Fact Check | “ಹಿಂದೂವಿನಂತೆ ನಟಿಸಿ ಹಿಂದೂ ಯುವತಿಯನ್ನು ಪ್ರೀತಿಸಿದ್ದ ಮುಸ್ಲಿಂ ವ್ಯಕ್ತಿ ಪೊಲೀಸ್‌ ವಶಕ್ಕೆ” ಎಂಬ ವಿಡಿಯೋ ಕಿರುಚಿತ್ರದ್ದು

ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದೆ. ಅದರಲ್ಲಿ ನೀಲಿ ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಮನೆಯಿಂದ ಓಡಿಹೋಗಲು ಯತ್ನಿಸುತ್ತಾನೆ. ಆದರೆ, ಪೊಲೀಸರು ಆತನ ಕಾಲರ್ ಹಿಡಿದು ಸೋಫಾದ ಮೇಲೆ ಕೂರಿಸುತ್ತಾರೆ. ವೀಡಿಯೊದಲ್ಲಿ ಪೊಲೀಸರ ಜೊತೆಗೆ ಬಿಳಿ ಶರ್ಟ್ ಧರಿಸಿದ ವ್ಯಕ್ತಿ ಮತ್ತು ನೀಲಿ ಕುರ್ತಾ ಧರಿಸಿದ ಮಹಿಳೆಯೂ ಕಾಣಿಸುತ್ತಾರೆ. ಹಲವು ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು, ಹಿಂದೂ ಹೆಸರು ಹೇಳಿಕೊಂಡು ಹಿಂದೂ ಹುಡುಗಿಯನ್ನು ಪ್ರೀತಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ಹಂಚಿಕೊಳ್ಳುತ್ತಿದ್ದಾರೆ….

Read More

Fact Check | ಇಂದೋರ್‌ನಲ್ಲಿ ರಸ್ತೆಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ನೀರು ಸುರಿಯಲಾಗಿಲ್ಲ

ಭಾರತ ಸರ್ಕಾರವು ಇತ್ತೀಚೆಗೆ ‘ಸ್ವಚ್ಛ ಸರ್ವೇಕ್ಷಣ್ 2024-25’ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಇಂದೋರ್ ನಗರವು ಮತ್ತೆ ದೇಶದ ಅತ್ಯಂತ ಸ್ವಚ್ಛ ನಗರ ಎಂಬ ಗೌರವಕ್ಕೆ ಭಾಜನವಾಗಿದೆ. ಈ ಸುದ್ದಿಯ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ರಸ್ತೆಯ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವ ವ್ಯಕ್ತಿಯ ಮೇಲೆ ಟ್ಯಾಂಕರ್‌ನಿಂದ ನೀರು ಸಿಂಪಡಿಸುವ ದೃಶ್ಯ ಕಾಣಿಸುತ್ತದೆ. ಈ ಘಟನೆ ಇಂದೋರ್‌ನಲ್ಲಿ ನಡೆದಿದೆ ಎಂಬ ಆರೋಪದೊಂದಿಗೆ ಹಲವರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಹಲವರು…

Read More

Fact Check | ಚಂದ್ರಶೇಖರ್‌ ಅಜಾದ್‌ ಜೈಲಿನಲ್ಲಿದ್ದರು ಮತ್ತು ಅವರಿಗೆ ನೆಹರು, ಗಾಂಧಿ ನೆರವು ನೀಡಲಿಲ್ಲ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ಚಂದ್ರಶೇಖರ ಆಜಾದ್‌ಗೆ ಸಂಬಂಧಿಸಿದ ಒಂದು ಹೇಳಿಕೆ ವೈರಲ್ ಆಗುತ್ತಿದೆ. ಈ ಹೇಳಿಕೆಯ ಪ್ರಕಾರ, “ಚಂದ್ರಶೇಖರ ಆಜಾದ್ ವಿಚಾರಣೆ ಎದುರಿಸುತ್ತಿದ್ದಾಗ, ಕಾನೂನು ಸಹಾಯಕ್ಕಾಗಿ ಮೋತಿಲಾಲ್ ನೆಹರು ಅವರನ್ನು ಸಂಪರ್ಕಿಸಿದರು, ಆದರೆ ನೆಹರು ಸಹಾಯ ನೀಡಲು ನಿರಾಕರಿಸಿದರು. ಇದಲ್ಲದೆ, ಮಹಾತ್ಮ ಗಾಂಧಿಯವರು ಆಜಾದ್ ಮತ್ತು ಅವರ ಕ್ರಾಂತಿಕಾರಿಗಳ ಹೋರಾಟವನ್ನು ‘ಹಿಂಸಾತ್ಮಕ’ ಎಂದು ಖಂಡಿಸಿದ್ದರು. ಆಲ್ಫ್ರೆಡ್ ಪಾರ್ಕ್‌ನಲ್ಲಿ ಬ್ರಿಟಿಷ್ ಪೊಲೀಸರಿಂದ ಸುತ್ತುವರೆಯಲ್ಪಟ್ಟಾಗ ಕಾಂಗ್ರೆಸ್‌ನಿಂದ ಯಾವುದೇ ಬೆಂಬಲ ಇಲ್ಲದೆ ಆಜಾದ್ ಹುತಾತ್ಮರಾದರು” ಎಂದು ಆರೋಪಿಸಲಾಗಿದೆ. ಈ ಪೋಸ್ಟ್‌ಗಳು ಆಜಾದ್‌ರನ್ನು ಕಾಂಗ್ರೆಸ್…

