Fact Check | ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಚಿತ್ರ ಎಂದು ಎಡಿಟೆಡ್‌ ಫೋಟೋ ಹಂಚಿಕೆ

ನಟ ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ತೆಗೆದ ಚಿತ್ರ ಎಂದು ಸಾಮಾಜಿಕ ಮಾಧ್ಯಮದಲ್ಲಿ ಫೋಟೋವೊಂದು ಹೆಚ್ಚು ವೈರಲ್ ಆಗುತ್ತಿದೆ. ಚಿತ್ರದಲ್ಲಿ, ಸೈಫ್ ಅಲಿ ಖಾನ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವುದನ್ನು ಕಾಣಬಹುದು. ಈಗಾಗಲೇ ಸೈಫ್‌ ಅಲಿ ಖಾನ್‌ ಅವರು ಆಸ್ಪತ್ರೆಯಿಂದ ಚಿಕಿತ್ಸೆ ಪೂರ್ಣಗೊಳಿಸಿ ತೆರಳಿದ್ದಾರೆ ಎಂದು ವರದಿಗಳು ಕಂಡು ಬಂದಿವೆ. ಇದರ ನಡುವೆ ಈ ಫೋಟೋ ಕೂಡ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತಿದೆ. ಇಂತಹ ಸ್ಥಿತಿಯಲ್ಲಿರುವ ಸೈಫ್‌ ಅಲಿ ಖಾನ್‌ ಅವರು ಹೇಗೆ ಡಿಸ್ಚಾರ್ಜ್‌ ಆಗಿದ್ದಾರೆ…

Read More

Fact Check | ಚಂದ್ರ ಆರ್ಯ ಅವರು ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲಿ ಮಾತನಾಡಿದ್ದಾರೆ ಎಂಬುದು ಸುಳ್ಳು

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ತಮ್ಮ ಹುದ್ದೆಗೆ ಹಠಾತ್ ರಾಜೀನಾಮೆ ನೀಡಿದ ಕಾರಣ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಈಗಾಗಲೇ ಹಲವು ಪ್ರಮುಖ ನಾಯಕರು ಪ್ರಧಾನಿ ರೇಸ್‌ನಲ್ಲಿದ್ದು, ಕನ್ನಡಿಗ ಚಂದ್ರ ಆರ್ಯ ಕೂಡ ಕೆನಡಾ ಪ್ರಧಾನಿ ಹುದ್ದೆಯ ಅಕಾಂಕ್ಷಿಯಾಗಿದ್ದಾರೆ. ಈ ಕಾರಣದಿಂದಾಗಿದೆ ಅವರು ನಾಮಪತ್ರ ಸಲ್ಲಿಕೆ ಕೂಡ ಮಾಡಿದ್ದಾರೆ. ಇದರ ಬೆನ್ನಲ್ಲೇ ಚಂದ್ರ ಆರ್ಯ ಅವರು ನಾಮಪತ್ರ ಸಲ್ಲಿಸಿದ ನಂತರ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ ಎಂದು ಕೆಲ ಸುದ್ದಿ ಸಂಸ್ಥೆಗಳು…

Read More

Fact Check | ಲಾಸ್‌ ಏಂಜಲೀಸ್‌ ಬೆಂಕಿಯಲ್ಲಿ ಕೇವಲ ಒಂದು ಚರ್ಚ್‌ ಮಾತ್ರ ಸುಟ್ಟುಹೋಗದೆ ಉಳಿದಿದೆ ಎಂಬುದು ಸುಳ್ಳು

ಲಾಸ್‌ ಏಂಜಲೀಸ್‌ನಲ್ಲಿ ನಡೆದ ಭೀಕರ ಅಗ್ನಿ ದುರಂತ ಇಡೀ ಜಗತ್ತಿಗೆ ಆಘಾತವನ್ನು ಉಂಟುಮಾಡಿದೆ. ಅಮೆರಿಕದ ಕ್ಯಾಲಿಫೋರ್ನಿಯ ರಾಜ್ಯದಲ್ಲಿ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶ ಆಗಿದೆ. ಹಲವಾರು ಮಂದಿ ನಿರಾಶ್ರಿತರಾಗಿದ್ದಾರೆ. ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಇದಕ್ಕೆ ಸಂಬಂಧ ಪಟ್ಟ ಹಲವು ವಿಡಿಯೋಗಳು ವೈರಲ್ ಆಗುತ್ತಿವೆ. ಈ ಹಲವು ವಿಡಿಯೋಗಳಲ್ಲಿ ಒಂದು ವಿಡಿಯೋ ಬಹಳ ದೊಡ್ಡ ಮಟ್ಟದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವೈರಲ್ ವಿಡಿಯೋದಲ್ಲಿ ಸಂಪೂರ್ಣ ಊರೇ ಬೆಂಕಿಗೆ ಆಹುತಿಯಾದರೂ ಒಂದು ಚರ್ಚ್ ಮಾತ್ರ ಸುಟ್ಟು ಹೋಗದೆ ಹಿಂದೆ ಹೇಗಿತ್ತು…

