Fact Check | ಭಾರತದಲ್ಲಿ ಮುಸ್ಲಿಂ ವ್ಯಕ್ತಿಯ ಮೇಲೆ ದಾಳಿ ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಸಾಮಾಜಿಕ ಮಾಧ್ಯಮದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ವಿಡಿಯೋ ಹೆಚ್ಚು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಮುಸ್ಲಿಂ ವ್ಯಕ್ತಿ ಕುರ್ಚಿಯ ಮೇಲೆ ಕುಳಿತಿರುವುದನ್ನು ಕಾಣಬಹುದು ಮತ್ತು ಒಬ್ಬ ವ್ಯಕ್ತಿ ಬಂದು ಅವನ ಗಡ್ಡವನ್ನು ಎಳೆದು ಹೊಡೆಯಲು ಪ್ರಾರಂಭಿಸುತ್ತಾನೆ. ಈ ವಿಡಿಯೋ ಹಂಚಿಕೊಂಡಿರುವ ಹಲವರು ಈ ಘಟನೆ ಭಾರತದಲ್ಲಿ ನಡೆದಿದೆ, ಹಲ್ಲೆ ಮಾಡಿದವರು ಹಿಂದೂ ವ್ಯಕ್ತಿ ಭಾರತದಲ್ಲಿ ಅಲ್ಪ ಸಂಖ್ಯಾತರು ಭಯದಿಂದ ಬದುಕುತ್ತಿದ್ದಾರೆ ಎಂದು ಭಾರತದ ವಿರುದ್ಧ ಹಲವು ಕಿಡಿಗೇಡಿಗಳು ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದನ್ನು ನಿಜವೆಂದು ಭಾವಿಸಿ ಹಲವು ವಿದೇಶಿ ಖಾತೆಗಳು ಹಂಚಿಕೊಂಡಿವೆ….

Read More

Fact Check | ಉರ್ದು ಭಾಷೆಗೆ ಮಾತ್ರ ಕರ್ನಾಟಕ ಸರ್ಕಾರ 100 ಕೋಟಿ ರೂ. ಮೀಸಲಿಟ್ಟಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಸೇರಿದಂತೆ ವಿವಿಧ ಬಲಪಂಥೀಯ ಬೆಂಬಲಿಗರು ಪೋಸ್ಟ್ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರಲ್ಲಿ ಕರ್ನಾಟಕ ಸರ್ಕಾರ 2025-26ರ ಬಜೆಟ್‌ನಲ್ಲಿ ಭಾಷೆಯ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಿರುವ ಲೆಕ್ಕವನ್ನು ಉಲ್ಲೇಖಿಸಲಾಗಿದೆ. ಇದರ ಪ್ರಕಾರ ಉರ್ದು ಭಾಷೆಗೆ 100 ಕೋಟಿ ಅನುದಾನ ನೀಡಲಾಗಿದ್ದು, ಉಳಿದ ಇತರೆ ಭಾಷೆಗಳಿಗೆ ಕೇವಲ 32 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಲಾಗಿದೆ. ಇದನ್ನು ನೋಡಿದ ಹಲವು ಮಂದಿ ನಿಜವೆಂದು ಭಾವಿಸಿದ್ದಾರೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಉರ್ದು ಪ್ರಿಯ ಸಿದ್ದರಾಮಯ್ಯ…

