Fact Check | ಭಾರತ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದ ನಂತರ ಕಿಶನ್‌ಗಂಗಾ ಅಣೆಕಟ್ಟು ಕುಸಿದಿದೆ ಎಂಬುದು ಸುಳ್ಳು

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿತು ಮತ್ತು ಪಾಕಿಸ್ತಾನಕ್ಕೆ, ವಿಶೇಷವಾಗಿ ಚೆನಾಬ್ ನದಿಯಿಂದ ನೀರಿನ ಹರಿವನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಂಡಿತು. ಮಾಧ್ಯಮ ವರದಿಗಳ ಪ್ರಕಾರ, ಭಾರತವು ಚೆನಾಬ್‌ನಲ್ಲಿರುವ ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಡುವುದನ್ನು ನಿಲ್ಲಿಸಿದೆ. ಝೀಲಂ ನದಿಯ ಕಿಶನ್‌ಗಂಗಾ ಯೋಜನೆಯಿಂದ ಹೊರಹರಿವುಗಳನ್ನು ಕ್ರಮೇಣ ಕಡಿಮೆ ಮಾಡಲು ಸಹ ತಯಾರಿ ನಡೆಸುತ್ತಿದೆ. ಈ ಸಂದರ್ಭದಲ್ಲಿ, ಅಣೆಕಟ್ಟು ಕುಸಿತದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಭಾರತ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದ…

Read More

Fact Check | ಆಪರೇಷನ್ ಸಿಂಧೂರ್‌ ವೇಳೆ ಪಾಕಿಸ್ತಾನ ಭಾರತದ ರಫೇಲ್‌ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂಬುದು ಸುಳ್ಳು

ಭಾರತೀಯ ಸಶಸ್ತ್ರ ಪಡೆಗಳು 7 ಮೇ 2025 ರಂದು ‘ ಆಪರೇಷನ್ ಸಿಂಧೂರ್ ‘ ಹೆಸರಿನಲ್ಲಿ ಸೇನಾ ಕಾರ್ಯಚರಣೆ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ. ಒಟ್ಟು ಒಂಭತ್ತು ಸ್ಥಳಗಳನ್ನು ಗುರಿಯಾಗಿರಿಸಲಾಗಿತ್ತು. ಈ ದಾಳಿಯಲ್ಲಿ ಸುಮಾರು 90 ಕ್ಕೂ ಅಧಿಕ ಉಗ್ರರನ್ನು ಕೊಲ್ಲಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದರ ಮಧ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಲ ಪಾಕಿಸ್ತಾನಿ ಬಳಕೆದಾರರು ಆಪರೇಷನ್‌ ಸಿಂಧೂರ್‌ ವೇಳೆ ಭಾರತದ ರಫೇಲ್‌ ಯುದ್ಧ ವಿಮಾನವನ್ನು…

Read More

Fact Check | ದೇವಾಲಯದ ಬಳಿ ಹೂವುಗಳಿಗೆ ಉಗುಳುತ್ತಿರುವ ಮುಸ್ಲಿಂ ಎಂದು ಪಾಕಿಸ್ತಾನದ ವಿಡಿಯೋ ಹಂಚಿಕೆ

ಮುಸ್ಲಿಂ ಬಾಲಕನೊಬ್ಬ ದೇವಾಲಯದ ಬಳಿ ಹೂವು ಮಾರಾಟ ಮಾಡುತ್ತಿದ್ದಾನೆ ಆತ ಹೂಗಳಿಗೆ ಉಗುಳಿ ಮಾರುತಿದ್ದು, ಈ ಹೂಗಳನ್ನು ಖರೀದಿಸಿದ ಹಿಂದೂ ಭಕ್ತರು ಇದನ್ನೇ ದೇವರ ಅರ್ಚನೆಗೆಂದು ತೆಗೆದುಕೊಂಡು ಹೋಗುತ್ತಾರೆ. ಇನ್ನು ಕೆಲವರು ದೇವರ ವಿಗ್ರಹದ ಮೇಲೆ ಈ ಹೂಗಳನ್ನು ಇಡುತ್ತಾರೆ. ಇದು ಹಿಂದೂ ದೇವಾಲಯಗಳನ್ನು ಅಪವಿತ್ರಗೊಳಿಸುವ ಒಂದು ಪದ್ದತಿಯಾಗಿದೆ. ಈ ರೀತಿಯ ಹೂವಿನ ಜಿಹಾದ್ ಅನ್ನು ಪ್ರತಿಯೊಬ್ಬ ಹಿಂದೂಗಳು ತಡೆಯಬೇಕಾಗಿದೆ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಬೈಕುಗಳ ನಡುವೆ ಬಾಲಕನೊಬ್ಬ…

Read More

Fact Check | ಪಾಕಿಸ್ತಾನದ ವಿರುದ್ಧ ಪೋಸ್ಟ್ ಮಾಡಿದ ಕಾರಣಕ್ಕಾಗಿ ಹಿಂದೂ ಕುಟುಂಬದ ಮೇಲೆ ಹಲ್ಲೆ ನಡೆದಿದೆ ಎಂಬುದು ಸುಳ್ಳು