Read More

Fact Check | ರೈಲಿನಲ್ಲಿ ಕಳ್ಳತನ ಮಾಡಲು ಖರ್ಜೂರದಲ್ಲಿ ನಿದ್ರೆ ಮಾತ್ರೆ ಬೆರಸಿದ ವಿಡಿಯೋವನ್ನು ಕೋಮು ಆಯಾಮದೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಸಾಮಾಜಿಕ ಜಾಲತಾಣದಲ್ಲಿ ” ಈ ಮುಸ್ಲಿಂ ಹಲ್ಕಾ ಭೇವಾರ್ಷಿಗಳು ಮಾರಕ ರೋಗ ಬರಲು ಮತ್ತು ಮಕ್ಕಳಾಗದಂತೆ ಖರ್ಜುರದಲ್ಲಿ ಮಾತ್ರೆಗಳನ್ನು ಇಟ್ಟು ಹಿಂದೂಗಳಿಗೆ ಮಾರಾಟ ಮಾಡುತ್ತಿದ್ದವರನ್ನು ಪೊಲೀಸ್ ರವರು ಬಂಧಿಸಿದ್ದಾರೆ..ಇನ್ನಾದರೂ ಎಚೆತ್ತುಕೊಳ್ಳಿ ಈ ರಕ್ಕಸ ಸಮಾಜ ಇಡೀ ಹಿಂದೂ ಮನುಕುಲಕ್ಕೆ ಮಾರಕ ವೆಂಬುದನ್ನು ತಿಳಿಯಿರಿ.” ಎಂದು ಕೋಮು ದ್ವೇಷದೊಂದಿಗೆ ಬರೆದುಕೊಂಡು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಮತ್ತೊಂದು ಕಡೆ “ಆತ್ಮೀಯ ಸ್ನೇಹಿತರೇ ರಂಜಾನ್ ಶೀಘ್ರದಲ್ಲೇ ಬರಲಿದೆ, ರೈಲ್ವೆ ನಿಲ್ದಾಣಗಳ ಯಾವುದೇ ಮಾರಾಟಗಾರರಿಂದ ಖರ್ಜೂರವನ್ನು ತೆಗೆದುಕೊಳ್ಳಬೇಡಿ ಮತ್ತು ಅಪರಿಚಿತರು ಎಲ್ಲರಿಗೂ ಹಂಚಿಕೊಳ್ಳಿ,…

Read More

Fact Check | ಮುಸ್ಲಿಂ ದೇಶಗಳಲ್ಲಿ 9 ವರ್ಷದ ಬಾಲಕಿಯರು ಗರ್ಭಿಣಿಯಾಗುತ್ತಿದ್ದಾರೆ ಎಂಬುದು ಸುಳ್ಳು

ಪುಟ್ಟ ಬಾಲಕಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನು ಹಂಚಿಕೊಳ್ಳುವಾಗ ಹಲವು ಬಳಕೆದಾರರು ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಹುಡುಗಿಗೆ ಕೇವಲ 9 ವರ್ಷ ವಯಸ್ಸಾಗಿದೆ ಮತ್ತು ಅವಳು ಗರ್ಭಿಣಿ. ಆಕೆ ಮುಸ್ಲಿಂ ದೇಶದಲ್ಲಿ ಜನಿಸಿರುವುದೇ ಆಕೆಯ ಈ ಸ್ಥಿತಿಗೆ ಕಾರಣ. ಈಗಲಾದರು ಎಚ್ಚೆತ್ತುಕೊಳ್ಳಿ, ಮುಸಲ್ಮಾನ ದೇಶದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗಿರುವ ಈ ಹಿನಾಯ ಸಮಸ್ಯೆಗಳ ಬಗ್ಗೆ ಎಲ್ಲರಿಗೂ ಹಂಚಿಕೊಳ್ಳಿ ಎಂದು ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಶೇರ್‌ ಮಾಡಲಾಗುತ್ತಿದೆ. This girl is only 9 years old and…

