸಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮಕರ ಸಂಕ್ರಾಂತಿಯ ಸಂಭ್ರಮದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಗಾಳಿಪಟ ಹಾರಿಸಿದ್ದಾರೆಂದು  ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ಓರ್ವ ಬಾಲಕ ಅಮಿತ್ ಶಾ ಅವರ ಗಾಳಿಪಟವನ್ನು ಕತ್ತರಿಸಿ ಸಂಭ್ರಮಿಸುತ್ತಿರುವುದನ್ನು ಕಾಣಬಹುದು. 2025ರ ಜನವರಿ 14ರಂದು ವಿಡಿಯೋವನ್ನು ತ್ರೆಡ್‌ನಲ್ಲಿ  ( ಆರ್ಕೈವ್ ಲಿಂಕ್ )  khabartak_media ಎಂಬ ಖಾತೆಯಿಂದ ಹಂಚಿಕೊಂಡಿದ್ದು,  ” ಕೇಂದ್ರ ಗೃಹ ಸಚಿವ ಅಮಿತ್ ಶಾ ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸುತ್ತಿದ್ದಾಗ ಬಾಲಕ ಅದನ್ನು ಕತ್ತರಿಸಿದನು.” ಎಂದು…

Read More

Fact Check | ದರ್ಗಾ ಸಮೀಕ್ಷೆ ನಡೆಸುವಾಗ ಬಿಜೆಪಿ ನಾಯಕ ವಿಜಯ್‌ ರೂಪಾನಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಬಿಜೆಪಿ ನಾಯಕ ವಿಜಯ್ ರೂಪಾನಿ ವೇದಿಕೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊವನ್ನು ಇತ್ತೀಚಿನದು ಎಂದು ಹಂಚಿಕೊಳ್ಳಲಾಗುತ್ತಿದೆ ಮತ್ತು ಅಜ್ಮೀರ್‌ನಲ್ಲಿರುವ ಖ್ವಾಜಾ ಮೊದನುದ್ದೀನ್ ಚಿಶ್ತಿಯ ದರ್ಗಾ ಸಮೀಕ್ಷೆಯ ವೇಳೆ ಈ ಘಟನೆ ನಡೆದಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಹಲವರು ವಿಜಯ್ ರೂಪಾನಿ  ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಪರಿಸ್ಥಿತಿ ಗಂಭೀರವಾಗಿದೆ ಎಂದು ಕೂಡ ಬರೆದುಕೊಂಡಿದ್ದಾರೆ.  हज़रत ख़्वाजा ग़रीब नवाज़ सिर्फ हिन्द के ही राजा नहीँ पूरी एशिया के…

Read More

Fact Check | ಗುಜರಾತ್‌ನಲ್ಲಿ ವಿಮಾನ ಪತನಗೊಂಡಿದೆ ಎಂದು ಗ್ರಾಫಿಕ್‌ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ವಿಮಾನವೊಂದು ಪತನಗೊಳ್ಳುತ್ತಿರುವುದನ್ನು ತೋರಿಸಲಾಗಿದೆ. ಗುಜರಾತ್‌ನ ಸೂರತ್‌ನಲ್ಲಿ ವಿಮಾನ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಹಲವು ಮಂದಿ ಈ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಉಲ್ಲೇಖಿಸಲಾಗುತ್ತಿದೆ. ಆದರೆ ಈ ಪೋಸ್ಟ್‌ನಲ್ಲಿ ಗುಜರಾತ್‌ನ ಯಾವ ಭಾಗದಲ್ಲಿ ನಡೆದಿದೆ ಎಂಬ ಖಚಿತ ಮಾಹಿತಿ ನೀಡಲಾಗಿಲ್ಲ ಇದು ಸಾರ್ವಜನಿಕರ ಗೊಂದಲಕ್ಕೆ ಕೂಡ ಕಾರಣವಾಗಿದೆ. ವೈರಲ್‌ ವಿಡಿಯೋದಲ್ಲಿ ಕೂಡ ವಿಮಾನವೊಂದು ಅಪಘಾತಕ್ಕೆ ಒಳಗಾಗುವುದು ಕಂಡು ಬಂದಿದ್ದು, ಈ ವಿಡಿಯೋವನ್ನು ಸಾಕಷ್ಟು ಮಂದಿ ನಿಜವೆಂದು ಭಾವಿಸಿದ್ದಾರೆ. ಹೀಗಾಗಿ…