Read More

Fact Check | ನ್ಯೂಜಿಲೆಂಡ್ ಸರ್ಕಾರ ಎಲ್ಲಾ ಮಸೀದಿಗಳನ್ನು ಮುಚ್ಚಲು ಆದೇಶಿಸಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ನ್ಯೂಜಿಲೆಂಡ್ ಸರ್ಕಾರ ಎಲ್ಲಾ ಮಸೀದಿಗಳನ್ನು ಮುಚ್ಚಲು ಆದೇಶಿಸಿದೆ ಎಂಬ ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಈ ಸುದ್ದಿಯನ್ನು ಕೆಲವು ಗುಂಪುಗಳು, ವಿಶೇಷವಾಗಿ ಬಲಪಂಥೀಯ ರಾಜಕೀಯ ಒಲವು ಹೊಂದಿರುವ ಫೇಸ್‌ಬುಕ್ ಗುಂಪುಗಳು ಮತ್ತು ವಾಟ್ಸಾಪ್ ಮೂಲಕ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶದ ಜೊತೆಗೆ ವಿದೇಶಗಳು ಮಸೀದಿಗಳನ್ನು ಮುಚ್ಚಲು ಕಾನೂನನ್ನು ಜಾರಿಗೆ ತರುತ್ತವೆ, ಆದರೆ ಭಾರತದಲ್ಲಿ ಮಾತ್ರ ಇದು ಸಾಧ್ಯವಿಲ್ಲ ಎಂದು ಹಲವರು ಬರೆದುಕೊಳ್ಳುತ್ತಿದ್ದಾರೆ. ಈ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ, ವಿಶೇಷವಾಗಿ ಧಾರ್ಮಿಕ ಸಮುದಾಯಗಳ ನಡುವೆ…

Read More

Fact Check | ಮುಸ್ಲಿಂ ಮಹಿಳೆ ತನ್ನ ಮಾವನನ್ನು ಮದುವೆಯಾಗಲು ಬಯಸಿದ್ದಾಳೆ ಎಂದು ನಾಟಕೀಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಪತಿಯಿಂದ ವಿಚ್ಛೇದವನ್ನು ಪಡೆದ ನಂತರ ಮುಸ್ಲಿಂ ಮಹಿಳೆ ಒಬ್ಬರು ಬುರ್ಖಾ ಧರಿಸಿ ತನ್ನ ಮಾವನನ್ನೇ ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವಿಡಿಯೋ ಒಂದನ್ನು ವ್ಯಾಪಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋಗೆ ವಿವಿಧ ರೀತಿಯಾದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಸಾಕಷ್ಟು ಮಂದಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಬರಿತ ಬರಹಗಳನ್ನು ಕೂಡ ಬರೆಯುತ್ತಿದ್ದಾರೆ. ವೈರಲ್ ವಿಡಿಯೋದಲ್ಲಿ ಕೂಡ ಬುರ್ಖಾ ಧರಿಸಿರುವ ಮಹಿಳೆಯೊಬ್ಬರು ತಾನು ತನ್ನ ಮಾವನನ್ನು ಮದುವೆಯಾಗುವ ಆಸೆ ಹೊಂದಿರುವುದಾಗಿ ಹೇಳುತ್ತಿರುವುದು ಕಂಡುಬಂದಿದೆ. ಹೀಗಾಗಿ ಇದನ್ನು ನಿಜವೆಂದು ಭಾವಿಸಿರುವ…

Read More

Fact Check | ಭಾರತ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದ ನಂತರ ಕಿಶನ್‌ಗಂಗಾ ಅಣೆಕಟ್ಟು ಕುಸಿದಿದೆ ಎಂಬುದು ಸುಳ್ಳು

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿತು ಮತ್ತು ಪಾಕಿಸ್ತಾನಕ್ಕೆ, ವಿಶೇಷವಾಗಿ ಚೆನಾಬ್ ನದಿಯಿಂದ ನೀರಿನ ಹರಿವನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಂಡಿತು. ಮಾಧ್ಯಮ ವರದಿಗಳ ಪ್ರಕಾರ, ಭಾರತವು ಚೆನಾಬ್‌ನಲ್ಲಿರುವ ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಡುವುದನ್ನು ನಿಲ್ಲಿಸಿದೆ. ಝೀಲಂ ನದಿಯ ಕಿಶನ್‌ಗಂಗಾ ಯೋಜನೆಯಿಂದ ಹೊರಹರಿವುಗಳನ್ನು ಕ್ರಮೇಣ ಕಡಿಮೆ ಮಾಡಲು ಸಹ ತಯಾರಿ ನಡೆಸುತ್ತಿದೆ. ಈ ಸಂದರ್ಭದಲ್ಲಿ, ಅಣೆಕಟ್ಟು ಕುಸಿತದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಭಾರತ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿದ…