ಪಹಲ್ಗಾಮ್‌ ದಾಳಿಯ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಭಾರತ ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಪುಣೆಯ ಭವಾನಿ ಪೇಟ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಕುಟುಂಬವನ್ನು ಮುಸಲ್ಮಾನರು ಥಳಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. A Hindu family was attacked in…

Read More

Fact Check | ಪಹಲ್ಗಾಮ್ ದಾಳಿಯ ಬಂಧಿತ ಭಯೋತ್ಪಾದಕ RSS ನಿಂದ ಹಣ ಪಡೆದುಕೊಂಡಿದ್ದ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಇಬ್ಬರು ಅರೆಸೈನಿಕ ಸಿಬ್ಬಂದಿಯ ವಶದಲ್ಲಿರುವ ಗಡ್ಡಧಾರಿ ವ್ಯಕ್ತಿಯನ್ನು ತೋರಿಸುವ ಚಿತ್ರವೊಂದು ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಸೆರೆಹಿಡಿಯಲಾದ ‘ಕಾಶ್ಮೀರ ಭಯೋತ್ಪಾದಕ’ ಆರೆಸ್ಸೆಸ್‌ನಿಂದ ಶಸ್ತ್ರಾಸ್ತ್ರಗಳು ಮತ್ತು ಹಣಕಾಸು ಪಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಬರೆದುಕೊಳ್ಳಲಾಗಿದೆ. ಇನ್ನೂ ಕೆಲವರು ಆರ್‌ಎಸ್‌ಎಸ್‌ ಈ ಭಯೋತ್ಪಾದಕರ ಹಿಂದಿರುವ ಉದ್ದೇಶ, ಕೋಮುದ್ವೇಷವೇ ಕಾರಣವಾಗಿದೆ ಎಂದು ಬರೆದುಕೊಂಡಿದ್ದಾರೆ. ಕೆಲವು ಪಾಕಿಸ್ತಾನಿ ಖಾತೆಗಳಲ್ಲಿ ಕೂಡ ಈ ಫೋಟೋವನ್ನು ಹಂಚಿಕೊಂಡು ಆರ್‌ಎಸ್‌ಎಸ್‌ನಿಂದ ಭಯೋತ್ಪಾದಕರಿಗೆ ಹಣ ನೀಡಲಾಗಿದೆ…

Read More

Fact Check | ಕೇರಳದಲ್ಲಿ ನಡೆದ ಅಪಘಾತದ ವಿಡಿಯೋವನ್ನು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಕಾರು ಅಪಘಾತದ ವೀಡಿಯೊ ಕ್ಲಿಪ್ ಅನ್ನು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದರಲ್ಲಿ ಮಗುವಿನೊಂದಿಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆಯುವುದನ್ನು ಕಾಣಬಹುದು. ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ ಮತ್ತು ಕಾರು ಚಾಲಕ ಮಹಿಳೆ ಬುರ್ಖಾ ಧರಿಸಿದ್ದಕ್ಕಾಗಿ ಅಪಘಾತ ಮಾಡಿದ್ದಾನೆ, ಕೇರಳದಲ್ಲಿ ಈಗ ಮುಸ್ಲಿಂ ವಿರೋಧಿ ಮನಸ್ಥಿತಿ ಆರಂಭವಾಗುತ್ತಿದೆ ಎಂದು ಹಲವರು ಮಂದಿ ಪೋಸ್ಟ್‌ ಮಾಡುತ್ತಿದ್ದಾರೆ. ವೈರಲ್‌ ವಿಡಿಯೋದಲ್ಲಿ ಭೀಕರ ಅಪಘಾತವಾಗುವ ದೃಶ್ಯಗಳು ಕಂಡು ಬಂದಿದ್ದು, ಇದನ್ನು ನೋಡಿದ ಹಲವು ಮಂದಿ ಪೋಸ್ಟ್‌ ಅನ್ನು…

Read More

Fact Check | ಭಾರತ ಸಿಂಧೂ ನದಿ ಜಲ ಒಪ್ಪಂದವನ್ನು ರದ್ದುಗೊಳಿಸಿದ ನಂತರ ಪಾಕಿಸ್ತಾನವನ್ನು ಡೊನಾಲ್ಡ್ ಟ್ರಂಪ್ ಅಣಕಿಸಿದ್ದಾರೆ ಎಂಬುದು ಸುಳ್ಳು