Read More

Fact Check | ಲುಲು ಮಾಲ್‌ಗಳಲ್ಲಿ ಲವ್ ಜಿಹಾದ್ ನಡೆಯುತ್ತಿದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ

ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಲುಲು ಮಾಲ್ ಗೆ ಸಂಬಂಧಪಟ್ಟ ಹಾಗೆ ವಿವಿಧ ನಿರೂಪಣೆಗಳೊಂದಿಗೆ ಸಾಕಷ್ಟು ಸುಳ್ಳು ಸುದ್ದಿಗಳು  ವೈರಲ್ ಆಗುತ್ತಿವೆ. ಅದೇ ರೀತಿಯಲ್ಲಿ ಈಗ ಲುಲು ಮಾಲ್‌ ಫೋಟೋವೊಂದನ್ನು ಹಾಕಿ ಅದರ ಹಿನ್ನೆಲೆ ದ್ವನಿಯಲ್ಲಿ ಲುಲು ಮಾಲ್‌ನಲ್ಲಿ ಲವ್ ಜಿಹಾದ್ ನಡೆಯುತ್ತಿದೆ. ಹಿಂದೂಗಳ ಜನಸಂಖ್ಯೆ ಹೆಚ್ಚಿರುವ ಕಡೆ ಲುಲು ಮಾಲ್‌ ತನ್ನ ಶಾಖೆಗಳನ್ನು ಆರಂಭಿಸುತ್ತಿದೆ. ಹಿಂದೂ ವ್ಯಾಪಾರಿಗಳನ್ನು ಮಟ್ಟ ಹಾಕುವ ಉದ್ದೇಶದಿಂದ ಲುಲು ಮಾಲ್ ಕಾರ್ಯನಿರ್ವಹಿಸುತ್ತಿದೆ. ಈ ಜಿಹಾದ್‌ಗಳಿಗಾಗಿ ಲುಲು ಮಾಲ್‌ ಮಾಲಿಕ ಯೂಸುಪ್‌…

Read More
ಮುಸ್ಲಿಂ

Fact Check: ರಾಜಸ್ಥಾನ-ಗುಜರಾತ್-ಮಹಾರಾಷ್ಟ್ರ ಹೆದ್ದಾರಿಯಲ್ಲಿರುವ 40 ಮುಸ್ಲಿಂ ಡಾಭಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬುದಕ್ಕೆ ಆಧಾರವಿಲ್ಲ

ರಾಜಸ್ಥಾನ-ಗುಜರಾತ್-ಮಹಾರಾಷ್ಟ್ರ ಹೆದ್ದಾರಿಯಲ್ಲಿರುವ 40ಕ್ಕೂ ಹೆಚ್ಚು ಮುಸ್ಲಿಂ ಡಾಭಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಯುವಕನೊಬ್ಬ ಹೇಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮುಸ್ಲಿಂ ಹೋಟೆಲ್‌ಗಳಲ್ಲಿ ನಪುಂಸಕ ಔಷಧಿಗಳನ್ನು ಬೆರೆಸಲಾಗುತ್ತಿದೆ ಮತ್ತು ಮಾಂಸಾಹಾರಿ ವಸ್ತುಗಳನ್ನು ಬೆರೆಸಿ ಹಿಂದೂ ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಯುವಕ ಆರೋಪಿಸಿದ್ದಾನೆ. Shocking : Reportedly police raided 40 Muslim hotels on the Rajasthan-Gujarat-Maharashtra highway. A case of adulteration of impotence medicine and…

Read More
ಗುಜರಾತ್‌

Fact Check: 2022 ರಲ್ಲಿ ಗುಜರಾತ್‌ನ ಗರ್ಬಾ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಪೊಲೀಸರು ಥಳಿಸುವ ಹಳೆಯ ವಿಡಿಯೊವನ್ನು ಇತ್ತೀಚಿನದು ಎಂದು ಹಂಚಿಕೆ