Read More

Fact Check | ಆಪರೇಷನ್ ಸಿಂಧೂರ್‌ ವೇಳೆ ಪಾಕಿಸ್ತಾನ ಭಾರತದ ರಫೇಲ್‌ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂಬುದು ಸುಳ್ಳು

ಭಾರತೀಯ ಸಶಸ್ತ್ರ ಪಡೆಗಳು 7 ಮೇ 2025 ರಂದು ‘ ಆಪರೇಷನ್ ಸಿಂಧೂರ್ ‘ ಹೆಸರಿನಲ್ಲಿ ಸೇನಾ ಕಾರ್ಯಚರಣೆ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ. ಒಟ್ಟು ಒಂಭತ್ತು ಸ್ಥಳಗಳನ್ನು ಗುರಿಯಾಗಿರಿಸಲಾಗಿತ್ತು. ಈ ದಾಳಿಯಲ್ಲಿ ಸುಮಾರು 90 ಕ್ಕೂ ಅಧಿಕ ಉಗ್ರರನ್ನು ಕೊಲ್ಲಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದರ ಮಧ್ಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೆಲ ಪಾಕಿಸ್ತಾನಿ ಬಳಕೆದಾರರು ಆಪರೇಷನ್‌ ಸಿಂಧೂರ್‌ ವೇಳೆ ಭಾರತದ ರಫೇಲ್‌ ಯುದ್ಧ ವಿಮಾನವನ್ನು…

Read More

Fact Check | ದೇವಾಲಯದ ಬಳಿ ಹೂವುಗಳಿಗೆ ಉಗುಳುತ್ತಿರುವ ಮುಸ್ಲಿಂ ಎಂದು ಪಾಕಿಸ್ತಾನದ ವಿಡಿಯೋ ಹಂಚಿಕೆ

ಮುಸ್ಲಿಂ ಬಾಲಕನೊಬ್ಬ ದೇವಾಲಯದ ಬಳಿ ಹೂವು ಮಾರಾಟ ಮಾಡುತ್ತಿದ್ದಾನೆ ಆತ ಹೂಗಳಿಗೆ ಉಗುಳಿ ಮಾರುತಿದ್ದು, ಈ ಹೂಗಳನ್ನು ಖರೀದಿಸಿದ ಹಿಂದೂ ಭಕ್ತರು ಇದನ್ನೇ ದೇವರ ಅರ್ಚನೆಗೆಂದು ತೆಗೆದುಕೊಂಡು ಹೋಗುತ್ತಾರೆ. ಇನ್ನು ಕೆಲವರು ದೇವರ ವಿಗ್ರಹದ ಮೇಲೆ ಈ ಹೂಗಳನ್ನು ಇಡುತ್ತಾರೆ. ಇದು ಹಿಂದೂ ದೇವಾಲಯಗಳನ್ನು ಅಪವಿತ್ರಗೊಳಿಸುವ ಒಂದು ಪದ್ದತಿಯಾಗಿದೆ. ಈ ರೀತಿಯ ಹೂವಿನ ಜಿಹಾದ್ ಅನ್ನು ಪ್ರತಿಯೊಬ್ಬ ಹಿಂದೂಗಳು ತಡೆಯಬೇಕಾಗಿದೆ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಬೈಕುಗಳ ನಡುವೆ ಬಾಲಕನೊಬ್ಬ…

Read More

Fact Check | ಪಾಕಿಸ್ತಾನದ ವಿರುದ್ಧ ಪೋಸ್ಟ್ ಮಾಡಿದ ಕಾರಣಕ್ಕಾಗಿ ಹಿಂದೂ ಕುಟುಂಬದ ಮೇಲೆ ಹಲ್ಲೆ ನಡೆದಿದೆ ಎಂಬುದು ಸುಳ್ಳು