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಕ್ರಮಕ್ಕಾಗಿ ಭಾರತ ಈಗ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಈ ನಡುವೆ ಪಾಕಿಸ್ತಾನದ ವಿರುದ್ಧ ಪ್ರಮುಖ ಕ್ರಮಗಳನ್ನು ಕೈಗೊಂಡಿರುವ ಭಾರತ, 1960ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದಿದ್ದ ಸಿಂಧೂ ನದಿ ಒಪ್ಪಂದವನ್ನು ಕೂಡ ರದ್ದುಗೊಳಿಸಿದೆ. ಈಗ ಇದಕ್ಕೆ ಸಂಬಂಧಪಟ್ಟಂತೆ ಡೊನಾಲ್ಡ್‌ ಟ್ರಂಪ್‌ ಪಾಕಿಸ್ತಾನವನ್ನು ಅಪಹಸ್ಯ ಮಾಡಿದ್ದಾರೆ ಎಂದು ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀರಿನ ಬಾಟಲಿಯನ್ನು ಹಿಡಿದು “ನನಗೆ ನೀರು ಬೇಕು, ನನಗೆ…

Read More

Fact Check | ಪುರೋಹಿತರ ಸಲಹೆಯನ್ನು ಅನುಸರಿಸಿ ರಾಜಸ್ಥಾನದ ಜನರು ಸೌರ ಫಲಕಗಳನ್ನು ಒಡೆದಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲಾಗುತ್ತಿದ್ದು, ಇದರಲ್ಲಿ “ಪುರೋಹಿತರು ಸೌರ ಫಲಕಗಳನ್ನು ಬಳಸುವುದು ಸೂರ್ಯ ದೇವರಿಗೆ ಮಾಡುವ ಅವಮಾನ ಎಂದು ಹೇಳಿದ ನಂತರ ರಾಜಸ್ಥಾನದಲ್ಲಿ ಸೌರ ಫಲಕಗಳನ್ನು ಅಳವಡಿಸಿದ್ದ ಪ್ರದೇಶವನ್ನು ಜನಸಾಮಾನ್ಯರು ಧ್ವಂಸ ಮಾಡಿದ್ದಾರೆ. ಆ ಮೂಲಕ ಹಿಂದೂ ಧರ್ಮದ ಆಚರಣೆಗೆ ಧಕ್ಕೆ ತರುವ ಸರ್ಕಾರದ ಷಡ್ಯಂತ್ರವನ್ನು ತಡೆದಿದ್ದಾರೆ” ಎಂಬ ಪೋಸ್ಟ್ ಒಂದು ಸಾಕಷ್ಟು ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಕೂಡ ಪುರುಷರು ಮತ್ತು ಮಹಿಳೆಯರ ಗುಂಪೊಂದು ಸೌರಫಲಕಗಳನ್ನು ದ್ವಂಸ ಮಾಡುತ್ತಿರುವುದು ಕಂಡು ಬಂದಿದೆ. ಈ ವಿಡಿಯೋ…

Read More

Fact Check | ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆಯು ಪಾಕಿಸ್ತಾನದ ಸಿಯಾಲ್‌ಕೋಟ್ ಮೇಲೆ ದಾಳಿ ನಡೆಸಿಲ್ಲ

ಏಪ್ರಿಲ್ 22 ರಂದು 26 ಜನ ಪ್ರವಾಸಿಗರನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾಗಳನ್ನು ಸ್ಥಗಿತಗೊಳಿಸಿತು ಮತ್ತು ದೇಶಾದ್ಯಂತ ಹೆಚ್ಚಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿತು.ಇದರ ಮಧ್ಯೆ, ಎಕ್ಸ್ ಬಳಕೆದಾರರು “ಬ್ರೇಕಿಂಗ್ ನ್ಯೂಸ್: ಅಲ್ ಜಜೀರಾ ಚಾನೆಲ್ ಭಾರತೀಯ ಸೇನೆ ಪಾಕಿಸ್ತಾನದ ಸಿಯಾಲ್ಕೋಟ್ ಮೇಲೆ ನಡೆಸಿದ ದಾಳಿಯ ಹೊಸ ದೃಶ್ಯಗಳನ್ನು ಬಿಡುಗಡೆ ಮಾಡಿದೆ” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ Breaking News 🚨: Al Jazeera Channel has released…

Read More

Fact Check | ಪಾಕಿಸ್ತಾನ ಸೇನೆಯು ಭಾರತದ ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದು ಸುಳ್ಳು

ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಹಸಿರು ಹುಲ್ಲುಗಾವಲು ಪ್ರದೇಶದಲ್ಲಿ ಬೆಂಕಿ ಉರಿಯುತ್ತಿರುವುದು ಕಂಡು ಬಂದಿದೆ ಮತ್ತು ದಟ್ಟವಾದ ಹೊಗೆ ಆವರಿಸಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಈ ಕ್ಲಿಪ್ ಅನ್ನು ಹಂಚಿಕೊಳ್ಳುವವರು ಪಾಕಿಸ್ತಾನ ಸೇನೆಯು ಭಾರತೀಯ ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಪಾಕಿಸ್ತಾನಿಗಳು ಹಂಚಿಕೊಂಡಿದ್ದು, ಭಾರತದ ದಾಳಿಗೆ…

Read More