ನವರಾತ್ರಿ ಹಬ್ಬದ ನಂತರ ಭಾರತದ ಅನೇಕ ರಾಜ್ಯಗಳಲ್ಲಿ ದುರ್ಗಾ ಮಾತೆಗೆ ಅವಮಾನಿಸಲಾಗಿದೆ ಎಂದು ಹಳೆಯ ವಿಡಿಯೋಗಳನ್ನು ಬಳಸಿಕೊಂಡು ದ್ವೇಷ ಹರಡಲು ಪ್ರಯತ್ನಿಸಲಾಗುತ್ತಿದೆ. ಈಗ, ಇತ್ತೀಚೆಗೆ ಗುಜರಾತ್‌ನ ಖೇಡಾ ಪ್ರದೇಶದಲ್ಲಿ ಮಸೀದಿಯೊಂದರ ಬಳಿ ನಡೆದ ಗರ್ಬಾ ಕಾರ್ಯಕ್ರಮದಲ್ಲಿ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಒಂದು ಹರಿದಾಡುತ್ತಿದ್ದು, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಪೊಲೀಸರು ಯುವಕರನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸುವ ಮೂಲಕ ಅಪರಾಧಿಗಳನ್ನು ಶಿಕ್ಷಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಪಾದಿಸಲಾಗುತ್ತಿದೆ. ಆರ್ಕೈವ್…

Read More
ಸಿಂಹ

Fact Check: ಪಾವಗಡ, ಬೆಳ್ಳೂರು ಕ್ರಾಸ್‌ ನಲ್ಲಿ ಸಿಂಹ ಕಾಣಿಸಿಕೊಂಡಿದೆ ಎಂದು ಸುಳ್ಳು ಸುದ್ದಿ ಹಂಚಿಕೊಂಡು ಆತಂಕ ಮೂಡಿಸಿದ ಕೆಲವು ಕನ್ನಡದ ಮಾಧ್ಯಮಗಳು

ಕಳೆದ ಹಲವು ದಿನಗಳಿಂದ ಪಾವಗಡದಲ್ಲಿ ಸಿಂಹ ಕಾಣಿಸಿಕೊಂಡಿದೆ, ಬೆಳ್ಳೂರು ಕ್ರಾಸ್‌ ನಲ್ಲಿ ಸಿಂಹ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು ಜೀ ಕನ್ನಡ ನ್ಯೂಸ್, ಪಬ್ಲಿಕ್ ನ್ಯೂಸ್ 24/7 ಮತ್ತು ಈಡೆನ್ಸ್ ನ್ಯೂಸ್ ಕನ್ನಡ  ಸೇರಿದಂತೆ ಕೆಲವು ಕನ್ನಡ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿ ಜನರಲ್ಲಿ ಆತಂಕ ಮೂಡಿಸಿವೆ. ಜೀ ನ್ಯೂಸ್‌ “ಪಾವಗಡದ ಪೆಟ್ರೋಲ್‌ ಬಂಕ್‌ನಲ್ಲಿ ಅಡ್ಡಾಡಿದ ಸಿಂಹ” ಸಿಂಹ ಎಂಬ ಶೀರ್ಷಿಕೆಯೊಂದಿಗೆ ವೀಡಿಯೋ ತುಣುಕನ್ನು ಹಂಚಿಕೊಂಡಿದ್ದು ಇದನ್ನು 2.2 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ ಮತ್ತು 1200…

Read More
ಗುಜರಾತ್‌

Fact Check: ಗುಜರಾತಿನಲ್ಲಿ ರೈಲ್ವೆ ಹಳಿ ತಪ್ಪಿಸಲು ಪ್ರಯತ್ನಿಸಿದ ನೌಕರರು ಹಿಂದೂಗಳೇ ಹೊರತು ಮುಸ್ಲಿಮರಲ್ಲ