Read More

Fact Check | ಮುಸ್ಲಿಂ ವ್ಯಕ್ತಿಯೊಬ್ಬ ಮಹಾ ಕುಂಭಮೇಳದ ಪೋಸ್ಟರ್‌ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬುದು ಸುಳ್ಳು

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಹಲವು ರೀತಿಯಲ್ಲಿ ಜಗತ್ತಿನ ಗಮನವನ್ನು ಸೆಳೆಯುತ್ತಿದೆ. ಇದರ ಮಧ್ಯೆ ಇದೇ ಕುಂಭಮೇಳದ ಕುರಿತು ಹಲವು ರೀತಿಯ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದೀಗ ಉತ್ತರಪ್ರದೇಶದ ರಾಯ್‌ಬರೇಲಿಯಲ್ಲಿ ಹಿಂದೂ ದೇವತೆಗಳು ಮತ್ತು ಮಹಾ ಕುಂಭಮೇಳವನ್ನು ತೋರಿಸುವ ಪೋಸ್ಟರ್‌ಗಳ ಮೇಲೆ ಮುಸ್ಲಿಂ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದಾನೆ ಎಂದು ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. रायबरेली, उत्तर प्रदेश: कट्टरपंथी युवक ने दीवार पर महाकुंभ और हिंदू देवी-देवताओं की…

Read More

Fact Check | ಹಂಗೇರಿಯನ್ ಪ್ರಧಾನಿ ವಿಕ್ಟರ್ ಓರ್ಬನ್ ಮಹಾ ಕುಂಭಮೇಳ 2025 ರಲ್ಲಿ ಭಾಗವಹಿಸಿ, ಆಟೋದಲ್ಲಿ ಪ್ರಯಾಣಿಸಿದ್ದಾರೆ ಎಂಬುದು ಸುಳ್ಳು

ಭಾರತದಲ್ಲಿ ನಡೆಯುತ್ತಿರುವ ಬೃಹತ್ ಧಾರ್ಮಿಕ ಸಭೆ ಮಹಾ ಕುಂಭಮೇಳ 2025 ಯಶಸ್ವಿಯಾಗಿ ನಡೆಯುತ್ತಿದೆ. ಇದರ ಮಧ್ಯೆ ಈ ಕುಂಭ ಮೇಳಕ್ಕೆ ಸಂಬಂಧಿಸಿದಂತೆ ಹಲವು ರೀತಿಯಾದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದೀಗ ಹಂಗೇರಿಯ ಪ್ರಧಾನಿ ವಿಕ್ಟರ್ ಓರ್ಬನ್ ಅವರು ಈ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ ಮತ್ತು ಆಟೋದಲ್ಲಿ ಓಡಾಟವನ್ನು ನಡೆಸಿದ್ದಾರೆ ಎಂದು ಹಲವರು ಬರೆದುಕೊಂಡು ಹಂಚಿಕೊಳ್ಳುತ್ತಿದ್ದಾರೆ. ಇದು ಸಾರ್ವಜನಿಕರಲ್ಲಿ ಗೊಂದಲವನ್ನು ಮೂಡಿಸಿದೆ. ಇನ್ನು ವೈರಲ್ ಫೋಟೋದಲ್ಲಿ ಕೂಡ ವಿಕ್ಟರ್ ಓರ್ಬನ್ ಅವರು ಆಟೋವಿನ ಮುಂದೆ…

Read More

Fact Check | ಅಖಿಲೇಶ್‌ ಯಾದವ್‌ ಅವರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂಬುದು ಸುಳ್ಳು