Read More

Fact Check | ಕೇಂದ್ರ ಸರ್ಕಾರವೇ ಒತ್ತಡ ಹೇರಿ ಉಪರಾಷ್ಟ್ರಪತಿ ಅವರಿಂದ ರಾಜೀನಾಮೆ ಪಡೆದಿದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ

ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಒಂದು ಹೇಳಿಕೆ ವೈರಲ್ ಆಗುತ್ತಿದೆ. ಈ ಹೇಳಿಕೆಯ ಪ್ರಕಾರ, “ಆಪರೇಷನ್ ಸಿಂಧೂರ್‌ನಲ್ಲಿ ಭಾರತಕ್ಕೆ ಹಿನ್ನಡೆಯಾಗಿದೆ. ಭಾರತಕ್ಕೆ ಜಾಗತಿಕ ಮುಜುಗರ ಮತ್ತು ದೇಶದಲ್ಲಿ ರಾಜಕೀಯ ಕಂಪನಕ್ಕೆ ಕೂಡ ಇದು ಕಾರಣವಾಗಿದೆ, ಇದರಿಂದಾಗಿ ಜಗದೀಪ್ ಧನಕರ್ ಸ್ವಪಕ್ಷದ ವಿರುದ್ಧ ಅಸಮಾಧಾನವನ್ನು ಹೊಂದಿದ್ದರು, ಹೀಗಾಗಿ ವಿಪಕ್ಷಗಳಿಗೆ ಈ ಕುರಿತು ಸಂಸತ್ತಿನಲ್ಲಿ ಹೆಚ್ಚು ಅವಧಿಗಳ ಕಾಲ ಚರ್ಚಿಸಲು ಅವಕಾಶ ನೀಡಿದ್ದರು, ಇದರಿಂದ ಅವರ ಪಕ್ಷವೇ ಧನಕರ್‌ ಅವರ ರಾಜೀನಾಮೆಗೆ ಒತ್ತಾಯಿಸಿತು”…

Read More

Fact Check | ಉನ್ನಾವೋದಲ್ಲಿ ಯುವತಿಗೆ ಕಿರುಕುಳ ನೀಡಿ ಏಟು ತಿಂದ ಯುವಕ ಮುಸ್ಲಿಂ ಸಮುದಾಯದವನಲ್ಲ

ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವ್ಯಾಪಕವಾಗಿ ಹಂಚಿಕೊಳ್ಳಲ್ಪಟ್ಟಿದೆ. ಈ ವಿಡಿಯೋದಲ್ಲಿ “ಉನ್ನಾವೋದಲ್ಲಿ ಹಲವಾರು ದಿನಗಳಿಂದ ಕಿರುಕುಳ ನೀಡುತ್ತಿದ್ದ ಅಲೀಮ್ ಶೇಖ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಸಾರ್ವಜನಿಕ ರಸ್ತೆಯಲ್ಲಿ ಹುಡುಗಿಯೊಬ್ಬಳು ಥಳಿಸುತ್ತಿರುವುದು” ಎಂದು ಕೋಮು ಆಯಾಮದೊಂದಿಗೆ ದಾಖಲಿಸಲಾಗಿದೆ. ಈ ವಿಡಿಯೋವನ್ನು ಹಲವರು  ಮಾಹಿತಿಯೊಂದಿಗೆ ಹಂಚಿಕೊಂಡಿದ್ದಾರೆ, ಇದರಲ್ಲಿ ಆರೋಪಿಯನ್ನು  ಮುಸ್ಲಿಂ ವ್ಯಕ್ತಿಯೆಂದು ಗುರುತಿಸಲಾಗಿದೆ. ವಿಡಿಯೋ ನೋಡಿದ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕಿಡಿ ಕಾರಿದ್ದಾರೆ. ಇದರ ಜೊತೆಗೆ ಇನ್ನೂ ಕೆಲವರು ಲವ್‌ ಜಿಹಾದ್‌ ಹೀಗೆಯೇ ಆರಂಭಗೊಳ್ಳುವ ಮೊದಲು…