ಪಹಲ್ಗಾಮ್‌ ದಾಳಿಯ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಭಾರತ ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಪುಣೆಯ ಭವಾನಿ ಪೇಟ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಕುಟುಂಬವನ್ನು ಮುಸಲ್ಮಾನರು ಥಳಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. A Hindu family was attacked in…

Read More

Fact Check | ಪಹಲ್ಗಾಮ್ ದಾಳಿಯ ಬಂಧಿತ ಭಯೋತ್ಪಾದಕ RSS ನಿಂದ ಹಣ ಪಡೆದುಕೊಂಡಿದ್ದ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಇಬ್ಬರು ಅರೆಸೈನಿಕ ಸಿಬ್ಬಂದಿಯ ವಶದಲ್ಲಿರುವ ಗಡ್ಡಧಾರಿ ವ್ಯಕ್ತಿಯನ್ನು ತೋರಿಸುವ ಚಿತ್ರವೊಂದು ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಸೆರೆಹಿಡಿಯಲಾದ ‘ಕಾಶ್ಮೀರ ಭಯೋತ್ಪಾದಕ’ ಆರೆಸ್ಸೆಸ್‌ನಿಂದ ಶಸ್ತ್ರಾಸ್ತ್ರಗಳು ಮತ್ತು ಹಣಕಾಸು ಪಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಬರೆದುಕೊಳ್ಳಲಾಗಿದೆ. ಇನ್ನೂ ಕೆಲವರು ಆರ್‌ಎಸ್‌ಎಸ್‌ ಈ ಭಯೋತ್ಪಾದಕರ ಹಿಂದಿರುವ ಉದ್ದೇಶ, ಕೋಮುದ್ವೇಷವೇ ಕಾರಣವಾಗಿದೆ ಎಂದು ಬರೆದುಕೊಂಡಿದ್ದಾರೆ. ಕೆಲವು ಪಾಕಿಸ್ತಾನಿ ಖಾತೆಗಳಲ್ಲಿ ಕೂಡ ಈ ಫೋಟೋವನ್ನು ಹಂಚಿಕೊಂಡು ಆರ್‌ಎಸ್‌ಎಸ್‌ನಿಂದ ಭಯೋತ್ಪಾದಕರಿಗೆ ಹಣ ನೀಡಲಾಗಿದೆ…

Read More

Fact Check | ಕೇರಳದಲ್ಲಿ ನಡೆದ ಅಪಘಾತದ ವಿಡಿಯೋವನ್ನು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಕಾರು ಅಪಘಾತದ ವೀಡಿಯೊ ಕ್ಲಿಪ್ ಅನ್ನು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದರಲ್ಲಿ ಮಗುವಿನೊಂದಿಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆಯುವುದನ್ನು ಕಾಣಬಹುದು. ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ ಮತ್ತು ಕಾರು ಚಾಲಕ ಮಹಿಳೆ ಬುರ್ಖಾ ಧರಿಸಿದ್ದಕ್ಕಾಗಿ ಅಪಘಾತ ಮಾಡಿದ್ದಾನೆ, ಕೇರಳದಲ್ಲಿ ಈಗ ಮುಸ್ಲಿಂ ವಿರೋಧಿ ಮನಸ್ಥಿತಿ ಆರಂಭವಾಗುತ್ತಿದೆ ಎಂದು ಹಲವರು ಮಂದಿ ಪೋಸ್ಟ್‌ ಮಾಡುತ್ತಿದ್ದಾರೆ. ವೈರಲ್‌ ವಿಡಿಯೋದಲ್ಲಿ ಭೀಕರ ಅಪಘಾತವಾಗುವ ದೃಶ್ಯಗಳು ಕಂಡು ಬಂದಿದ್ದು, ಇದನ್ನು ನೋಡಿದ ಹಲವು ಮಂದಿ ಪೋಸ್ಟ್‌ ಅನ್ನು…

Read More