ಇತ್ತೀಚೆಗೆ ಗುಜರಾತ್‌ನ ಸೂರತ್‌ನಲ್ಲಿ ಸೆಪ್ಟೆಂಬರ್ 21 ರಂದು ಕಿಮ್ ರೈಲು ನಿಲ್ದಾಣದ ಬಳಿ ರೈಲು ಹಳಿತಪ್ಪಿಸಲು ಸಂಚು ರೂಪಿಸಿದ ಮೂವರು ರೈಲ್ವೆ ಉದ್ಯೋಗಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳನ್ನು ಮುಸ್ಲಿಮರು ರೈಲು ಅಪಘಾತಕ್ಕೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗುತ್ತಿದೆ. ಈ ಕುರಿತ ಮೂವರು ಅಪರಾಧಿಗಳನ್ನು ಪೋಲಿಸರು ಬಂಧಿಸಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ” ಕರ್ನಾಟಕಕ್ಕೆ ಬರುತ್ತಿದ್ದ ಸೇನಾ ರೈಲನ್ನು ಹಳಿ ತಪ್ಪಿಸಲು ಯತ್ನಿಸಿದ್ದ ಮುಸ್ಲಿಂ ರೈಲ್ವೆ ನೌಕರರ ಬಂಧನ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮತ್ತು ಆರೋಪಿಗಳನ್ನು…

Read More

Fact Check | ಉದಯಪುರದಲ್ಲಿ ಹತ್ಯೆಗೀಡಾದ ದೇವರಾಜ್‌ನ ವಿಡಿಯೋ ಎಂದು ಮತ್ತೊಂದು ವಿಡಿಯೋ ಹಂಚಿಕೆ

“ಇದು ಉದಯಪುರದ ವಿದ್ಯಾರ್ಥಿಯೇ? ದೇವರಾಜ್ ನೀಡಿದ ಈ ಧಾರ್ಮಿಕ ಮತ್ತು ಅದ್ಭುತ ಪ್ರದರ್ಶನ ಅವರ ಸಾವಿಗೆ ಕಾರಣವಾಯಿತು??”. ಎಂಬ ಪ್ರಶ್ನೆಯೊಂದಿಗೆ ಯುವಕನೊನೊಬ್ಬ ವೇದಿಯಲ್ಲಿ ಹಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಹಲವರು ಈತ ಹತ್ಯೆಗೀಡಾದ ದೇವರಾಜ್‌ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಈ ಯುವಕನಿಗೆ ಹಿಂದುತ್ವದ ಮೇಲೆ ಅತೀವವಾದ ಅಭಿಮಾನವಿತ್ತು. ಅದು ಈತನ ಸಾವಿಗೆ ಕಾರಣವಾಗಿದೆ ಎಂದು ಅಂತರ್ಜಾಲದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ನೋಡಿದ ಹಲವರು ತಮ್ಮ ವೈಯಕ್ತಿಕ…

Read More

Fact Check | ಈಜಿಪ್ಟ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯದ ವೀಡಿಯೊವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ “ಗುಜರಾತ್‌ನ ವಲ್ಸಾದ್‌ನಲ್ಲಿರುವ ಡಿಪಿಎಸ್ ಶಾಲೆಯಲ್ಲಿ  ಶಕೀಲ್ ಅಹ್ಮದ್ ಅನ್ಸಾರಿ ಎಂಬ ಮುಸ್ಲಿಂ ಶಿಕ್ಷಕ ಮಕ್ಕಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಇವನ ಈ ದಾಳಿಗೆ ಮಕ್ಕಳು ನಲುಗಿದ್ದಾರೆ. ಹಿಂದುಗಳೇ ಈ ಬಗ್ಗೆ ಎಚ್ಚರದಿಂದಿರಿ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಾಕಷ್ಟು ಮಂದಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಈ ವಿಡಿಯೋ ಕೂಡ ವೈರಲ್‌ ಆಗುತ್ತಿದ್ದು, ಸಾಕಷ್ಟು ಮಂದಿ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. आप के whatsapp पे जितने भी नंबर एवं ग्रुप हैं…

Read More