Read More

Fact Check | ಅಮೆರಿಕದ ಸುಪ್ರೀಂಕೋರ್ಟ್‌ ಟ್ರಂಪ್‌ ರನ್ನು ಗಡಿಪಾರು ಮಾಡಲಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ಒಂದು ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಇದರ ಪ್ರಕಾರ, ಅಮೆರಿಕದ ಸುಪ್ರೀಂಕೋರ್ಟ್, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸಂಬಂಧಿಸಿದಂತೆ ಆದೇಶವೊಂದನ್ನು ಹೊರಡಿಸಿದೆ ಎಂದು ಹೇಳಲಾಗಿದೆ. ಈ ಆದೇಶದಲ್ಲಿ, “ಟ್ರಂಪ್‌ ಅವರ ಪೂರ್ವಜರು ಅಮೆರಿಕಕ್ಕೆ ಅನಧಿಕೃತವಾಗಿ ಪ್ರವೇಶಿಸಿದ್ದರಿಂದ, ಟ್ರಂಪ್ ಕುಟುಂಬವು ದೇಶವನ್ನು ತೊರೆಯಬೇಕು ಮತ್ತು ಡೊನಾಲ್ಡ್ ಟ್ರಂಪ್ ತಕ್ಷಣವೇ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ತಿಳಿಸಲಾಗಿದೆ ಎಂದು ಹಲವರು ಹಂಚಿಕೊಳ್ಳುತ್ತಿದ್ದಾರೆ. ಈ ಪೋಸ್ಟ್‌ಗಳನ್ನು ಆಧಾರಿಸಿ ಹಲವರು ವೈರಲ್‌ ವಿಡಿಯೋ ಪೋಸ್ಟ್‌ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ…

Read More

Fact Check | ಮುಸ್ಲಿಮರು ಉದಯಪುರ್ ಫೈಲ್ಸ್ ಕಲಾವಿದನ ಮನೆಯನ್ನು ಸುಟ್ಟು ಹಾಕಿದ್ದಾರೆ ಎಂಬುದು ಸುಳ್ಳು

2022 ರಲ್ಲಿ ಉದಯಪುರದ ದರ್ಜಿ ಕನ್ಹಯ್ಯಾ ಲಾಲ್ ಅವರ ಹತ್ಯೆಯನ್ನು ಆಧರಿಸಿದ ಉದಯಪುರ ಫೈಲ್ಸ್ ಎಂಬ ಹೆಸರಿನ ಚಲನಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿತ್ತು ಆದರೆ ದೆಹಲಿ ಹೈಕೋರ್ಟ್ ಜುಲೈ 10, 2025 ರಂದು ಅದನ್ನು ತಡೆಹಿಡಿದಿದೆ. ಈ ಸಂದರ್ಭದಲ್ಲಿ, ಜನರ ಗುಂಪೊಂದು ಮನೆಗೆ ಬೆಂಕಿ ಹಚ್ಚುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಉದಯಪುರ ಫೈಲ್ಸ್ ಚಿತ್ರದಲ್ಲಿ ಭಾಗಿಯಾಗಿರುವ ಕಲಾವಿದನ ಮನೆಯನ್ನು ಮುಸ್ಲಿಮರು ಸುಟ್ಟುಹಾಕಿದ್ದಾರೆ ಎಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಇದನ್ನು ನಿಜವೆಂದು ಭಾವಿಸಿ ಮುಸ್ಲಿಂ ಸಮುದಾಯದ ವಿರುದ್ಧ…

Read More

Fact Check | ಉತ್ತರಪ್ರದೇಶದಲ್ಲಿ ಮೊಹರಂ ಮೆರವಣಿಗೆ ವೇಳೆ ಪಾಕ್‌ ಪರ ಘೋಷಣೆ ಕೂಗಲಾಗಿದೆ ಎಂಬುದು ಸುಳ್ಳು