ವಿಶ್ವದ ಅತಿ ದೊಡ್ಡ ಧಾರ್ಮಿಕ ಸಭೆ ಎಂದು ಕರೆಯಲ್ಪಡುವ ಮಹಾ ಕುಂಭಮೇಳ 2025 ಪ್ರಸ್ತುತ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಲ್ಲಿ ನಡೆಯುತ್ತಿದೆ. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಈ ಮಹಾ ಕಾರ್ಯಕ್ರಮವು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮಕ್ಕೆ ಭಾರತದಾದ್ಯಂತ ಸುಮಾರು 40 ಕೋಟಿ ಭಕ್ತರು 45 ದಿನಗಳ ಕಾಲ ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗುತ್ತಿದೆ. ಇದು ಹಿಂದೂಗಳಿಗೆ ಮಹತ್ವದ ಆಧ್ಯಾತ್ಮಿಕ ಆಚರಣೆಯಾಗಿದೆ. ಇದೀಗ ಇದರಲ್ಲೂ ರಾಜಕೀಯದ ಚರ್ಚೆ ಬಹಳ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. बिना…

Read More

Fact Check | ಎಎಪಿ ನಾಯಕ ಅವಧ್ ಓಜಾ ಅವರು ಮನೀಶ್ ಸಿಸೋಡಿಯಾ ಅವರನ್ನು ಹೇಡಿ ಎಂದು ಕರೆದಿದ್ದಾರೆ ಎಂಬುದು ಸುಳ್ಳು

ಆಮ್ ಆದ್ಮಿ ಪಕ್ಷದ ನಾಯಕ ಅವಧ್‌ ಓಜಾ ಅವರು ಮುಂಬರುವ ದೆಹಲಿ ರಾಜ್ಯ ಚುನಾವಣೆಯಲ್ಲಿ ಪಟ್ಟರ್ಗಂಜ್ ಕ್ಷೇತ್ರದಲ್ಲಿ ಸ್ಪರ್ಧಿಸದಿದ್ದಕ್ಕಾಗಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಅವರನ್ನು ಹೇಡಿ ಎಂದು ಕರೆದಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಡಲಾಗುತ್ತಿದೆ. ಈ ವಿಡಿಯೋವನ್ನು ಗಮನಿಸಿದ ಸಾಕಷ್ಟು ಮಂದಿ ಆಮ್‌ ಆದ್ಮಿ ಪಕ್ಷದ ತನ್ನ ಆಂತರಿಕ ಕಲಹದ ಕಾರಣದಿಂದಾಗಿ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಬರೆದುಕೊಳ್ಳುತ್ತಿದ್ದಾರೆ. पटपड़गंज से आप-दा के प्रत्याशी अवध ओझा का…

Read More

Fact Check | ಚಿಕಾಗೋ ಧರ್ಮ ಸಮ್ಮೇಳನದಲ್ಲಿ ವಿವೇಕಾನಂದರು ಮಾಡಿದ ಭಾಷಣದ ವೀಡಿಯೊ ಎಂದು ಸಿನಿಮಾದ ದೃಶ್ಯ ಹಂಚಿಕೆ

ಅಮೆರಿಕದ ಚಿಕಾಗೋದಲ್ಲಿ 1893ರ ಸೆಪ್ಟೆಂಬರ್ 11ರಂದು ಸ್ವಾಮಿ ವಿವೇಕಾನಂದರು ವಿಶ್ವಧರ್ಮ ಸಮ್ಮೇಳನದಲ್ಲಿ ಮಾಡಿದ್ದ ಭಾಷಣದ ನಿಜವಾದ ವಿಡಿಯೋ ಲಭ್ಯವಾಗಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾಮಿ ವಿವೇಕಾನಂದರಂತೆಯೇ ವ್ಯಕ್ತಿಯೊಬ್ಬರು ಭಾಷಣ ಮಾಡುತ್ತಿರುವುದನ್ನು ನೋಡಬಹುದಾಗಿದೆ. ಈ ಭಾಷಣವು ಸ್ವಾಮಿ ವಿವೇಕಾನಂದರ ಮೂಲ ಭಾಷಣಕ್ಕೆ ಹೋಲಿಕೆಯಾಗಿದೆ. स्वामी विवेकानंद जी का दुर्लभ वीडियो…#स्वामी_विवेकानंद #VivekanandaJayanti pic.twitter.com/yu0cuKSxYS — Voice Of Gurjar (@Gurjarekta968) January 12, 2025 ಹೀಗೆ ವ್ಯಾಪಕವಾಗಿ ವೈರಲ್ ಆಗಿರುವ ವಿಡಿಯೋ…

Read More