ಮೊಹರಂ ಹಬ್ಬದ ಸಂದರ್ಭದಲ್ಲಿ, ಜುಲೈ 06, 2025 ರಂದು ದೇಶದ ವಿವಿಧ ಭಾಗಗಳಲ್ಲಿ ಮೆರವಣಿಗೆಗಳು ನಡೆದವು. ಈ ಸಂದರ್ಭದಲ್ಲಿ, ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯಲ್ಲಿ ನಡೆದ ಮೊಹರಂ ಮೆರವಣಿಗೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ.  ಇದನ್ನು ನಿಜವೆಂದು ನಂಬಿರುವ ಹಲವರು ಕೋಮು ಬರಹಗಳನ್ನು ಬರೆದುಕೊಂಡು ಮುಸಲ್ಮಾನ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಲಾಗುತ್ತಿದೆ. ಇನ್ನೂ ಕೆಲವರು ಉತ್ತರಪ್ರದೇಶದ ಪೊಲೀಸ್‌ ಇಲಾಖೆ ಈ ಬಗ್ಗೆ ಯಾವುದೇ ರೀತಿಯಾದ…

Read More

Fact Check | ಹಿಂದೂ ಮಹಿಳೆಯೊಬ್ಬರು ಮೂವರು ಸಹೋದರರನ್ನು ಮದುವೆಯಾಗಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯೊಬ್ಬರ ವಿಡಿಯೋ  ವೈರಲ್ ಆಗುತ್ತಿದೆ. ಒಂದೇ ಕುಟುಂಬದ ಮೂವರು ಸಹೋದರರು ಒಂದೇ ಮಹಿಳೆಯನ್ನು ಮದುವೆಯಾಗಿದ್ದಾರೆ ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಕೂಡ ಮಹಿಳೆ ಮೂವರು ಪುರುಷರೊಂದಿಗೆ ಮದುವೆ ಆಗುತ್ತಿರುವ ರೀತಿ ಕಂಡು ಬಂದಿದೆ. ಹೀಗಾಗಿ ಇದನ್ನು ನಿಜವೆಂದು ಭಾವಿಸಿರುವ ಹಲವರು ವೈರಲ್‌ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಇದಕ್ಕೆ ಕೋಮು ನಿರೂಪಣೆಯನ್ನು ನೀಡಿದ್ದು, ಹಿಂದೂ ಸಮುದಾಯದಲ್ಲಿ ಇದೊಂದು ಅಚ್ಚರಿಯ ಬೆಳವಣಿಗೆ, ಇದು ಅಂಧಭಕ್ತಿಯ ಫಲ ಎಂದೆಲ್ಲ ಬರೆದುಕೊಂಡು ಹಿಂದೂ ಸಮುದಾಯದಲ್ಲಿನ…

Read More

Fact Check | ಇಸ್ರೇಲಿನ ಜನರು ಇರಾನ್‌ ಬಳಿ ಕ್ಷಮೆಯಾಚಿಸಿ, ಯುದ್ಧ ನಿಲ್ಲಿಸುವಂತೆ ತಮ್ಮ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂಬುದು ಸುಳ್ಳು

ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಘ್ನತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಇದೀಗ ಅಮೆರಿಕ ಇರಾನ್ ವಿರುದ್ಧ ವಾಯುದಾಳಿಯನ್ನು ನಡೆಸಿರುವುದು ಕೂಡ ಯುದ್ಧದ ತೀವ್ರತೆಯನ್ನು ಹೆಚ್ಚು ಮಾಡಿದೆ. ಹೀಗಿರುವಾಗ ಇಸ್ರೇಲಿನ ಜನರೇ ಇರಾನ್ ಬಳಿ ಕ್ಷಮೆಯಾಚನೆ ಮಾಡಿ, ಬೃಹತ್ ಪ್ರತಿಭಟನೆಯನ್ನು ನಡೆಸಿ, ತಮ್ಮ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದ್ದಾರೆ ಮತ್ತು ಯುದ್ಧ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಕೂಡ ಇಸ್ರೇಲಿನ ಬಾವುಟವನ್ನು ಹಿಡಿದು ಇಸ್ರೇಲಿನ ಚಿನ್ಹೆಯನ್ನು ಹೊಂದಿರುವ…

Read More